ಅಂಬಾನಿಯನ್ನು ಹಿಂದಿಕ್ಕಿದ ಝಾಂಗ್ ಶಾನ್ಷನ್: ಏಷ್ಯಾದ ನಂಬರ್ 1 ಶ್ರೀಮಂತ
ನವದೆಹಲಿ, ಡಿಸೆಂಬರ್ 31: ದೀರ್ಘ ಸಮಯದವರೆಗೆ ಏಷ್ಯಾದ ಶ್ರೀಮಂತ ಪಟ್ಟದಲ್ಲಿದ್ದ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಏಷ್ಯಾದ ಬಹುದೊಡ್ಡ ಉದ್ಯಮಿಗಳಾದ ಜಾಕ್ ಮಾ, ಅಂಬಾನಿಯನ್ನು ಹಿಂದಿಕ್ಕಿ "ಲೋನ್ ವುಲ್ಫ್" ಖ್ಯಾತಿಯ ಝಾಂಗ್ ಶಾನ್ಷನ್ ಅಗ್ರಸ್ಥಾನ ಪಡೆದಿದ್ದಾರೆ.
ಬ್ಲೂಮ್ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಸೂಚ್ಯಂಕದ ಪ್ರಕಾರ ಚೀನಾದ 66 ವರ್ಷದ ಝಾಂಗ್ ಏಷ್ಯಾದ ಖ್ಯಾತ ಉದ್ಯಮಿಗಳನ್ನು ಹಿಂದಿಕ್ಕಿ ಏಷ್ಯಾದ ನಂಬರ್ ಒನ್ ಶ್ರೀಮಂತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜೊತೆಗೆ ವಿಶ್ವದ ಹನ್ನೊಂದನೇ ಅತಿದೊಡ್ಡ ಶ್ರೀಮಂತ ಎಂಬ ಸಾಧನೆ ಇವರ ಹೆಸರಿಗಿದೆ.
ಪತ್ರಿಕೋದ್ಯಮ, ಅಣಬೆ ಕೃಷಿ ಮತ್ತು ಹೆಲ್ತ್ ಕೇರ್ ಉದ್ಯಮಗಳಲ್ಲಿ ತನ್ನ ವ್ಯಾಪ್ತಿಯನ್ನು ಹೊಂದಿರುವ ಝಾಂಗ್ ಸಂಪತ್ತಿನ ನಿವ್ವಳ ಮೌಲ್ಯವು ಈ ವರ್ಷ ಬರೋಬ್ಬರಿ 70.9 ಬಿಲಿಯನ್ ಡಾಲರ್ ಏರಿಕೆಗೊಂಡು 77.8 ಬಿಲಿಯನ್ ಡಾಲರ್ಗೆ ತಲುಪಿದೆ.

ಬ್ಲೂಮ್ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ ಇತಿಹಾಸದಲ್ಲಿ ಯಾರೊಬ್ಬರೂ ಇಷ್ಟು ವೇಗವಾಗಿ ಒಂದೇ ವರ್ಷದಲ್ಲಿ ಸಂಪತ್ತನ್ನು ಇಷ್ಟರ ಮಟ್ಟಿಗೆ ಹೆಚ್ಚಿಸಿಲ್ಲ. ಈ ವರ್ಷ ಅಮೆಜಾನ್ ಜೆಫ್ ಬೇಜೋಸ್ ಮತ್ತು ಟೆಸ್ಲಾ ಸಂಸ್ಥಾಪಕ ಎಲೋನ್ ಮಸ್ಕ್ ಹೊರತುಪಡಿಸಿ ಅತಿ ಹೆಚ್ಚು ಸಂಪಾದನೆ ಮಾಡಿದ ವ್ಯಕ್ತಿ ಎನಿಸಿಕೊಂಡಿದ್ದಾರೆ.
ಝಾಂಗ್ ಯಾವುದೇ ರಾಜಕೀಯದಲ್ಲಿ ಭಾಗಿಯಾಗಿಲ್ಲ ಮತ್ತು ಅವರ ವ್ಯಾಪಾರ ಹಿತಾಸಕ್ತಿಗಳು ಆಸ್ತಿ ಉದ್ಯಮವು ಇತರ ಯಾವುದೇ ಶ್ರೀಮಂತ ಕುಟುಂಬಗಳೊಂದಿಗೆ ಸಂಪರ್ಕ ಹೊಂದಿಲ್ಲ. ಅದಕ್ಕಾಗಿಯೇ ಅವರನ್ನು ಸ್ಥಳೀಯವಾಗಿ "ಲೋನ್ ವುಲ್ಫ್" ಎಂದು ಕರೆಯಲಾಗುತ್ತದೆ.
ಈ ವರ್ಷ ಅಸಾಧಾರಣ ಬೆಳವಣಿಗೆ ಸಾಧಿಸಿದ್ದ ಅಂಬಾನಿ ಫೇಸ್ಬುಕ್ ಸೇರಿದಂತೆ ಬಹುದೊಡ್ಡ ಸಂಸ್ಥೆಗಳೊಂದಿಗೆ ಒಪ್ಪಂದಗಳನ್ನು ಮಾಡಿಕೊಂಡಿದ್ದಾರೆ. ಅವರ ನಿವ್ವಳ ಸಂಪತ್ತು 18.3 ಬಿಲಿಯನ್ ಡಾಲರ್ ಏರಿಕೆಗೊಂಡು 76.9 ಬಿಲಿಯನ್ ಡಾಲರ್ಗೆ ಏರಿಕೆಯಾಗಿದೆ.
ಅಂಬಾನಿ ಒಂದು ಹಂತದಲ್ಲಿ ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿದ್ದರೂ, ಅವರು ಭರವಸೆ ನೀಡಿದ ಡಿಜಿಟಲ್ ರೂಪಾಂತರವನ್ನು ತಲುಪಿಸಲು ಒತ್ತಡಕ್ಕೆ ಒಳಗಾಗಿದ್ದರಿಂದ ಅವರ ರಿಲಯನ್ಸ್ನ ಷೇರುಗಳು ಇಳಿಕೆಗೊಂಡವು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications