'ದೊಡ್ಡ ಪ್ರಮಾಣದ ಎಲೆಕ್ಟ್ರಾನಿಕ್ಸ್ ಉತ್ಪಾದನೆಗೆ ಪಿಎಲ್ಐ ಯೋಜನೆ 1 ವರ್ಷ ವಿಸ್ತರಣೆ': ವಿತ್ತ ಸಚಿವೆ ಘೋಷಣೆ
ನವದೆಹಲಿ, ಜೂ.28: ''ದೊಡ್ಡ ಪ್ರಮಾಣದ ಎಲೆಕ್ಟ್ರಾನಿಕ್ಸ್ ಉತ್ಪಾದನೆಗಾಗಿ ಉತ್ಪಾದನಾ-ಲಿಂಕ್ಡ್ ಪ್ರೋತ್ಸಾಹಕ (ಪಿಎಲ್ಐ) ಯೋಜನೆಯ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ,'' ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೂನ್ 28 ರಂದು ಘೋಷಿಸಿದರು.
''ಈ ಯೋಜನೆ 2020-21ರಲ್ಲಿ ಪ್ರಾರಂಭವಾಗಿ, ಐದು ವರ್ಷಗಳ ಅವಧಿಗೆ ಚಾಲ್ತಿಯಲ್ಲಿ ಇರಬೇಕಾಗಿತ್ತು. ಈ ಯೋಜನೆ ಈಗ 2025-26ರವರೆಗೆ ಮುಂದುವರಿಯಲಿದೆ,'' ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ.
ಈ ಯೋಜನೆಯಡಿ ಭಾಗಿಯಾಗುವ ಕಂಪನಿಗಳು ತಮ್ಮ ಉತ್ಪಾದನಾ ಗುರಿಗಳನ್ನು ಪೂರೈಸಲು ಐದು ವರ್ಷಗಳ ಕಾಲಾವಕಾಶ ಪಡೆಯಲಿದೆ.

"2019-20ರ ಅವಧಿಯಲ್ಲಿ ಸಂಸ್ಥೆಗಳಿಗೆ ಪ್ರೋತ್ಸಾಹಕಗಳು ಅನ್ವಯವಾಗುತ್ತವೆ. ಆದಾಗ್ಯೂ, ಕೋವಿಡ್ ಸಂಬಂಧಿತ ಲಾಕ್ಡೌನ್ನಿಂದಾಗಿ ಕಂಪೆನಿಗಳಿಗೆ ಮಾರಾಟ ಹೆಚ್ಚಳ ಸಾಧಿಸಲು ಸಾಧ್ಯವಾಗಲಿಲ್ಲ," ಎಂದಿದ್ದಾರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್.
ನವೆಂಬರ್ 2020 ರಲ್ಲಿ ಕೇಂದ್ರ ಸಚಿವ ಸಂಪುಟ 10 ಕ್ಷೇತ್ರಗಳಿಗೆ ಪಿಎಲ್ಐ ಯೋಜನೆಗೆ ಅನುಮೋದನೆ ನೀಡಿದೆ. ಇವುಗಳಲ್ಲಿ ಸೆರಾಮಿಕ್ ವಸ್ತುಗಳು, ಆಟೋಮೋಟಿವ್ ಮತ್ತು ಆಟೋಮೋಟಿವ್ ಘಟಕಗಳು, ಟೆಲಿಕಾಂ ಮತ್ತು ನೆಟ್ವರ್ಕಿಂಗ್ ಉತ್ಪನ್ನಗಳು, ಸುಧಾರಿತ ಕೆಮಿಸ್ಟ್ರಿಗಳು, ಸೆಲ್ ಬ್ಯಾಟರಿ, ಜವಳಿ, ಆಹಾರ ಉತ್ಪನ್ನಗಳು, ಸೋಲರ್ ಮಾಡ್ಯೂಲ್ಗಳು, ವೈಟ್ ಗೂಟ್ಸ್ ಹಾಗೂ ವಿಶೇಷ ಉಕ್ಕುಗಳು ಸೇರಿವೆ. ಫೆಬ್ರವರಿ 2021 ರಲ್ಲಿ ಲ್ಯಾಪ್ಟಾಪ್ಗಳು ಮತ್ತು ಐಟಿ ಹಾರ್ಡ್ವೇರ್ ಅನ್ನು ಈ ಪಟ್ಟಿಗೆ ಸೇರಿಸಲಾಗಿದೆ.
ಸರಕುಗಳಿಗಾಗಿ (ವೈಟ್ ಗೂಡ್ಸ್) ಪಿಎಲ್ಐ ಯೋಜನೆ 2021 ರ ಏಪ್ರಿಲ್ 1 ರಂದು ಕಾರ್ಯರೂಪಕ್ಕೆ ಬಂದಿದೆ. ಈ ಕಾರ್ಯಕ್ರಮದಡಿಯಲ್ಲಿ, ಹವಾನಿಯಂತ್ರಣ ಮತ್ತು ಎಲ್ಇಡಿ ಉತ್ಪಾದನಾ ಜಾಗದಲ್ಲಿ ಅರ್ಹರಿಗೆ ಐದು ವರ್ಷಗಳ ಅವಧಿಯಲ್ಲಿ 6,238 ಕೋಟಿ ರೂ. ಲಭಿಸಲಿದೆ. ಇದಕ್ಕಿಂತ ಹೆಚ್ಚಾಗಿ, ಲ್ಯಾಪ್ಟಾಪ್ಗಳು ಮತ್ತು ಐಟಿ ಹಾರ್ಡ್ವೇರ್ ಯೋಜನೆ ನಾಲ್ಕು ವರ್ಷಗಳಲ್ಲಿ ಒಟ್ಟು 7,350 ಕೋಟಿ ರೂ. ಪಡೆಯಲಿದೆ.
(ಒನ್ಇಂಡಿಯಾ ಸುದ್ದಿ)
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications