ಹೀರೋ ಮೋಟೊಕಾರ್ಪ್ ಕೈ ತಪ್ಪಲು ನಾವು ಕಾರಣರಲ್ಲ
ಬೆಂಗಳೂರು, ಸೆ. 19 : 'ರಾಜ್ಯದಲ್ಲಿ ಹೀರೋ ಮೋಟೊಕಾರ್ಪ್ ಘಟಕವನ್ನು ಸ್ಥಾಪನೆ ಮಾಡಲು ಸರ್ಕಾರ ಸಕಲ ರೀತಿಯಲ್ಲಿ ಸಹಕಾರ ನೀಡಿತ್ತು. ಆದರೆ, ಆಂಧ್ರಪ್ರದೇಶದಲ್ಲಿ ಉಚಿತವಾಗಿ ಭೂಮಿ ದೊರೆಯುತ್ತದೆ ಎಂಬ ಕಾರಣಕ್ಕಾಗಿ ಘಟಕವನ್ನು ಕಂಪನಿ ಅಲ್ಲಿಗೆ ಸ್ಥಳಾಂತರ ಮಾಡುತ್ತಿದೆ' ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶುಕ್ರವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಘಟಕ ಆಂಧ್ರಪಪ್ರದೇಶಕ್ಕೆ ಸ್ಥಳಾಂತರಗೊಂಡಿದೆ ಎಂಬ ಆರೋಪವನ್ನು ತಳ್ಳಿ ಹಾಕಿದರು. ರಾಜ್ಯದಲ್ಲಿ 1,115 ಕೋಟಿ ಬಂಡವಾಳ ಹೂಡಿಕೆ ಮಾಡಲು ಕಂಪನಿ ಸಿದ್ಧವಾಗಿತ್ತು. ಸರ್ಕಾರ 500 ಎಕರೆ ಜಮೀನನ್ನು ಎಕರೆಗೆ 32 ಲಕ್ಷದ ರೂ.ನಂತೆ ಘಟಕಕ್ಕೆ ನೀಡಲು ತೀರ್ಮಾನ ಕೈಗೊಂಡಿತ್ತು ಎಂದು ಸಿಎಂ ಹೇಳಿದರು.

ತೆರಿಗೆ ನೀತಿ, ಮುದ್ರಣ ಮತ್ತು ನೋಂದಣಿ ಶುಲ್ಕ ಮುಂತಾದವುಗಳಲ್ಲಿ ರಿಯಾಯಿತಿ ನೀಡಲು ನಿರ್ಧರಿಸಿತ್ತು. ಆದರೆ, ಆಂಧ್ರಪ್ರದೇಶದಲ್ಲಿ ಉಚಿತವಾಗಿ ಭೂಮಿ ದೊರೆಯಲಿದೆ ಎಂಬ ಕಾರಣಕ್ಕಾಗಿ ಘಟಕ ಚಿತ್ತೂರಿಗೆ ಸ್ಥಳಾಂತರವಾಗಲಿದೆ. ಉಚಿತವಾಗಿ ಭೂಮಿ ನೀಡುವ ವಿಚಾರದಲ್ಲಿ ರಾಜ್ಯ ಆಂಧ್ರದೊಂದಿಗೆ ಪೈಪೋಟಿ ನೀಡಲು ಸಾಧ್ಯವಾಗಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು. [ಕರ್ನಾಟಕಕ್ಕೆ ಕೈ ಕೊಟ್ಟ ಹೀರೋ]
ಉಚಿತವಾಗಿ ಭೂಮಿ ನೀಡಿದರೆ ಮುಂದೆ ರಾಜ್ಯದಲ್ಲಿ ಬಂಡಾವಳ ಹೂಡುವ ಇತರ ಕಂಪನಿಗಳು ಈ ಬಗ್ಗೆ ಬೇಡಿಕೆ ಇಡುತ್ತವೆ ಅದನ್ನು ಈಡೇರಿಸುವುದು ಸಾಧ್ಯವಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು. ಹೀರೋ ಮೋಟೊಕಾರ್ಪ್ ಕಂಪನಿಯವರು ನನ್ನೊಂದಿಗೆ ನೇರವಾಗಿ ಈ ಕುರಿತು ಮಾತುಕತೆ ನಡೆಸಿಲ್ಲ. ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಜೊತೆ ಚರ್ಚಿಸಿದ್ದರು ಎಂದು ಸಿಎಂ ಹೇಳಿದರು.
ಹೀರೋ ಮೋಟೊಕಾರ್ಪ್ ಯೋಜನೆ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸಿಲ್ಲ. ಮಾರ್ಚ್ 2014ರಲ್ಲಿಯೇ ಯೋಜನೆಗೆ ಒಪ್ಪಿಗೆ ನೀಡಲಾಗಿತ್ತು. ನಂತರ ಸಂಪುಟ ಉಪ ಸಮಿತಿಯಲ್ಲಿಯೂ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು. ಆದರೂ ಕಂಪನಿ ಸ್ಥಳಾಂತರಗೊಂಡಿದೆ ಎಂದು ಅವರು ತಿಳಿಸಿದರು.
-
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ











Click it and Unblock the Notifications