ಜ್ಯೂಸ್ ಹೆಸರಿನಲ್ಲಿ ವಿಷ ಕುಡಿಸುತ್ತಿದ್ದಾರೆ ಇವರು: ಎಚ್ಚರ ತಪ್ಪಿದರೆ ನಿಮ್ಮ ಜೀವಕ್ಕೇ ಗ್ಯಾರಂಟಿ ಇಲ್ಲ!
ಜ್ಯೂಸ್ ಹೆಸರಿನಲ್ಲಿ ಮಾರುಕಟ್ಟೆಗೆ ಈಗ ಸ್ಲೋ ಪಾಯಿಸನ್ ಅಂದ್ರೆ ವಿಷ ಎಂಟ್ರಿ ಆಗುತ್ತಿದೆ, ಇದು ನಿಮ್ಮ ಮಕ್ಕಳು & ನಿಮ್ಮ ದೇಹಕ್ಕೆ ಸೇರಿದರೆ ಅದರಿಂದ ದೊಡ್ಡ ಸಮಸ್ಯೆ ಗ್ಯಾರಂಟಿ. ಹೀಗೆ ಆಹಾರ ತಜ್ಞರು & ವೈದ್ಯರು ಮಾರುಕಟ್ಟೆಗಳಲ್ಲಿ ಸಿಗುತ್ತಿರುವ ಜ್ಯೂಸ್ ಬಗ್ಗೆ ವಾರ್ನಿಂಗ್ ಕೊಡುತ್ತಿದ್ದಾರೆ. ಅದರಲ್ಲೂ ಜ್ಯೂಸ್ಗೆ ಆಯುರ್ವೇದದ ಹೆಸರು ಕೊಟ್ಟು ದಾರಿ ತಪ್ಪಿಸುವ ಜನರು ಕೂಡ ಇದೀಗ ಮಾರುಕಟ್ಟೆಗೆ ಬಂದಿದ್ದು, ಸಾಕಷ್ಟು ದೊಡ್ಡ ಸಮಸ್ಯೆಗಳು ಎದುರಾಗಿ ಒದ್ದಾಡುವ ಪರಿಸ್ಥಿತಿ ಬಂದುಬಿಟ್ಟಿದೆ. ಈ ಬಗ್ಗೆ ವಿಡಿಯೋ ನೋಡೋಣ ಬನ್ನಿ.
ಹೌದು, ಗ್ರಾಹಕರಿಗೆ ಮೋಸ ಮಾಡಲು ಅಂತಾನೇ ಹಲವು ಕಂಪನಿಗಳು ಹುಟ್ಟಿಕೊಂಡಿವೆ. ಅದರಲ್ಲೂ ನಿಮ್ಮ ಆರೋಗ್ಯ ಸರಿಯಾಗುತ್ತೆ, ನಿಮ್ಮ ಆರೋಗ್ಯಕ್ಕೆ ಇದು ಉತ್ತಮ ಎನ್ನುತ್ತ ವಿಷವನ್ನೇ ತಿನ್ನಿಸುವ ವಸ್ತುಗಳು ಹೆಚ್ಚಾಗುತ್ತಿವೆ. ಈ ಪೈಕಿ ಜ್ಯೂಸ್ಗಳು ಕೂಡ ಆರೋಗಕ್ಕೆ ಭಾರಿ ಡೇಂಜರ್ ಎಂಬ ಆರೋಪವನ್ನ ವೈದ್ಯರು ಮಾಡುತ್ತಾರೆ. ಅದರಲ್ಲೂ ಕೆಲವರು ಈ ನಿಮ್ಮ ಆರೋಗ್ಯದ ಹೆಸರನ್ನೇ ಬಂಡವಾಳ ಮಾಡಿಕೊಂಡು, ವಿಷಕಾರಿ ಜ್ಯೂಸ್ ಮಾರಾಟ ಮಾಡುತ್ತಾರೆ ಹುಷಾರ್ ಅಂತಿದ್ದಾರೆ ವೈದ್ಯರು! ವಿಡಿಯೋ ನೋಡಲು ಮುಂದೆ ಓದಿ.

ವಿಷಕಾರಿ ಜ್ಯೂಸ್ ಮಾರಾಟ?
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಒಂದು ಇದೀಗ ಸಂಚಲನ ಸೃಷ್ಟಿ ಮಾಡಿದೆ. ಯಾಕಂದ್ರೆ ರೆಡಿಮೇಡ್ ಜ್ಯೂಸ್ ಲೆಕ್ಕದಲ್ಲಿ, ನಿಮ್ಮ ಆರೋಗ್ಯ ಕಾಪಾಡುವ ಸುಳ್ಳು ಭರವಸೆ ನೀಡುತ್ತಾ ಸ್ಲೋ ಪಾಯಿಸನ್ ಜ್ಯೂಸ್ಗಳನ್ನ ಮಾರಾಟ ಮಾಡುತ್ತಿರುವ ಭಾರಿ ಗಂಭೀರ ಆರೋಪ ಮಾಡಲಾಗುತ್ತಿದೆ. ಈ ವಿಡಿಯೋ ನೋಡಿ ಜನರು ಕೂಡ ಆಘಾತಕಾರಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಜನರ ಬಳಿ ದುಡ್ಡು ಪಡೆಯುವ ಕೆಲವು ಸಂಸ್ಥೆಗಳು, ಜನಗಳಿಗೇ ಮೋಸ ಮಾಡುತ್ತಿರುವ ಆರೋಪ ಕೂಡ ಕೇಳಿ ಬರುತ್ತಿದೆ.
ಜ್ಯೂಸ್ ಕುಡಿಯಬೇಡಿ ಅಂತಾರೆ ವೈದ್ಯರು!
ವೈದ್ಯರು ಹೇಳುವ ಪ್ರಕಾರ ಮನುಷ್ಯನ ದೇಹಕ್ಕೆ ಉತ್ತಮವಾದ ಆಹಾರ ಸಾಕು. ಆದರೆ ಈ ರೀತಿ ಮಾರುಕಟ್ಟೆಯಲ್ಲಿ ಸಿಗುವ ಜ್ಯೂಸ್ಗಳು ಮನುಷ್ಯರ ದೇಹಕ್ಕೆ ಉತ್ತಮ ಅಲ್ಲ. ಇದರಿಂದ ಮನುಷ್ಯರಿಗೆ ದೊಡ್ಡ ಸಮಸ್ಯೆ ಎದುರಾಗುತ್ತದೆ. ಭವಿಷ್ಯದಲ್ಲಿ ದೊಡ್ಡ ದೊಡ್ಡ ರೋಗಗಳು ಕೂಡ ಬರುತ್ತವೆ. ಹೀಗಾಗಿ ವೈದ್ಯರ ಸಲಹೆ ಇಲ್ಲದೆ ಯಾವುದೇ ರೀತಿಯ ಜ್ಯೂಸ್ ಕುಡಿಯಲು ಹೋಗಬಾರದು ಅಂತಾರೆ ಡಾಕ್ಟರ್ಸ್.
ಒಟ್ನಲ್ಲಿ ಜ್ಯೂಸ್ ಹೆಸರಲ್ಲಿ ಏನೇನೋ ಸೇಲ್ ಮಾಡುವವರ ವಿರುದ್ಧ ಕೂಡ ಸರ್ಕಾರ ಈಗ ಕ್ರಮ ಕೈಗೊಳ್ಳಬೇಕು. ಗೋಬಿ, ಪಾನಿಪುರಿ ರೀತಿ ಜ್ಯೂಸ್ಗಳನ್ನ ಕೂಡ ಸರ್ಕಾರ ಲ್ಯಾಬ್ನ ಒಳಗೆ ಪರೀಕ್ಷೆ ಮಾಡಿ, ಮನುಷ್ಯರ ಲಿವರ್, ಕಿಡ್ನಿ ಮೇಲೆ ಪ್ರಭಾವ ಬೀರುವ ವಸ್ತುಗಳನ್ನ ಬ್ಯಾನ್ ಮಾಡಬೇಕು ಎಂಬ ಆಗ್ರಹ ಜನರಿಂದ ಕೇಳಿ ಬರುತ್ತಿದೆ. ಹೀಗಾಗಿ ವೈದ್ಯರು ಜ್ಯೂಸ್ ಕುಡಿಯಬೇಡಿ ಅಂತಾ ಹೇಳಿರುವ ವಿಡಿಯೋ ಫುಲ್ ವೈರಲ್ ಆಗುತ್ತಿದೆ. ಅಲ್ಲದೆ ಆಯುರ್ವೇದ ಮತ್ತಿತರ ಹೆಸರಲ್ಲಿ ಜ್ಯೂಸ್ ಮಾರುವ ಸಂಸ್ಥೆಗಳ ವಿರುದ್ಧ ಕೂಡ ಆಕ್ರೋಶ ವ್ಯಕ್ತವಾಗುತ್ತಿದೆ.
-
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
8 ವರ್ಷ ಕೆಲಸ ಮಾಡಿದರೂ ಕ್ಷಣಾರ್ಧದಲ್ಲಿ ವಜಾ: ವೈರಲ್ ಪೋಸ್ಟ್ ನೋಡಿ ನೆಟ್ಟಿಗರು ಶಾಕ್ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Vastu Tips for Home: ಮನೆಗೆ ಎರಡು ಮುಖ್ಯ ಪ್ರವೇಶ ದ್ವಾರಗಳು ಇರಬಹುದೇ? ವಾಸ್ತು ಹೇಳುವುದು ಏನು -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ?












Click it and Unblock the Notifications