ಉದ್ಯೋಗಿಗಳಿಗೆ ಸ್ಥಳಾಂತರಕ್ಕಾಗಿ 15 ಲಕ್ಷ ರೂ. ಬೋನಸ್ ನೀಡಲು ಯೋಜಿಸಿರುವ ಐಟಿ ಕಂಪನಿ: ಆದರೆ ವೇತನವೂ ಕಡಿತ?
ವಾಷಿಂಗ್ಟನ್, ಸೆಪ್ಟೆಂಬರ್ 16: ಕೊರೊನಾವೈರಸ್ ಸಾಂಕ್ರಾಮಿಕ ರೋಗವು ಜನರ ಜೀವನಶೈಲಿ ಜೊತೆಗೆ ಕೆಲಸದ ವೈಖರಿಯನ್ನು ಬದಲಿಸಿಬಿಟ್ಟಿದೆ. ಜಗತ್ತಿನ ಬಹುತೇಕ ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ನೀಡಿವೆ.
ಸದ್ಯಕ್ಕಂತು ಕೊರೊನಾವೈರಸ್ ಲಸಿಕೆ ಸಿಗುವುದು ದೂರದ ಮಾತಾಗಿದೆ. ಹೀಗಾಗಿ ಲಸಿಕೆ ಬಂದು, ಮಾರುಕಟ್ಟೆಯಲ್ಲಿ ಸಂಪೂರ್ಣವಾಗಿ ಲಭ್ಯವಾಗುವವರೆಗೂ ಅನೇಕ ಕಂಪನಿಗಳು ತಮ್ಮ ನೌಕರರಿಗೆ ಮನೆಯಿಂದಲೇ ಕೆಲಸ ಮಾಡುವುದನ್ನ ಖಾಯಂ ಮಾಡಿಬಿಡಬಹುದು.
ಹೀಗೆ ಅಮೆರಿಕಾದಲ್ಲಿ ಮನೆಯಿಂದಲೇ ಕೆಲಸ ಮಾಡುವ ಪ್ರವೃತ್ತಿಯು ಮುಂದುವರಿದಿದ್ದು, ಸ್ಯಾನ್ ಫ್ರಾನ್ಸಿಸ್ಕೋ, ನ್ಯೂಯಾರ್ಕ್ ಅಥವಾ ಸಿಯಾಟಲ್ನಿಂದ ಹೊರಹೋಗಲು ಆಯ್ಕೆ ಮಾಡಿಕೊಳ್ಳುವ ನೌಕರರಿಗೆ ಸ್ಟ್ರೈಪ್ ಇಂಕ್ ಕಂಪನಿಯು ಒಂದು ಬಾರಿ 20,000 ಅಮೆರಿಕನ್ ಡಾಲರ್ ಪಾವತಿಸಲು ಯೋಜಿಸಿದೆ. ಅಂದರೆ ಭಾರತದ ರೂಪಾಯಿಗಳಲ್ಲಿ ಸುಮಾರು 14.75 ಲಕ್ಷ ರೂಪಾಯಿ.

ಉದ್ಯೋಗಿಗಳು ಸ್ಥಳಾಂತರಗೊಳ್ಳುವ ಆಯ್ಕೆಯನ್ನು ತೆಗೆದುಕೊಂಡರೆ ಅವರಿಗೆ ಈ ಒಂದು ಬಾರಿಯ ಬೋನಸ್ ಜೊತೆಗೆ ಅವರ ಮೂಲ ವೇತನದಲ್ಲಿ ಶೇಕಡಾ 10ರಷ್ಟು ಕಡಿತಗೊಳಿಸುವ ಬಗ್ಗೆಯು ಕಂಪನಿ ಯೋಜಿಸಿದೆ ಎಂದು ಮಿಂಟ್ ವರದಿ ಮಾಡಿದೆ.
ಈ ವರ್ಷಾಂತ್ಯದ ಮೊದಲು ಸ್ಥಳಾಂತರಗೊಳ್ಳಲು ಆಯ್ಕೆ ಮಾಡುವ ಕಾರ್ಮಿಕರಿಗೆ ಈ ಪ್ರಸ್ತಾಪವು ಲಭ್ಯವಾಗುವಂತೆ ಮಾಡುತ್ತದೆ ಎನ್ನಲಾಗಿದೆ. ಈ ಕುರಿತು ತಿಳಿಸಿರುವ ವ್ಯಕ್ತಿಗಳು ಹೆಸರನ್ನು ತಿಳಿಸದೇ ಅನಾಮಧೇಯರಾಗಿರಲು ಕೇಳಿದರು. ಹೀಗಾಗಿ ತಮ್ಮ ಊರುಗಳಿಗೆ ಸ್ಥಳಾಂತರಗೊಳ್ಳಲು ಬಯಸುವ ನೌಕರರು ಬೋನಸ್ ಜೊತೆಗೆ ತಮ್ಮ ಮೂಲ ವೇತನವನ್ನು ತ್ಯಜಿಸಬೇಕಾಗಬಹುದು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications