'ಟೊಮೊಟೊ ಬೆಲೆ ಇಳಿಯಲು ಇನ್ನೂ 15ದಿನಗಳು ಬೇಕು'
ನವದೆಹಲಿ, ಜುಲೈ 30: ದೇಶದ ಹಲವೆಡೆ ಒಂದು ಕೆಜಿ ಟೊಮೊಟೊ ಬೆಲೆ 100 ರೂಪಾಯಿ ತನಕ ಏರಿಕೆಯಾಗಿದೆ. ಗ್ರಾಹಕ ವ್ಯವಹಾರಗಳ ಸಚಿವಾಲಯದ ಅಂಕಿ-ಅಂಶಗಳ ಲೆಕ್ಕಾಚಾರದಂತೆ ಟೊಮಾಟೊ ಬೆಲೆ ಇಳಿಯಲು ಕನಿಷ್ಠ ಇನ್ನೂ 15ದಿನಗಳ ಸಮಯ ಬೇಕಾಗಿದೆ.
ಕರ್ನಾಟಕ, ಮಧ್ಯಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಲ ಹಾಗೂ ಒಡಿಶಾ ರಾಜ್ಯಗಳು ದೇಶದಲ್ಲಿ ಹೆಚ್ಚು ಟೊಮ್ಯಾಟೊ ಉತ್ಪಾದಿಸುವ ರಾಜ್ಯಗಳಾಗಿವೆ.'ದಕ್ಷಿಣ ರಾಜ್ಯಗಳು ಮತ್ತು ಟೊಮೊಟೊ ಬೆಳೆಯುತ್ತಿರುವ ಇತರ ಪ್ರದೇಶಗಳಿಂದ ಸರಬರಾಜಿನಲ್ಲಿ ಸುಧಾರಣೆಯಾಗಲಿದೆ' ಎಂದು ಕೃಷಿ ಸಂಶೋಧನಾ ಮಂಡಳಿಯ ತೋಟಗಾರಿಕಾ ವಿಜ್ಞಾನ ವಿಭಾಗದ ಪ್ರಧಾನ ಉಪ ನಿರ್ದೇಶಕ ಜನರಲ್ ಎ.ಕೆ ಸಿಂಗ್ ತಿಳಿಸಿದ್ದಾರೆ.

ಸರಿಯಾದ ಪೂರೈಕೆ ಇಲ್ಲದ ಕಾರಣ, ಮಾರುಕಟ್ಟೆಯಲ್ಲಿ ದಿಢೀರ್ ಆಗಿ ಬೆಲೆ ವ್ಯತ್ಯಾಸ ಕಂಡು ಬಂದಿದೆ. ಇನ್ನು ಹರ್ಯಾಣ, ಪಂಜಾಬ್ ಸೇರಿದಂತೆ ಹಲವೆಡೆ ಅಕಾಲಿಕ ಮಳೆಗೆ ಟೊಮ್ಯಾಟೊ ಬೆಳೆ ಹಾಳಾಗಿದೆ. ಉತ್ತರ ಭಾರತದಲ್ಲಿ ಕಳೆದ ತಿಂಗಳು ಬಿಸಿಲಿಗೂ ಟೊಮ್ಯಾಟೊ ಬಾಡಿ ಹೋಗಿದೆ.
ಈರುಳ್ಳಿಗೆ ಹೋಲಿಸಿದರೆ ಟೊಮ್ಯಾಟೊಗೆ ಆಯಸ್ಸು ಕಮ್ಮಿ. ಚಟ್ನಿ, ಸಾರು, ಜಾಮ್, ಗೊಜ್ಜು ಹೀಗೆ ಮಾರುಕಟ್ಟೆಯಿಂದ ತಂದ ದಿನವೇ ಬಳಸುವುದು ಮಾಮೂಲಿ. ಹೀಗಾಗಿ ಕಳೆದ ವಾರದ ಟೊಮ್ಯಾಟೊ ಯಾರು ಇಟ್ಟುಕೊಳ್ಳುವುದಿಲ್ಲ. ಹೀಗಾಗಿ ಮಾರಾಟಗಾರರು ಹಾಗೂ ಗ್ರಾಹಕರಿಬ್ಬರಿಗೂ ಆತಂಕ ಸಹಜವಾಗಿದೆ.
ಒಂದು ಕೆಜಿ ಟೊಮೊಟೊಗೆ ಕೋಲ್ಕತ್ತಾದಲ್ಲಿ 95 ರೂ., ದೆಹಲಿಯಲ್ಲಿ 95 ರೂ., ಮುಂಬೈನಲ್ಲಿ 80 ರೂ., ಚೆನ್ನೈನಲ್ಲಿ 55 ರೂ., ಲಕ್ನೋದಲ್ಲಿ 95ರೂ., ಭೋಪಾಲ್, ತಿರುವನಂತಪುರಂನಲ್ಲಿ 90 ರೂ., ಜೈಪುರ್ 65 ರೂ., ಅಹ್ಮದಾಬಾದ್, ಪಾಟ್ನಾದಲ್ಲಿ 60 ರೂ., ಬೆಂಗಳೂರಲ್ಲಿ 75 ರೂ., ಹೈದರಾಬಾದ್ನಲ್ಲಿ 75 ರೂ.ಗೆ ಮಾರಾಟವಾಗಿದೆ. ಗುಣಮಟ್ಟದ ಟೊಮೊಟೊ ಬೆಲೆಯಲ್ಲಿ ಬದಲಾಗುತ್ತವೆ.
Recommended Video

-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications