'ಟೊಮೊಟೊ ಬೆಲೆ ಇಳಿಯಲು ಇನ್ನೂ 15ದಿನಗಳು ಬೇಕು'
ನವದೆಹಲಿ, ಜುಲೈ 30: ದೇಶದ ಹಲವೆಡೆ ಒಂದು ಕೆಜಿ ಟೊಮೊಟೊ ಬೆಲೆ 100 ರೂಪಾಯಿ ತನಕ ಏರಿಕೆಯಾಗಿದೆ. ಗ್ರಾಹಕ ವ್ಯವಹಾರಗಳ ಸಚಿವಾಲಯದ ಅಂಕಿ-ಅಂಶಗಳ ಲೆಕ್ಕಾಚಾರದಂತೆ ಟೊಮಾಟೊ ಬೆಲೆ ಇಳಿಯಲು ಕನಿಷ್ಠ ಇನ್ನೂ 15ದಿನಗಳ ಸಮಯ ಬೇಕಾಗಿದೆ.
ಕರ್ನಾಟಕ, ಮಧ್ಯಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಲ ಹಾಗೂ ಒಡಿಶಾ ರಾಜ್ಯಗಳು ದೇಶದಲ್ಲಿ ಹೆಚ್ಚು ಟೊಮ್ಯಾಟೊ ಉತ್ಪಾದಿಸುವ ರಾಜ್ಯಗಳಾಗಿವೆ.'ದಕ್ಷಿಣ ರಾಜ್ಯಗಳು ಮತ್ತು ಟೊಮೊಟೊ ಬೆಳೆಯುತ್ತಿರುವ ಇತರ ಪ್ರದೇಶಗಳಿಂದ ಸರಬರಾಜಿನಲ್ಲಿ ಸುಧಾರಣೆಯಾಗಲಿದೆ' ಎಂದು ಕೃಷಿ ಸಂಶೋಧನಾ ಮಂಡಳಿಯ ತೋಟಗಾರಿಕಾ ವಿಜ್ಞಾನ ವಿಭಾಗದ ಪ್ರಧಾನ ಉಪ ನಿರ್ದೇಶಕ ಜನರಲ್ ಎ.ಕೆ ಸಿಂಗ್ ತಿಳಿಸಿದ್ದಾರೆ.

ಸರಿಯಾದ ಪೂರೈಕೆ ಇಲ್ಲದ ಕಾರಣ, ಮಾರುಕಟ್ಟೆಯಲ್ಲಿ ದಿಢೀರ್ ಆಗಿ ಬೆಲೆ ವ್ಯತ್ಯಾಸ ಕಂಡು ಬಂದಿದೆ. ಇನ್ನು ಹರ್ಯಾಣ, ಪಂಜಾಬ್ ಸೇರಿದಂತೆ ಹಲವೆಡೆ ಅಕಾಲಿಕ ಮಳೆಗೆ ಟೊಮ್ಯಾಟೊ ಬೆಳೆ ಹಾಳಾಗಿದೆ. ಉತ್ತರ ಭಾರತದಲ್ಲಿ ಕಳೆದ ತಿಂಗಳು ಬಿಸಿಲಿಗೂ ಟೊಮ್ಯಾಟೊ ಬಾಡಿ ಹೋಗಿದೆ.
ಈರುಳ್ಳಿಗೆ ಹೋಲಿಸಿದರೆ ಟೊಮ್ಯಾಟೊಗೆ ಆಯಸ್ಸು ಕಮ್ಮಿ. ಚಟ್ನಿ, ಸಾರು, ಜಾಮ್, ಗೊಜ್ಜು ಹೀಗೆ ಮಾರುಕಟ್ಟೆಯಿಂದ ತಂದ ದಿನವೇ ಬಳಸುವುದು ಮಾಮೂಲಿ. ಹೀಗಾಗಿ ಕಳೆದ ವಾರದ ಟೊಮ್ಯಾಟೊ ಯಾರು ಇಟ್ಟುಕೊಳ್ಳುವುದಿಲ್ಲ. ಹೀಗಾಗಿ ಮಾರಾಟಗಾರರು ಹಾಗೂ ಗ್ರಾಹಕರಿಬ್ಬರಿಗೂ ಆತಂಕ ಸಹಜವಾಗಿದೆ.
ಒಂದು ಕೆಜಿ ಟೊಮೊಟೊಗೆ ಕೋಲ್ಕತ್ತಾದಲ್ಲಿ 95 ರೂ., ದೆಹಲಿಯಲ್ಲಿ 95 ರೂ., ಮುಂಬೈನಲ್ಲಿ 80 ರೂ., ಚೆನ್ನೈನಲ್ಲಿ 55 ರೂ., ಲಕ್ನೋದಲ್ಲಿ 95ರೂ., ಭೋಪಾಲ್, ತಿರುವನಂತಪುರಂನಲ್ಲಿ 90 ರೂ., ಜೈಪುರ್ 65 ರೂ., ಅಹ್ಮದಾಬಾದ್, ಪಾಟ್ನಾದಲ್ಲಿ 60 ರೂ., ಬೆಂಗಳೂರಲ್ಲಿ 75 ರೂ., ಹೈದರಾಬಾದ್ನಲ್ಲಿ 75 ರೂ.ಗೆ ಮಾರಾಟವಾಗಿದೆ. ಗುಣಮಟ್ಟದ ಟೊಮೊಟೊ ಬೆಲೆಯಲ್ಲಿ ಬದಲಾಗುತ್ತವೆ.
Recommended Video

-
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
LPG ಪೂರೈಕೆ ವ್ಯತ್ಯಯ: ಬೆಂಗಳೂರಿನ ಪಿಜಿಗಳಲ್ಲೂ ಆಹಾರ ಪೂರೈಕೆ ಸ್ಥಗಿತದ ಭೀತಿ, ಆತಂಕದಲ್ಲಿ 10 ಲಕ್ಷ ಮಂದಿ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ












Click it and Unblock the Notifications