ಅಮೆಜಾನ್ ಹಾಗೂ ಕರ್ನಾಟಕದ ಮಧ್ಯದ ಒಪ್ಪಂದಕ್ಕೆ CAIT ಆಕ್ಷೇಪ
ನವದೆಹಲಿ, ಜನವರಿ 29: ಕಳಂಕಿತ ಇ- ಕಾಮರ್ಸ್ ಕಂಪೆನಿ ಅಮೆಜಾನ್ ಜತೆಗೆ ಕರ್ನಾಟಕ ಸರ್ಕಾರವು ಒಪ್ಪಂದ (MoU) ಮಾಡಿಕೊಳ್ಳುತ್ತಿರುವುದಕ್ಕೆ ಕಾನ್ಫಡರೇಷನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ (CAIT) ಪ್ರಬಲವಾಗಿ ಟೀಕೆ ವ್ಯಕ್ತಪಡಿಸಿದೆ. ಸರ್ಕಾರದಿಂದ ಇ- ಕಾಮರ್ಸ್ ರಫ್ತು ನೆರವಿಗೆ ಇಂಥದ್ದೊಂದು ನಿರ್ಧಾರಕ್ಕೆ ಬರಲಾಗಿದೆ. ಇ ಕಾಮರ್ಸ್ ಒಪ್ಪಂದ ಕುರಿತಂತೆ ಅಗತ್ಯ ಮಾರ್ಗಸೂಚಿಗಳನ್ನು ಕೇಂದ್ರ ಬಜೆಟ್ ಸಂದರ್ಭದಲ್ಲಿ ನಿರೀಕ್ಷಿಸಲಾಗಿದೆ.
"ಅಮೆಜಾನ್ ಜತೆಗೆ ಕರ್ನಾಟಕ ಸರ್ಕಾರವು MoU ಮಾಡಿಕೊಳ್ಳುತ್ತಿರುವುದನ್ನು ನಾವು ಪ್ರಬಲವಾಗಿ ಆಕ್ಷೇಪಿಸುತ್ತೇವೆ. ಆ ಕಂಪೆನಿಯು ಬಗ್ಗೆ ತನಿಖಾ ಸಂಸ್ಥೆಗಳ ವಿಚಾರಣೆ ಎದುರಿಸುತ್ತಿದ್ದು, ಜತೆಗೆ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ಕೂಡ ಇದೆ. ದುಷ್ಕೃತ್ಯಗಳಲ್ಲಿ ತೊಡಗಿರುವ, ಸ್ಪರ್ಧೆ ಇಲ್ಲದಂತೆ ಮಾಡುವ ಹಾಗೂ ದೇಶದ ಸಣ್ಣ ವರ್ತಕರನ್ನು ನಾಶಪಡಿಸುವ ಆರೋಪಗಳು ಅದರ ಮೇಲಿದೆ. ಇ ಕಾಮರ್ಸ್ ಮಾತ್ರವಲ್ಲದೆ ದೇಶದ ರೀಟೇಲ್ ವ್ಯವಹಾರವನ್ನು ಸಹ ಹತೋಟಿಯಲ್ಲಿ ಇರಿಸಿಕೊಳ್ಳುವ ನೀತಿ ರೂಪಿಸಿಕೊಳ್ಳುತ್ತಿದೆ," ಎಂದು ಸಿಎಐಟಿ ಹೇಳಿದೆ.
ಕರ್ನಾಟಕ ಸರ್ಕಾರಕ್ಕೆ ಈ ವಾಸ್ತವದ ಬಗ್ಗೆ ಗೊತ್ತಿಲ್ಲ ಎಂಬುದನ್ನು ನಂಬುವುದಕ್ಕೆ ಅಸಾಧ್ಯ. ಇದರ ಹೊರತಾಗಿ ಅಮೆಜಾನ್ ಜತೆ ಒಪ್ಪಂದ ಮಾಡಿಕೊಂಡಿದೆ. ಇದು ಕರ್ನಾಟಕದ ವರ್ತಕರ ಪಾಲಿಗೆ ಮಾತ್ರ ಅಲ್ಲ, ಇಡೀ ದೇಶದ ಪಾಲಿಗೆ ಗಂಭೀರ ಸಮಸ್ಯೆ. ಅಮೆಜಾನ್ ವಿರುದ್ಧ ಇರುವ ಆರೋಪ ಪಟ್ಟಿ ಮತ್ತು ತನಿಖೆಗಳನ್ನು ರಾಜ್ಯ ಸರ್ಕಾರ ಮೀರಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಜಾರಿ ನಿರ್ದೇಶನಾಲಯದಿಂದ ತನಿಖೆ ಆರಂಭಿಸಿದ ದಿನಗಳಲ್ಲೇ ಕರ್ನಾಟಕ ಸರ್ಕಾರವು ಅಮೆಜಾನ್ ಜತೆ ಒಪ್ಪಂದಕ್ಕೆ ಬಂದಿರುವುದು ಎಂಥ ಮುಜುಗರದ ಸಂಗತಿ! ವರ್ತಕರ ರಕ್ತದಲ್ಲಿ ಕೈ ತೋಯ್ದಿರುವ ಅಮೆಜಾನ್ ಬಗ್ಗೆ ವಿಶ್ವದಾದ್ಯಂತ ಕಾನೂನು ಮತ್ತು ನೀತಿಗಳನ್ನು ಮೀರಿದ ಆರೋಪಗಳಿವೆ ಎಂದು ಸಿಎಐಟಿ ರಾಷ್ಟೀಯ ಅಧ್ಯಕ್ಷ ಬಿ.ಸಿ ಭಾರ್ತಿಯಾ ಮತ್ತು ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ ವಾಲ್ ಜಂಟಿ ಹೇಳಿಕೆ ನೀಡಿದ್ದಾರೆ.
ಕರ್ನಾಟಕ ಸರ್ಕಾರವು ವರ್ತಕ ಸಮುದಾಯದ ಬೆನ್ನಿಗೆ ಇರಿದಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ ಕರ್ನಾಟಕ ಸರ್ಕಾರವು ಬಹುರಾಷ್ಟ್ರೀಯ ಕಂಪೆನಿ ಮೂಲಕ ರಫ್ತು ಉತ್ತೇಜಿಸಲು ಮುಂದಾಗಿದೆ. ಆದರೆ ಈಗಿನ ಕ್ರಮವು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ "ವೋಕಲ್ ಫಾರ್ ಲೋಕಲ್" ಹಾಗೂ "ಆತ್ಮನಿರ್ಭರ್ ಭಾರತ್"ಗೆ ಯಾವುದೇ ಕೊಡುಗೆ ನೀಡುವುದಿಲ್ಲ ಎಂದಿದ್ದಾರೆ.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
LPG: ಮನೆಯಲ್ಲೇ ಕುಳಿತು ಎಲ್ಪಿಜಿ ಇ-ಕೆವೈಸಿ ಮಾಡುವುದು ಹೇಗೆ? ಇಲ್ಲಿವೆ ಸರಳ ವಿಧಾನಗಳು -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Arecanut Price: ಶಿವಮೊಗ್ಗ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ?: ಇಲ್ಲಿದೆ ಮಾರ್ಚ್ 13ರ ದರಪಟ್ಟಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು












Click it and Unblock the Notifications