ಮೊಬೈಲ್ ಗ್ರಾಹಕರಿಗೆ ಕೊಡುಗೆ, ರೋಮಿಂಗ್ ದರ ಕಡಿತ
ನವದೆಹಲಿ, ಏ.10 : ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ಮೊಬೈಲ್ ಬಳಕೆದಾರರಿಗೆ ಸಿಹಿ ಸುದ್ದಿ ನೀಡಿದೆ. ರೋಮಿಂಗ್ ಶುಲ್ಕವನ್ನು ಕಡಿತಗೊಳಿಸಿ ಆದೇಶ ಹೊರಡಿಸಿದೆ. ಮೇ.1ರಿಂದ ನೂತನ ದರಗಳು ಜಾರಿಗೆ ಬರಲಿವೆ.
ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಈ ಕುರಿತು ಗುರುವಾರ ಆದೇಶ ಹೊರಡಿಸಿದೆ. ಮೇ.1ರಿಂದ ಅನ್ವಯವಾಗುವಂತೆ ಗ್ರಾಹಕರಿಗೆ ರೋಮಿಂಗ್ ಶುಲ್ಕಗಳನ್ನು ಕಡಿತಗೊಳಿಸುವಂತೆ ಮೊಬೈಲ್ ಸೇವಾ ಕಂಪನಿಗಳಿಗೆ ನಿರ್ದೇಶನ ನೀಡಿದೆ. [ಮೊಬೈಲ್ ಒನ್ ನನ್ನ ಅನಿಸಿಕೆ: ಶ್ರೀಹರ್ಷ ಸಾಲಿಮಠ]

ಟ್ರಾಯ್ ಕಾರ್ಯದರ್ಶಿ ಸುಧೀರ್ ಗುಪ್ತಾ ಅವರು ಈ ಕುರಿತು ಮಾಹಿತಿ ನೀಡಿದ್ದು, ಶುಲ್ಕ ಕಡಿತಗೊಳ್ಳುವುದರಿಂದ ಎಲ್ಲಾ ಮೊಬೈಲ್ ಗ್ರಾಹಕರಿಗೂ ಅನುಕೂಲವಾಗಲಿದೆ. ಕಂಪನಿಗಳ ನಡುವೆ ತೀವ್ರ ಸ್ಪರ್ಧೆ ಇರುವುದರಿಂದ ಗ್ರಾಹಕರಿಗೆ ಹೆಚ್ಚಿನ ಲಾಭವಾಗಲಿದೆ ಎಂದು ತಿಳಿಸಿದ್ದಾರೆ. [ಗೋಲ್ ಮಾಲ್ ಮೆಸೇಜ್ ನಂಬಿ ಉತ್ರ ಕೊಟ್ರೇ...!]
ಕರೆಗಳ ದರ ಪಟ್ಟಿ : ರೋಮಿಂಗ್ ಶುಲ್ಕ ಕಡಿತಗೊಳಿಸಿರುವುದರಿಂದ ಸ್ಥಳೀಯ ವಾಯ್ಸ್ ಕಾಲ್ ಮೇಲಿನ ರೋಮಿಂಗ್ ದರ ನಿಮಿಷಕ್ಕೆ 80 ಪೈಸೆಯಾಗಲಿದೆ. ಒಳಬರುವ ಕರೆಗಳ ದರ ನಿಮಿಷಕ್ಕೆ 45 ಪೈಸೆಗೆ ಇಳಿಕೆಯಾಗಲಿದೆ. ಹೊರ ಹೋಗುವ ಎಸ್ಎಂಎಸ್ ಶುಲ್ಕ 1 ರೂ.ನಿಂದ 25 ಪೈಸೆಗೆ ಇಳಿಯಲಿದೆ. [ಅಗ್ಗವಾಗಲಿದೆ ಮೊಬೈಲ್, ಸ್ಥಿರ ದೂರವಾಣಿ ದರ]
ಸದ್ಯದ ದರದ ಪ್ರಕಾರ ಸ್ಥಳೀಯ ಹೊರ ಹೋಗುವ ವಾಯ್ಸ್ ಕಾಲ್ ಶುಲ್ಕ ನಿಮಿಷಕ್ಕೆ 1 ರೂ. ಇದ್ದು, ಒಳ ಕರೆಗಳ ಶುಲ್ಕ ನಿಮಿಷಕ್ಕೆ 75 ಪೈಸೆ ಇದೆ. ಈ ದರಗಳು 80 ಮತ್ತು 45 ಪೈಸೆಗಳಿಗೆ ಇಳಿಕೆಯಾಗಲಿದೆ.
ರಾಷ್ಟ್ರೀಯ ರೋಮಿಂಗ್ : ಟ್ರಾಯ್ ರಾಷ್ಟ್ರೀಯ ರೋಮಿಂಗ್ ಶುಲ್ಕಗಳನ್ನು ಕಡಿತ ಮಾಡಲು ಸೂಚನೆ ನೀಡಿದೆ. ಅದರಂತೆ ಪ್ರತಿ ನಿಮಿಷದ ಕರೆಯ ದರ 1.50 ರೂ.ಗಳಿಂದ 1.15 ರೂ.ಗಳಾಗಲಿದೆ. ಪ್ರತಿ ಎಸ್ಎಂಎಸ್ ದರ 1.50 ರೂ.ಗಳಿಂದ 38 ಪೈಸೆಗಳಿಗೆ ಇಳಿಯಲಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications