ವೇಗದ ಡೇಟಾ ಯೋಜನೆ: ಏರ್ಟೆಲ್, ವೊಡಾಫೋನ್ ಐಡಿಯಾಗೆ ಟ್ರಾಯ್ ಪ್ರಶ್ನೆ
ನವದೆಹಲಿ, ಆಗಸ್ಟ್ 03: ತನ್ನ ಚಂದಾದಾರರಿಗೆ ನೀಡುತ್ತಿದ್ದ ರೆಡ್ಎಕ್ಸ್ ಪ್ರೀಮಿಯಂ, ಪ್ಲಾಟಿನಂ ಯೋಜನೆಗಳ ಕುರಿತಾಗಿ ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರವು (ಟ್ರಾಯ್) ವೊಡಾಫೋನ್ ಐಡಿಯಾ ಮತ್ತು ಭಾರ್ತಿ ಏರ್ಟೆಲ್ ಕಂಪನಿಗಳಿಗೆ ಹಲವು ಪ್ರಶ್ನೆಗಳನ್ನು ಕೇಳಿದೆ. ಅಲ್ಲದೆ ಮಂಗಳವಾರದೊಳಗೆ ಉತ್ತರಿಸುವಂತೆ ಸೂಚಿಸಿದೆ.
ಈಗಾಗಲೇ ವಿವಾದಕ್ಕೆ ತುತ್ತಾಗಿರುವ ವೇಗದ ಡೇಟಾ ಯೋಜನೆಗಳು ಇತರ ಯೋಜನೆಗಳ ಚಂದಾದಾರರಿಗೆ ನೀಡುತ್ತಿರುವ ಸೇವಾ ಗುಣಮಟ್ಟವನ್ನು ಕಡಿಮೆ ಮಾಡಿಲ್ಲ, ಯಾವ ನಿಯಮವನ್ನೂ ಉಲ್ಲಂಘಿಸಿಲ್ಲ ಎಂಬ ಹೇಳಿಕೆಗೆ ಹೆಚ್ಚಿನ ಆಧಾರ ಒದಗಿಸುವಂತೆ ಟ್ರಾಯ್ ಈ ಎರಡೂ ಟೆಲಿಕಾಂ ಕಂಪನಿಗಳಿಗೆ ಪ್ರಶ್ನೆಗಳನ್ನು ಕೇಳಿದೆ.
ಭಾರ್ತಿ ಏರ್ಟೆಲ್ ಟೆಲಿಕಾಂ ಕಂಪನಿಯು ಜುಲೈ 6ರಂದು ಪ್ಲಾಟಿನಂ ಹಾಗೂ ವೊಡಾಫೋನ್ ಐಡಿಯಾ ಕಂಪನಿಯು ರೆಡ್ಎಕ್ಸ್ ಪ್ರೀಮಿಯಂ ಯೋಜನೆಗಳನ್ನು ಘೋಷಿಸಿತ್ತು. 499 ರೂಪಾಯಿ ಹಾಗೂ ಅದಕ್ಕೆ ಮೇಲ್ಪಟ್ಟ ಪ್ರೀಮಿಯಂ ಪೋಸ್ಟ್ ಪೇಯ್ಡ್ ಗ್ರಾಹಕರಿಗೆ 4G ವೇಗದ ಡೇಟಾ ಹಾಗೂ ಇನ್ನಿತರ ಸೌಲಭ್ಯ ಒದಗಿಸುವುದಾಗಿ ಹೇಳಿತ್ತು.

ಹೀಗಾಗಿ ಈ ವಿಶೇಷ ಯೋಜನೆಗಳ ಅಡಿಯಲ್ಲಿ ಗ್ರಾಹಕರಿಗೆ ಡೇಟಾ ನಿಗದಿ ಮಾಡಲಾಗಿದಿಯೇ ಎಂಬುದನ್ನು ವಿವರಿಸಿ ಎಂದು ಏರ್ಟೆಲ್ಗೆ ಸೂಚಿಸಲಾಗಿದೆ. ಏರ್ಟೆಲ್ಗೆ ಎರಡು ಡಜನ್ಗೂ ಹೆಚ್ಚಿನ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ರೀತಿ ಕೆಲವು ಆಯ್ಕೆಯ ಗ್ರಾಹಕರಿಗೆ ವಿಶೇಷ ಆದ್ಯತೆ ನೀಡುವುದರಿಂದ ಈ ಯೋಜನೆಗಳನ್ನು ಹೊಂದದೇ ಇರುವ ಗ್ರಾಹಕರಿಗೆ ಗುಣಮಟ್ಟದ ಕೊರತೆ ಎದುರಿಸಬೇಕಾಗುತ್ತದೆ ಎಂಬುದು ಟ್ರಾಯ್ ಅಭಿಪ್ರಾಯವಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications