BHIM App : 2 ಕೋಟಿ ಡೌನ್ ಲೋಡ್, 1,500 ಕೋಟಿ ರು ವ್ಯವಹಾರ
ನವದೆಹಲಿ, ಆಗಸ್ಟ್ 01: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ಡಿಜಿಟಲ್ ಇಂಡಿಯಾದ ಭಾಗವಾಗಿರುವ ಮೊಬೈಲ್ ಮೂಲಕ ಪಾವತಿಸುವ ಉದ್ದೇಶದಿಂದ ಪರಿಚಯಿಸಲಾದ ಭಾರತ್ ಇಂಟರ್ ಫೇಸ್ ಫಾರ್ ಮನಿ ಅಥವಾ BHIM app ಸುಮಾರಿ 2 ಕೋಟಿ ಬಾರಿ ಡೌನ್ ಲೋಡ್ ಆಗಿದೆ.
ಈ ಮೊಬೈಲ್ ಅಪ್ಲಿಕೇಷನ್ ಮೂಲಕ 1,500 ಕೋಟಿ ರೂ. ಮೊತ್ತ ವರ್ಗಾಯಿಸಲಾಗಿದೆ ಎಂದು ಕೇಂದ್ರ ಮಾಹಿತಿ ಹಾಗೂ ತಂತ್ರಜ್ಞಾನ ಸಚಿವ ರವಿ ಶಂಕರ್ ಪ್ರಸಾದ್ ಹೇಳಿದರು.

ಸಮಾಜವಾದಿ ಪಕ್ಷದ ಸದಸ್ಯೆ ಜಯಾ ಬಚ್ಚನ್ ಅವರು ಭೀಮ್ ಅಪ್ಲಿಕೇಷನ್ ಶೂನ್ಯವೇಳೆಯಲ್ಲಿ ಪ್ರಶ್ನಿಸಿದ್ದಕ್ಕೆ ಉತ್ತರವಾಗಿ ಪ್ರತಿಕ್ರಿಯಿಸಿದ ರವಿಶಂಕರ್ ಪ್ರಸಾದ್, ಡಿಜಿಟಲ್ ಪಾವತಿ ಬಗ್ಗೆ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ 2 ಕೋಟಿಗಿಂತಲೂ ಹೆಚ್ಚು ಜನರನ್ನು ತರಬೇತುಗೊಳಿಸಲಾಗಿದೆ ಎಂದರು.
ಬಿಎಚ್ಐಎಂ ಆಪ್ ಅನ್ನು 2 ಕೋಟಿ ಜನರು ಡೌನ್ಲೋಡ್ ಮಾಡಿದ್ದಾರೆ. ಬಿಎಚ್ಐಎಂ ಆ್ಯಪ್ ಮೂಲಕ 1,500 ಕೋಟಿ ರುಪಾಯಿ ಮೊತ್ತದ ಸರಿಸುಮಾರು 50 ಲಕ್ಷ ವರ್ಗಾವಣೆಗಳು ನಡೆದಿವೆ ಎಂದು ಹೇಳಿದರು.
ಡಿಜಿಟಲ್ ಹಾಗೂ ನಗದು ರಹಿತ ಪಾವತಿಯ ಸರಕಾರದ ಉದ್ದೇಶ ಶ್ಲಾಘಿಸಿದ ಜಯಾ ಬಚ್ಚನ್, ಸಾಕಷ್ಟು ಮೂಲಭೂತ ಸೌಕರ್ಯ ಇಲ್ಲದೇ ಇರುವುದರಿಂದ ಡಿಜಿಟಲ್ ಪಾವತಿಗೆ ಅಡ್ಡಿ ಉಂಟಾಗುತ್ತಿದೆ ಎಂದರು.
ನೋಟು ನಿಷೇಧವನ್ನು ಸರಿಯಾಗಿ ಯೋಜಿಸಿಲ್ಲ ಹಾಗೂ ಇದರಿಂದ ದೇಶದ ಜನತೆ ಗೊಂದಲ ಹಾಗೂ ಸಂಕಷ್ಟ ಎದುರಿಸಿದರು. ದೇಶದಲ್ಲಿ ಒಟ್ಟು 20 ಲಕ್ಷ ಪಿಒಎಸ್ (ಕಾರ್ಡ್ ಮೂಲಕ ಪಾವತಿಸುವ) ಮೆಷಿನ್ ಅಗತ್ಯ ಇದೆ. ಆದರೆ, 15.1 ಲಕ್ಷ ಮಷಿನ್ ಮಾತ್ರ ಇದೆ ಎಂದು ಜಯಾ ಬಚ್ಚನ್ ಹೇಳಿದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications