ಮುರಿದುಬಿದ್ದ ಟ್ವಿಟ್ಟರ ಖರೀದಿ ಒಪ್ಪಂದ: ಮಸ್ಕ್ ವಿರುದ್ಧ ಲೀಗಲ್ ಫೈಟ್ಗೆ ನಿರ್ಧಾರ
ಸಾಮಾಜಿಕ ಮಾಧ್ಯಮ ಟ್ವಿಟರ್ ಖರೀದಿ ಒಪ್ಪಂದ ಮುರಿದುಬೀಳುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ. ಯಾಕೆಂದರೆ ಉದ್ಯಮಿ ಎಲಾನ್ ಮಸ್ಕ್ ಅವರು ಸ್ವತಃ ಟ್ವಿಟರ್ 44 ಬಿಲಿಯನ್ ಖರೀದಿ ಒಪ್ಪಂದವನ್ನು ಕೊನೆಗೊಳಿಸುವುದಾಗಿ ಹೇಳಿಕೊಂಡಿದ್ದಾರೆ. ಹೀಗಾಗಿ ಟ್ವಿಟ್ಟರ್ ಈಗ ಟೆಸ್ಲಾ ಸಿಇಒ ಎಲೋನ್ ಮಸ್ಕ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಯೋಜಿಸಿದೆ. ಪ್ಲಾಟ್ಫಾರ್ಮ್ನಲ್ಲಿನ ನಕಲಿ ಖಾತೆಗಳ ಸಂಖ್ಯೆಯ ಬಗ್ಗೆ ಸಾಕಷ್ಟು ಮಾಹಿತಿ ನೀಡಲು ಟ್ವಿಟರ್ ವಿಫಲವಾಗಿದೆ ಎಂದು ಮಸ್ಕ್ ಆರೋಪಿಸಿದೆ. ಹೀಗಾಗಿ ಇತ್ತೀಚಿನ ದಿನಗಳಲ್ಲಿ ಅತಿದೊಡ್ಡ ಟ್ವಿಟ್ಟರ್ ಖರೀದಿ ಒಪ್ಪಂದ ಕೊನೆಗೊಳಿಸುತ್ತಿರುವುದಾಗಿ ಮಸ್ಕ್ ಹೇಳಿಕೊಂಡಿದ್ದಾರೆ.
ಆದರೆ, ಮಸ್ಕ್ ಅವರ ಈ ನಿರ್ಧಾರದ ವಿರುದ್ಧ ಟ್ವಿಟ್ಟರ್ ಕಾನೂನು ಕ್ರಮಕ್ಕೆ ಮುಂದಾಗಿದೆ. ಒಂದು ವೇಳೆ ಮಸ್ಕ್ ಒಪ್ಪಂದದಿಂದ ಹಿಂದೆ ಸರಿಯಲು ನಿರ್ಧರಿಸಿದರೆ, ಅವರು $1 ಬಿಲಿಯನ್ ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಟ್ವಿಟರ್ ಮತ್ತು ಮಸ್ಕ್ ಇಬ್ಬರೂ ಏಪ್ರಿಲ್ನಲ್ಲಿ ನಡೆದ ಒಡಂಬಡಿಕೆ ವೇಳೆ ಒಪ್ಪಿಕೊಂಡಿದ್ದರು. ಆದರೆ ಸ್ಪ್ಯಾಮ್ ಖಾತೆಗಳ ಸಾಕಷ್ಟು ಕುರಿತ ಮಾಹಿತಿ(ಡೇಟಾ)ಯನ್ನು ಟ್ವಿಟರ್ ನೀಡಲು ವಿಫಲವಾಗಿದ್ದು, ಹೀಗಾಗಿ 44 ಶತಕೋಟಿ ಡಾಲರ್ಗೆ ಖರೀದಿಸುವ ಒಪ್ಪಂದಕ್ಕೆ ಬ್ರೇಕ್ ಬಿದ್ದಿದೆ ಎಂದು ಮಸ್ಕ್ ಹೇಳಿದ್ದಾರೆ.

ಟ್ವಿಟ್ಟರ್ ಅಗತ್ಯ ಮಾಹಿತಿಗಳ ಬಗ್ಗೆ ಎರಡು ತಿಂಗಳ ಕಾಲ ಸರಿಯಾದ ಮಾಹಿತಿಯನ್ನು ನೀಡಿಲ್ಲ. ಕೆಲವೊಮ್ಮೆ ನಮ್ಮ ಹಲವು ವಿನಂತಿಗಳಿಗೆ ಪ್ರತಿಕ್ರಿಯಿಸಲು ಟ್ವಿಟ್ಟರ್ ನಿರಾಕರಿಸಿದೆ ಅಥವಾ ಮಾಹಿತಿಯನ್ನು ಒದಗಿಸಲಿಲ್ಲ. ಕೆಲವೊಮ್ಮೆ ಟ್ವಿಟ್ಟರ್, ತನ್ನ ವಿನಂತಿಗಳನ್ನು ನಿರ್ಲಕ್ಷಿಸಿದೆ, ಕೆಲವೊಮ್ಮೆ ಅದು ಅಸಮರ್ಥಿಸಿಕೊಂಡಿದೆ ಈ ಎಲ್ಲಾ ಕಾರಣಗಳಿಗೆ ಈ ಒಪ್ಪಂದ ಮುರಿದುಬಿದ್ದಿದೆ ಎನ್ನಲಾಗುತ್ತಿದೆ.

ಏಪ್ರಿಲ್ನಲ್ಲಿ, ಮಸ್ಕ್ ಪ್ರತಿ ಷೇರಿಗೆ US$54.20 ರಂತೆ ಸರಿಸುಮಾರು US$44 ಶತಕೋಟಿಗೆ ಟ್ವಿಟರ್ನೊಂದಿಗೆ ಸ್ವಾಧೀನಪಡಿಸಿಕೊಳ್ಳುವ ಒಪ್ಪಂದಕ್ಕೆ ಸಹಿ ಹಾಕಿದರು. ಆದಾಗ್ಯೂ, ಪ್ಲಾಟ್ಫಾರ್ಮ್ನಲ್ಲಿ ಶೇಕಡಾ 5 ಕ್ಕಿಂತ ಕಡಿಮೆ ಖಾತೆಗಳು ಬಾಟ್ಗಳು ಅಥವಾ ಸ್ಪ್ಯಾಮ್ಗಳಾಗಿವೆ ಎಂಬ ಟ್ವಿಟರ್ನ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು ತಮ್ಮ ತಂಡಕ್ಕೆ ಅವಕಾಶ ಮಾಡಿಕೊಡಲು ಮಸ್ಕ್ ಒಪ್ಪಂದವನ್ನು ಮೇ ತಿಂಗಳಲ್ಲಿ ನಿಲ್ಲಿಸಿದರು.

ಜೂನ್ನಲ್ಲಿ, ಮಸ್ಕ್ ಮೈಕ್ರೋಬ್ಲಾಗಿಂಗ್ ವೆಬ್ಸೈಟ್ ವಿಲೀನ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಬಹಿರಂಗವಾಗಿ ಆರೋಪಿಸಿದರು ಮತ್ತು ಸ್ಪ್ಯಾಮ್ ಮತ್ತು ನಕಲಿ ಖಾತೆಗಳಲ್ಲಿ ಅವರು ವಿನಂತಿಸಿದ ಡೇಟಾವನ್ನು ಒದಗಿಸದಿದ್ದಕ್ಕಾಗಿ ಸಾಮಾಜಿಕ ಮಾಧ್ಯಮ ಕಂಪನಿಯ ಸ್ವಾಧೀನವನ್ನು ಮುಚ್ಚುವುದಾಗಿ ಬೆದರಿಕೆ ಹಾಕಿದರು. ಒಪ್ಪಂದದ ಮೂಲಕ ವಿವರಿಸಿದಂತೆ ಟ್ವಿಟರ್ "ಅವರ ಮಾಹಿತಿ ಹಕ್ಕುಗಳನ್ನು ತಡೆಯುತ್ತಿದೆ" ಎಂದು ಮಸ್ಕ್ ಆರೋಪಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications