ಉದ್ಯಮಿ ಬಿ.ಆರ್ ಶೆಟ್ಟಿ ಸಂಸ್ಥೆ ಕಪ್ಪು ಪಟ್ಟಿಗೆ, ಬ್ಯಾಂಕ್ ಖಾತೆ ಸ್ಥಗಿತ
ದುಬೈ, ಏಪ್ರಿಲ್ 28: ಅನಿವಾಸಿ ಭಾರತೀಯ ಉದ್ಯಮಿ ಬಿ. ರಘುರಾಮ್ ಶೆಟ್ಟಿ ಅವರು ತಾವೇ ಸ್ಥಾಪಿಸಿದ ಸಂಸ್ಥೆಯಿಂದ ಹೊರನಡೆದಿದ್ದಂತೆ ಸಂಕಷ್ಟಗಳು ಮುಂದುವರೆದಿವೆ. ಬಿಲಿಯನೇರ್ ಬಿಆರ್ ಶೆಟ್ಟಿ ಅವರ ಎನ್ಎಂಸಿ ಸೇರಿದಂತೆ ಹಲವು ಸಂಸ್ಥೆಗಳನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ, ಸಂಬಂಧಪಟ್ಟ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಯುಎಇ ಸರ್ಕಾರ ಪ್ರಕಟಿಸಿದೆ.
ಗಲ್ಫ್ ನ್ಯೂಸ್ ಪ್ರಕಟಣೆಯಂತೆ ಯುಎಇಯ ಸೆಂಟ್ರಲ್ ಬ್ಯಾಂಕ್(ಸಿಬಿ ಯುಎಇ) ಈ ಕುರಿತಂತೆ ಎಲ್ಲಾ ಬ್ಯಾಂಕ್, ಆರ್ಥಿಕ ಸಂಸ್ಥೆಗಳಿಗೆ ನಿರ್ದೇಶನ ನೀಡಿದ್ದು, ಶೆಟ್ಟಿ ಅವರ ಖಾತೆಗೆ ಹಣ ರವಾನೆ, ಹಣ ಜಮೆ ಆಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ಶೆಟ್ಟಿ ಹಾಗೂ ಕುಟುಂಬಸ್ಥರ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸೂಚಿಸುವಂತೆ ಅಟರ್ನಿ ಜನರಲ್ ಕೋರಿಕೊಂಡಿದ್ದರು.
ಎನ್ಎಂಸಿ ಬೋರ್ಡ್ ನಿಂದ ಹನಿ ಬುತ್ತಿಖಿ, ಅಬ್ದುರ್ ರೆಹ್ಮಾನ್ ಬಸದ್ದಿಕ್ ಸೇರಿದಂತೆ ನಾಲ್ವರು ರಾಜೀನಾಮೆ ಸಲ್ಲಿಸಿದ್ದಾರೆ. ಸಂಸ್ಥೆಯ ಷೇರುಗಳ ಗಾತ್ರ, ಮೌಲ್ಯದ ಬಗ್ಗೆ ತಪ್ಪು ಮಾಹಿತಿ ನೀಡಿದ ಕಾರಣಕ್ಕೆ ಶೆಟ್ಟಿ ಅವರನ್ನು ತಮ್ಮ ಸ್ಥಾನದಿಂದ ಕೆಳಗಿಳಿಯುವಂತೆ ಬೋರ್ಡ್ ಸದಸ್ಯರು ಆಗ್ರಹಿಸಿದ್ದರು. ಒತ್ತಡಕ್ಕೆ ಮಣಿದು, ತಮ್ಮ ಸ್ಥಾನಕ್ಕೆ ಶೆಟ್ಟಿ ರಾಜೀನಾಮೆ ಸಲ್ಲಿಸಿದ್ದರು.

ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಅತಿದೊಡ್ಡ ಮೆಡಿಕಲ್ ಜಾಲ ಹೊಂದಿರುವ ಎನ್ಎಂಸಿ, 2012ರಲ್ಲಿ ಲಂಡನ್ ಷೇರುಪೇಟೆಯಲ್ಲಿ ಲಿಸ್ಟಿಂಗ್ ಪಡೆದ ಮೊದಲ ಅಬುಧಾಬಿ ಕಂಪನಿ ಎನಿಸಿಕೊಂಡಿತ್ತು.77 ವರ್ಷ ವಯಸ್ಸಿನ ಶೆಟ್ಟಿ ಅವರು 1970ರಲ್ಲಿ ಎನ್ಎಂಸಿ ಸ್ಥಾಪಿಸಿದ್ದು, ಶೆಟ್ಟಿ ಅವರ ಪತ್ನಿ, ಅಳಿಯ ಕೂಡಾ ಸಂಸ್ಥೆಯಲ್ಲಿ ಷೇರು ಹೊಂದಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications