ಇಂಗ್ಲೆಂಡ್ 300 ವರ್ಷಗಳಲ್ಲೇ ಕಾಣದ ಭೀಕರ ಆರ್ಥಿಕ ಹಿಂಜರಿತ ಎದುರಿಸಲಿದೆ!
ಲಂಡನ್, ನವೆಂಬರ್ 27: ಈ ವರ್ಷ ಕೋವಿಡ್-19 ಬಿಕ್ಕಟ್ಟಿನ ಪರಿಣಾಮದಿಂದಾಗಿ ಇಂಗ್ಲೆಂಡ್ ಆರ್ಥಿಕತೆಯು ಶೇಕಡಾ 11.3ರಷ್ಟು ಕುಗ್ಗುವ ಮುನ್ಸೂಚನೆ ಸಿಕ್ಕಿದ್ದು, ದೇಶದಲ್ಲಿ 300ಕ್ಕೂ ಹೆಚ್ಚು ವರ್ಷಗಳಲ್ಲಿ ಉಂಟಾದ ಭೀಕರ ಆರ್ಥಿಕ ಹಿಂಜರಿತವಾಗಿದೆ ಎಂದು ಬ್ರಿಟನ್ ಹಣಕಾಸು ಸಚಿವ ರಿಷಿ ಸುನಕ್ ಬುಧವಾರ ಹೇಳಿದ್ದಾರೆ.
2022 ರ ಅಂತ್ಯದವರೆಗೆ ಆರ್ಥಿಕತೆಯು ತನ್ನ ಪೂರ್ವ ಕೊರೊನಾವೈರಸ್ ಮಟ್ಟಕ್ಕೆ ಮರಳುತ್ತದೆ ಎಂದು ಆಫೀಸ್ ಆಫ್ ರೆಸ್ಪಾನ್ಸಿಬಿಲಿಟಿ (ಒಬಿಆರ್) ನಿರೀಕ್ಷಿಸಿರಲಿಲ್ಲ ಎಂದು ಸಚಿವರು, ಬ್ರಿಟನ್ ಶಾಸಕರಿಗೆ ತಿಳಿಸಿದರು.
ಇದರ ಜೊತೆಗೆ ಸಾಂಕ್ರಾಮಿಕ ರೋಗದಿಂದಾಗಿರುವ ಹಣಕಾಸಿನ ಹಾನಿ 'ಶಾಶ್ವತವಾಗಬಹುದು' ಎಂದು ಸುನಕ್ ಹೇಳಿದ್ದಾರೆ. 2021 ರ ಎರಡನೇ ತ್ರೈಮಾಸಿಕದಲ್ಲಿ ನಿರುದ್ಯೋಗವು ಶೇ. 7.5 ರಷ್ಟು ಅಥವಾ 2.6 ಮಿಲಿಯನ್ ಜನರಿಗೆ ಏರಿಕೆಯಾಗಲಿದೆ ಎಂದು ಒಬಿಆರ್ ಅಂಕಿಅಂಶಗಳನ್ನು ಉಲ್ಲೇಖಿಸಿದ್ದಾರೆ.

ಕೊರೊನಾವೈರಸ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಮೊದಲ ಆರ್ಥಿಕ ಖರ್ಚಿನ ವಿಮರ್ಶೆಯನ್ನು ಪ್ರಕಟಿಸಿದ ಸುನಕ್, 'ಆರ್ಥಿಕ ತುರ್ತುಸ್ಥಿತಿ ಈಗಷ್ಟೇ ಪ್ರಾರಂಭವಾಗಿದೆ' ಎಂದು ಎಚ್ಚರಿಸಿದ್ದಾರೆ.
ಕೋವಿಡ್ ಬಿಕ್ಕಟ್ಟಿನ ಪರಿಹಾರಕ್ಕಾಗಿ ಬ್ರಿಟನ್ ಸರ್ಕಾರ 280 ಬಿಲಿಯನ್ ಪೌಂಡ್ಗಳನ್ನು (ಸುಮಾರು 374.1 ಬಿಲಿಯನ್ ಯುಎಸ್ ಡಾಲರ್) ಖರ್ಚು ಮಾಡಿದೆ ಮತ್ತು ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಮುಂದಿನ ವರ್ಷ ಇನ್ನೂ 55 ಬಿಲಿಯನ್ ಪೌಂಡ್ಗಳನ್ನು (ಸುಮಾರು 73.5 ಬಿಲಿಯನ್ ಡಾಲರ್) ಖರ್ಚು ಮಾಡಲು ಉದ್ದೇಶಿಸಿದೆ ಎಂದು ತಿಳಿಸಿದರು.
Recommended Video
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications