ಸಂಬಳದಾರರ ತಲೆಗೆ ಹುಳ ಬಿಟ್ಟ ನಿರ್ಮಲಾ ತೆರಿಗೆ ಲೆಕ್ಕಾಚಾರ!
Recommended Video
ನವದೆಹಲಿ, ಫೆಬ್ರವರಿ 01: ಮಧ್ಯಮ ವರ್ಗದ ಕೈಲಿಗೆ ಹೆಚ್ಚಿನ ನಗದು ಸೇರಲಿದ್ದು, ಇದರಿಂದ ವ್ಯಾಪಾರ, ವಹಿವಾಟು, ಖರೀದಿ ಪ್ರಕ್ರಿಯೆಗೆ ಹೆಚ್ಚಿನ ಉತ್ತೇಜನ ಸಿಗಲಿದೆ ಎಂಬ ಎಣಿಕೆಯೂ ಸುಳ್ಳಾಗಿದೆ. ಆದಾಯ ತೆರಿಗೆ ಸ್ಲ್ಯಾಬ್ ಪುನರ್ ರಚನೆ ಮಾಡಲಾಗಿದೆ. ಹೀಗೆ ಮಧ್ಯಮ ವರ್ಗದ ಸಂಬಳದಾರರ ಆದಾಯ ತೆರಿಗೆ ಲೆಕ್ಕಾಚಾರ ಗೊಂದಲವಾಗಿದ್ದು, ತಲೆಗೆ ಹುಳ ಬಿಟ್ಟಂಗಾಗಿದೆ.
ಆದಾಯ ತೆರಿಗೆ ಪಾವತಿ ಮಿತಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 5 ಲಕ್ಷ ರು ತನಕ ವಾರ್ಷಿಕ ಆದಾಯವಿರುವ ಸಂಬಳದಾರರು ಯಾವುದೇ ತೆರಿಗೆ ಪಾವತಿಸಬೇಕಾಗಿಲ್ಲ. ಇದಲ್ಲದೆ, ಹೊಸ ದರದಲ್ಲಿ ತೆರಿಗೆ ಪಾವತಿಸುವಾಗ ಸುಮಾರು 70 ರಿಯಾಯಿತಿಗಳು ಮಾಯವಾಗಲಿದೆ. ಹೊಸ ದರ ಪದ್ಧತಿ ಬಳಸಿ ಐಟಿ ರಿಟರ್ನ್ಸ್ ಮಾಡಬೇಕಾದರೆ ನಿಮ್ಮ ಜೊತೆಗೆ ಲೆಕ್ಕ ಪರಿಶೋಧಕರೊಬ್ಬರು ಇದ್ದರೆ ಒಳ್ಳೆಯದು. ಇಲ್ಲವೇ, ಹಳೆ ಮಾದರಿಯಲ್ಲಿ ರಿಯಾಯಿತಿಯೊಂದಿಗೆ ರಿಟರ್ನ್ಸ್ ಫೈಲ್ ಮಾಡಬಹುದು.
ವೇತನದಾರ ವರ್ಗಗಳ ಬೇಡಿಕೆಯನ್ನು ಪರಿಗಣಿಸಿರುವ ಮೋದಿ ಸರ್ಕಾರ ಹಾಲಿ 5 ಲಕ್ಷ ರುಗಳ ಮಿತಿ ಬದಲಾಗಿ 7 ಲಕ್ಷ ರು ಗಳ ತನಕ ಆದಾಯ ತೆರಿಗೆ ಅಗತ್ಯವಿಲ್ಲ ಎಂಬ ಸುದ್ದಿಗೆ ಕಾದಿದ್ದವರಿಗೆ ನಿರಾಶೆಯಾಗಿದೆ.

ತೆರಿಗೆ ಪಾವತಿ ಮೂಲ ಮಿತಿಯಾದ 2.5 ಲಕ್ಷ ರುಗಳನ್ನು 2014ರಿಂದ ಇಲ್ಲಿ ತನಕ ಬದಲಾಯಿಸಿಲ್ಲ. ಪ್ರಸ್ತುತ ಬಜೆಟ್ ನಲ್ಲಿ ಈ ಮಿತಿಯನ್ನು 3 ಲಕ್ಷ ರುಗಳಿಗೆ ಏರಿಸಲು ಬೇಡಿಕೆ ಬಂದಿತ್ತು. ಆದರೆ, ಈಗಾಗಲೇ ವೈಯಕ್ತಿಕ ಆದಾಯ 5 ಲಕ್ಷರು ತನಕ ಹೊಂದಿರುವವರು ಸೆಕ್ಷನ್ 87ಎ ಅಡಿಯಲ್ಲಿ ಪೂರ್ತಿ ತೆರಿಗೆ ರಿಬೇಟ್ ಪಡೆಯಬಹುದಾಗಿದೆ. ಹೀಗಾಗಿ, ಮೂಲ ಮಿತಿಯನ್ನು ಬದಲಾಯಿಸಿಲ್ಲ.
ಏನೆಲ್ಲ ರಿಯಾಯಿತಿ ಸಿಗುತ್ತಿತ್ತು?:
ಹಳೆ ತೆರಿಗೆ ಪದ್ಧತಿಯಲ್ಲಿ ವಿಮೆ, ಹೂಡಿಕೆ, ಮನೆ ಬಾಡಿಗೆ, ವೈದ್ಯಕೀಯ, ಮಕ್ಕಳ ಶಾಲಾ ಶುಲ್ಕದಂಥ ಒಟ್ಟು 100 ರಿಯಾಯಿತಿಗಳನ್ನು ನೀಡಲಾಗಿತ್ತು. ಇದರಲ್ಲಿ 70 ರಿಯಾಯಿತಿಗಳನ್ನು ರದ್ದುಪಡಿಸಲಾಗಿದೆ. ಆದರೆ, ತೆರಿಗೆದಾರರಿಗೆ ಹಾಲಿ ಆದಾಯ ತೆರಿಗೆ ಮಾದರಿ ಅಥವಾ ಹೊಸ ಆದಾಯ ತೆರಿಗೆ ದರವನ್ನು ಆಯ್ಕೆ ಮಾಡಬಹುದು.
ಹಳೆಯ ಮಾದರಿಯಲ್ಲಿ ಆದಾಯ ತೆರಿಗೆಯನ್ನು ಪಾವತಿಸಿದರೆ, ತೆರಿಗೆಗೆ ಒಳಪಡುವ ಆದಾಯದಲ್ಲಿ ಲಭ್ಯವಿರುವ ಎಲ್ಲಾ ರಿಯಾಯಿತಿಗಳ ಲಾಭ ಸಿಗಲಿದೆ. ಹೊಸ ಮಾದರಿಯಲ್ಲಿ ತೆರಿಗೆ ಪಾವತಿಸಬೇಕಾದರೆ, ಎಲ್ಲಾ ರಿಯಾಯಿತಿಗಳು ಮಾಯವಾಗಲಿದೆ. ವಿಮೆ, ಸಣ್ಣ ಉಳಿತಾಯ ಯೋಜನೆಗಳ ಮೇಲೆ ಇದು ಪರಿಣಾಮ ಬೀರಲಿದ್ದು, ಮುಂಬರುವ ದಿನಗಳಲ್ಲಿ ಎಲ್ಲಾ ರೀತಿಯ ತೆರಿಗೆ ಕಡಿತ, ರಿಯಾಯಿತಿಗಳನ್ನು ಕಡಿಮೆ ಮಾಡುವತ್ತ ಸರ್ಕಾರ ಹೆಜ್ಜೆ ಇರಿಸಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications