Union Budget 2025: ಆರ್ಥಿಕ ಸಮೀಕ್ಷೆ ಮಂಡನೆ: ಶೇಕಡ 6.3ರಿಂದ 6.8 ರವರೆಗೆ ಜಿಡಿಪಿ ಹೆಚ್ಚಳ ನಿರೀಕ್ಷೆ
Budget Session: ಇಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಅಧಿವೇಶನ ಇಂದು (ಜನವರಿ 31) ಆರಂಭವಾಗಿದೆ. ರಾಷ್ಟ್ರಪತಿಗಳ ಭಾಷಣ ಬಳಿಕ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನ ಉಭಯ ಸದನಗಳಲ್ಲಿ 2024-25ರ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದ್ದು, ಈ ಸಮೀಕ್ಷೆಯು 2025-26ರ ಹಣಕಾಸು ವರ್ಷದ ಜಿಡಿಪಿ ಬೆಳವಣಿಗೆಯನ್ನು ಶೇಕಡಾ 6.3 ಮತ್ತು ಶೇಕಡಾ 6.8ರ ನಡುವೆ ಇರಬಹುದೆಂದು ಅಂದಾಜಿಸಲಾಗಿದೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ ಅಂದರೆ 2025ರ ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಮಂಡನೆಗೆ ಇನ್ನೂ ಕೆಲವೇ ಕ್ಷಣಗಳು ಮಾತ್ರ ಬಾಕಿಯಿವೆ. ಇದು ನಿರ್ಮಲಾ ಸೀತಾರನ್ ಅವರು ಮಂಡಿಸುವ 8ನೇ ಬಜೆಟ್ ಆಗಲಿದೆ. ಅಲ್ಲದೆ, ಈ ಮೂಲಕ ಹೆಚ್ಚು ಬಜೆಟ್ ಮಂಡನೆ ಮಾಡಿದ ಕೀರ್ತಿಗೆ ಪಾತ್ರರಾಗಲಿದ್ದಾರೆ.

ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರ ಮಾರ್ಗದರ್ಶನದಲ್ಲಿ ಹಣಕಾಸು ಸಚಿವಾಲಯ ಸಿದ್ಧಪಡಿಸಿದ ವಾರ್ಷಿಕ ವರದಿಯಾದ ಈ ಸಮೀಕ್ಷೆಯ ಪ್ರಸಕ್ತ ವರ್ಷದ ಭಾರತದ ಆರ್ಥಿಕತೆಯ ಒಳನೋಟ ನೀಡುತ್ತದೆ ಮತ್ತು ಕೇಂದ್ರ ಬಜೆಟ್ಗೆ ಮುಂಚಿತವಾಗಿ ನೀತಿ ನಿರೂಪಕರಿಗೆ ಒಂದು ದಿಕ್ಸೂಚಿ ನೀಡುತ್ತದೆ.
ನಿಧಾನಗತಿಯ ಜಿಡಿಪಿ ಬೆಳವಣಿಗೆ, ದುರ್ಬಲ ಬಳಕೆ ಮತ್ತು ಖಾಸಗಿ ಹೂಡಿಕೆ ಮತ್ತು ಎಐ ಮತ್ತು ಆಟೋಮೇಶನ್ ಏರಿಕೆಯ ನಡುವೆ ಉದ್ಯೋಗ ಸೃಷ್ಟಿಯಲ್ಲಿನ ತೊಂದರೆಗಳು ಸೇರಿದಂತೆ ಇತ್ಯಾದಿ ಆರ್ಥಿಕತೆ ಸವಾಲುಗಳನ್ನು ಎದುರಿಸುತ್ತಿಸಲಾಗುತ್ತಿದೆ. ಈ ಹಿನ್ನೆಲೆ ಆರ್ಥಿಕ ಸಮೀಕ್ಷೆಯು ಈ ಕೆಲವು ಸಮಸ್ಯೆಗಳನ್ನು ಪರಿಹರಿಸುವ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ.
ಹಣಕಾಸು ಸಚಿವಾಲಯ ಮತ್ತು ಅದರ ಅಧಿಕಾರಿಗಳು ಆರ್ಥಿಕ ಸಮೀಕ್ಷೆಯನ್ನು ಸ್ವತಂತ್ರವಾಗಿ ತಯಾರಿಸುತ್ತಾರೆ. ಅದು ಬಜೆಟ್ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಹೇಳಿಕೊಂಡರೂ, ಮುಂಬರುವ ಸಂಭಾವ್ಯ ಬೆಳವಣಿಗೆಗಳ ಬಗ್ಗೆ ಒಳನೋಟಗಳನ್ನು ನೀಡುತ್ತದೆ. ಕಳೆದ ವರ್ಷ, ಆರ್ಥಿಕ ಸಮೀಕ್ಷೆಯು ಶೇಕಡಾ 6.5ರಿಂದ ಶೇಕಡಾ 7ರಷ್ಟು ಕಡಿಮೆ ಬೆಳವಣಿಗೆಯ ದರವನ್ನು ಮುನ್ಸೂಚಿಸಿತ್ತು.
ಇದು ಆರ್ಬಿಐ ಯೋಜಿಸಿದ ಶೇಕಡಾ 7.2ಕ್ಕಿಂತ ಕಡಿಮೆ ಆಗಿದೆ. ಸಮೀಕ್ಷೆಯ ವಿಷಯ ಆರ್ಥಿಕ ಸ್ಥಿತಿಸ್ಥಾಪಕತ್ವ ಮತ್ತು 2024ರ ಕೇಂದ್ರ ಬಜೆಟ್ನಲ್ಲಿ ಪ್ರಸ್ತಾಪಿಸಲಾದ ನೀತಿಗಳಿಗೆ ಅನ್ವಯಿಸಿತ್ತು.ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನವದೆಹಲಿಯಲ್ಲಿ ಮುಂಬರುವ 2025-26ರ ಕೇಂದ್ರ ಬಜೆಟ್ಗೆ ಸಂಬಂಧಿಸಿದಂತೆ ಪಾಲುದಾರರು ಮತ್ತು ಕಾರ್ಮಿಕ ಸಂಘಗಳ ಪ್ರತಿನಿಧಿಗಳೊಂದಿಗೆ 8ನೇ ಬಜೆಟ್ ಪೂರ್ವ ಸಮಾಲೋಚನೆಯ ಅಧ್ಯಕ್ಷತೆ ವಹಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications