ಬ್ಯಾಂಕುಗಳ ವಿಲೀನಕ್ಕೆ ಸಂಪುಟ ಒಪ್ಪಿಗೆ: ಬರಿ ನೆನಪಾಗಿ ಉಳಿಯಲಿದೆ ವಿಜಯಾ ಬ್ಯಾಂಕ್
ನವದೆಹಲಿ, ಜನವರಿ 2: ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ಮತ್ತು ವಿವಿಧ ವಲಯದ ಜನರ ತೀವ್ರ ವಿರೋಧದ ನಡುವೆಯೂ ದೇಶದ ಮೂರು ಪ್ರಮುಖ ಬ್ಯಾಂಕುಗಳಾದ ವಿಜಯಾ ಬ್ಯಾಂಕ್ ಮತ್ತು ದೇನಾ ಬ್ಯಾಂಕ್ಗಳನ್ನು ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನಗೊಳಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಈ ವಿಲೀನವು ಏಪ್ರಿಲ್ 1ರಿಂದ ಜಾರಿಯಾಗಲಿದ್ದು, ಇದರ ಮೂಲಕ ಬ್ಯಾಂಕ್ ಆಫ್ ಬರೋಡಾ ದೇಶದ ಮೂರನೇ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಎನಿಸಿಕೊಳ್ಳಲಿದೆ.
ಭಾರತದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಇದೇ ಮೊದಲ ಬಾರಿಗೆ ಮೂರು ಬ್ಯಾಂಕುಗಳನ್ನು ವಿಲೀನಗೊಳಿಸಲಾಗುತ್ತಿದೆ.

ವಿಜಯಾ ಬ್ಯಾಂಕ್ ಮತ್ತು ದೇನಾ ಬ್ಯಾಂಕ್ನ ಎಲ್ಲ ಉದ್ಯೋಗಿಗಳನ್ನೂ ಬ್ಯಾಂಕ್ ಆಫ್ ಬರೋಡಾಕ್ಕೆ ವರ್ಗಾವಣೆ ಮಾಡಲಾಗುತ್ತದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ವಿಲೀನ ಪ್ರಕ್ರಿಯೆಯಲ್ಲಿ ಯಾರನ್ನೂ ಕೆಲಸದಿಂದ ತೆಗೆದುಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬ್ಯಾಂಕ್ ಆಫ್ ಬರೋಡಾ ಮತ್ತು ದೇನಾ ಬ್ಯಾಂಕ್ಗಳ ಸಾರ್ವಜನಿಕ ಸಾಲದಾರರ ಮಂಡಳಿಗಳು ಎರಡು ಬ್ಯಾಂಕುಗಳ ವಿಲೀನದ ಪ್ರಸ್ತಾವಕ್ಕೆ ವಿನಿಮಯ ಅನುಪಾತಕ್ಕೆ ಬುಧವಾರ ಅನುಮೋದನೆ ನೀಡಿವೆ.
ತನ್ನ ಷೇರುದಾರರು ತಾವು ಹೊಂದಿರುವ ಪ್ರತಿ ಸಾವಿರ ಷೇರಿನ ಮೇಲೆ 2 ರೂ ಮೌಲ್ಯದಂತೆ ಬ್ಯಾಂಕ್ ಆಫ್ ಬರೋಡಾದ 110 ಈಕ್ವಿಟಿ ಷೇರುಗಳನ್ನು ಪಡೆದುಕೊಳ್ಳಲಿದ್ದಾರೆ ಎಂದು ದೇನಾ ಬ್ಯಾಂಕ್ ತಿಳಿಸಿದೆ.
ವಿಜಯಾ ಬ್ಯಾಂಕ್ನ ಷೇರುದಾರರು ತಾವು ಹೊಂದಿರುವ ಪ್ರತಿ ಸಾವಿರ ಷೇರುಗಳ ಮೇಲೆ ಬ್ಯಾಂಕ್ ಆಫ್ ಬರೋಡಾದ 402 ಈಕ್ವಿಟಿ ಷೇರುಗಳನ್ನು ಪಡೆದುಕೊಳ್ಳಲಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications