ಎಸ್ಬಿಐನಲ್ಲಿ ವಿಲೀನಗೊಳ್ಳುತ್ತಿರುವ 5 ಬ್ಯಾಂಕ್ಗಳು ಯಾವವು?
ನವದೆಹಲಿ, ಜೂನ್, 16: ಬ್ಯಾಂಕ್ ನೌಕರರ ವಿರೋಧದ ನಡುವೆಯೂ ಭಾರತೀಯ ಸ್ಟೇಟ್ ಬ್ಯಾಂಕ್ನಲ್ಲಿ (ಎಸ್ಬಿಐ) ಐದು ಸಹವರ್ತಿ ಬ್ಯಾಂಕ್ಗಳ ವಿಲೀನ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ತಾತ್ವಿಕ ಒಪ್ಪಿಗೆ ನೀಡಿದೆ.
ಸಾಲ ಮರುಪಾವತಿಯಲ್ಲಿನ ಸಮಸ್ಯೆ ಪರಿಣಾಮ ಸಹವರ್ತಿ ಬ್ಯಾಂಕ್ ಗಳು ಸಂಕಷ್ಟಕ್ಕೆ ಸಿಲುಕುತ್ತಿವೆ. ಇದರ ನಿವಾರಣೆಗೆ ವಿಲೀನ ಪರಿಹಾರ ಎಂಬ ಆಧಾರದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.[ಎಸ್ಬಿಐನಲ್ಲಿ ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನಾಂಕ]

ವಿಲೀನಗೊಳ್ಳುತ್ತಿರುವ ಬ್ಯಾಂಕ್ ಗಳು ಯಾವವು?
* ಸ್ಟೇಟ್ ಬ್ಯಾಂಕ್ ಬಿಕನೇರ್ ಮತ್ತು ಜೈಪುರ
* ಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೂರ್
* ಸ್ಟೇಟ್ ಬ್ಯಾಂಕ್ ಆಫ್ ಪಟಿಯಾಲ
* ಸ್ಟೇಟ್ ಬ್ಯಾಂಕ್ ಆಫ್ ಮೈಸೂರು
* ಮತ್ತು ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್[ಎಟಿಎಂ ಪಿನ್ ಮರೆತುಹೋಗಿದೆಯಾ? ಮೊಬೈಲ್ ಒಟಿಪಿ ನೋಡಿ]
ಇದರ ಜತಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜೊತೆ ಭಾರತೀಯ ಮಹಿಳಾ ಬ್ಯಾಂಕ್ ನ್ನು ಸಹ ವಿಲೀನ ಮಾಡುವ ಪ್ರಸ್ತಾವನೆಗೆ ಒಪ್ಪಿಗೆ ಮೊದಲೇ ಸಿಕ್ಕಿತ್ತು. ಐದು ಸಹವರ್ತಿ ಬ್ಯಾಂಕ್ಗಳು ಮತ್ತು ಭಾರತೀಯ ಮಹಿಳಾ ಬ್ಯಾಂಕನ್ನು (ಬಿಎಂಬಿ) ತನ್ನಲ್ಲಿ ವಿಲೀನಗೊಳಿಸಿಕೊಳ್ಳುವುದಕ್ಕೆ ಎಸ್ಬಿಐ ಆಡಳಿತ ಮಂಡಳಿಯು ಅನುಮತಿ ನೀಡಿತ್ತು. ಸಹವರ್ತಿ ಬ್ಯಾಂಕ್ಗಳ ಆಡಳಿತ ಮಂಡಳಿಗಳು ಕೂಡ ವಿಲೀನ ಪರ ನಿರ್ಧಾರ ಕೈಗೊಂಡಿದ್ದವು. ಆದರೆ ಸಹವರ್ತಿ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಿದ್ದರು.[ಒಟಿಪಿ ಎಂದರೇನು? ಪಡೆದುಕೊಳ್ಳುವುದು ಹೇಗೆ?]
ಯಾಕಾಗಿ ವಿಲೀನ?
ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳಿಗೆ ಹೆಚ್ಚಿನ ಬಂಡವಾಳ ಒದಗಿಸುವುದು. ಸಣ್ಣ ಬ್ಯಾಂಕ್ಗಳನ್ನು ದೊಡ್ಡ ಬ್ಯಾಂಕ್ನಲ್ಲಿ ವಿಲೀನಗೊಳಿಸಿ ಏಕರೂಪದ ವ್ಯವಸ್ಥೆ ಜಾರಿ ಮಾಡುವುದು ಈ ನೂತನ ಕ್ರಮದ ಹಿಂದಿರುವ ಉದ್ದೇಶ. ಕೈಗಾರಿಕಾ ಕ್ಷೇತ್ರಕ್ಕೆ ಇದು ಹೆಚ್ಚಿನ ಕೊಡುಗೆ ನೀಡಲಿದೆ ಎಂದು ಭಾವಿಸಲಾಗಿದೆ.
ದೇಶದ ಅತಿ ದೊಡ್ಡ ಬ್ಯಾಂಕ್ನಲ್ಲಿ 5 ಸಹವರ್ತಿ ಬ್ಯಾಂಕ್ಗಳ ವಿಲೀನ ಮಾಡಿದರೆ ಎಲ್ಲರಿಗೂ ಲಾಭವಾಗುತ್ತದೆ ಎಂದು ಎಸ್ಬಿಐ ಅಧ್ಯಕ್ಷೆ ಅರುಂಧತಿ ಭಟ್ಟಾಚಾರ್ಯ ಅವರು ಪ್ರತಿಕ್ರಿಯಿಸಿದ್ದಾರೆ.[ಎಟಿಎಂ ಮೂಲಕ ಹಣ ಡಿಪಾಸಿಟ್ ಮಾಡೋದು ಹೇಗೆ?]
ವಿಶ್ವದ ಟಾಪ್ 50 ಬ್ಯಾಂಕ್ಗಳ ಸಾಲಿನಲ್ಲಿ ಭಾರತದ ಯಾವುದೇ ಬ್ಯಾಂಕ್ ಸ್ಥಾನ ಪಡೆದಿಲ್ಲ. ಈ ವಿಲೀನದ ಮೂಲಕ ಭಾರತದ ಬ್ಯಾಂಕ್ಗಳು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಲಿದ್ದು, ನಿರ್ವಹಣಾ ವೆಚ್ಚದ ಮೇಲೂ ಕಡಿತ ಮಾಡಬಹುದು ಎಂದು ಭಟ್ಟಾಚಾರ್ಯ ಹೇಳಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications