ರಿಸರ್ವ್ ಬ್ಯಾಂಕ್ಗೆ ಹೊಸ ಸಾರಥಿ ಉರ್ಜಿತ್ ಪಟೇಲ್
ನವದೆಹಲಿ, ಸೆಪ್ಟೆಂಬರ್, 05: ಭಾರತೀಯ ರಿಸರ್ವ್ ಬ್ಯಾಂಕ್ ನ ನೂತನ ಗವರ್ನರ್ ಆಗಿ ಉರ್ಜಿತ್ ಪಟೇಲ್ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ರಿಸರ್ವ್ ಬ್ಯಾಂಕಿನ 24ನೇ ಗವರ್ನರ್ ಎಂಬ ಶ್ರೇಯವನ್ನು ಪಡೆದುಕೊಂಡಿದ್ದಾರೆ.
ರಘುರಾಂ ರಾಜನ್ ಅವರಿಂದ ತೆರವಾದ ಸ್ಥಾನವನ್ನು ಉರ್ಜಿತ್ ಪಟೇಲ್ ಅಲಂಕರಿಸಿದ್ದಾರೆ. 2013ರಿಂದ ಇಲ್ಲಿಯವರೆಗೆ ಉಪ ಗವರ್ನರ್ ಆಗಿ ಪಟೇಲ್ ಸೇವೆ ಸಲ್ಲಿಸುತ್ತಾ ಬಂದಿದ್ದರು. 1998ರಿಂದ 2001ರವರೆಗೆ ಹಣಕಾಸು ಸಚಿವಾಲಯದಲ್ಲಿ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ.[RBIನಲ್ಲಿ ರಾಕ್ ಸ್ಟಾರ್ ರಘುರಾಂ ರಾಜನ್ ಶಕೆ ಮುಕ್ತಾಯ: ಟಾಪ್ 10ಹೇಳಿಕೆಗಳು]

52 ವರ್ಷ ವಯಸ್ಸಿನ ಪಟೇಲ್ ಅವರು ಆರ್ ಬಿಐ ಡೆಪ್ಯುಟಿ ಗವರ್ನರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಈಗ ಬಡ್ತಿ ಸಿಕ್ಕಿದೆ. ಆರ್ ಬಿಐ ಗವರ್ನರ್ ಅವಧಿ ಮೂರು ವರ್ಷದ್ದಾಗಿದೆ.
ಕೇಲ್ಕರ್ ಸಮಿತಿಯ ನೇರ ತೆರಿಗೆಗಳ ಕಾರ್ಯಪಡೆ, ನಾಗರಿಕ ಮತ್ತು ರಕ್ಷಣಾ ಸೇವೆ ಪಿಂಚಣಿ ವ್ಯವಸ್ಥೆಯ ಪರಾಮರ್ಶೆಯ ಉನ್ನತ ಮಟ್ಟದ ತಜ್ಞರ ಸಮಿತಿ, ಪ್ರಧಾನ ಮಂತ್ರಿಗಳ ಮೂಲಭೂತ ಸೌಕರ್ಯಗಳ ಕಾರ್ಯಪಡೆ, ಟೆಲಿಕಾಂ ಮ್ಯಾಟರ್ಸ್ ನ ಸಚಿವರ ಗುಂಪು, ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿಯೂ ಪಟೇಲ್ ಕೆಲಸ ಮಾಡಿದ್ದಾರೆ.[ಊರ್ಜಿತ್ ಪಟೇಲ್ ಯಾರು?]
ಖಾಸಗಿ ಮತ್ತ ಸಾರ್ವಜನಿಕ ಹಣಕಾಸು ವಲಯದಲ್ಲಿ ಅಪಾರ ಅನುಭವ ಮತ್ತು ಜ್ಞಾನ ಹೊಂದಿರುವ ಪಟೇಲ್ ಹೊಸ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಹಣದುಬ್ಬರ, ವಿದೇಶಿ ಬಂಡವಾಳ ಹೂಡಿಕೆ ಮತ್ತು ಪರಿಣಾಮ, ಅರ್ಥ ವ್ಯವಸ್ಥೆ ಸುಧಾರಣೆ ಸೇರಿದಂತೆ ಹಲವಾರು ಸವಾಲುಗಳು ಪಟೇಲ್ ಮುಂದಿವೆ.
-
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications