ರಿಸರ್ವ್ ಬ್ಯಾಂಕ್ಗೆ ಹೊಸ ಸಾರಥಿ ಉರ್ಜಿತ್ ಪಟೇಲ್
ನವದೆಹಲಿ, ಸೆಪ್ಟೆಂಬರ್, 05: ಭಾರತೀಯ ರಿಸರ್ವ್ ಬ್ಯಾಂಕ್ ನ ನೂತನ ಗವರ್ನರ್ ಆಗಿ ಉರ್ಜಿತ್ ಪಟೇಲ್ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ರಿಸರ್ವ್ ಬ್ಯಾಂಕಿನ 24ನೇ ಗವರ್ನರ್ ಎಂಬ ಶ್ರೇಯವನ್ನು ಪಡೆದುಕೊಂಡಿದ್ದಾರೆ.
ರಘುರಾಂ ರಾಜನ್ ಅವರಿಂದ ತೆರವಾದ ಸ್ಥಾನವನ್ನು ಉರ್ಜಿತ್ ಪಟೇಲ್ ಅಲಂಕರಿಸಿದ್ದಾರೆ. 2013ರಿಂದ ಇಲ್ಲಿಯವರೆಗೆ ಉಪ ಗವರ್ನರ್ ಆಗಿ ಪಟೇಲ್ ಸೇವೆ ಸಲ್ಲಿಸುತ್ತಾ ಬಂದಿದ್ದರು. 1998ರಿಂದ 2001ರವರೆಗೆ ಹಣಕಾಸು ಸಚಿವಾಲಯದಲ್ಲಿ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ.[RBIನಲ್ಲಿ ರಾಕ್ ಸ್ಟಾರ್ ರಘುರಾಂ ರಾಜನ್ ಶಕೆ ಮುಕ್ತಾಯ: ಟಾಪ್ 10ಹೇಳಿಕೆಗಳು]

52 ವರ್ಷ ವಯಸ್ಸಿನ ಪಟೇಲ್ ಅವರು ಆರ್ ಬಿಐ ಡೆಪ್ಯುಟಿ ಗವರ್ನರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಈಗ ಬಡ್ತಿ ಸಿಕ್ಕಿದೆ. ಆರ್ ಬಿಐ ಗವರ್ನರ್ ಅವಧಿ ಮೂರು ವರ್ಷದ್ದಾಗಿದೆ.
ಕೇಲ್ಕರ್ ಸಮಿತಿಯ ನೇರ ತೆರಿಗೆಗಳ ಕಾರ್ಯಪಡೆ, ನಾಗರಿಕ ಮತ್ತು ರಕ್ಷಣಾ ಸೇವೆ ಪಿಂಚಣಿ ವ್ಯವಸ್ಥೆಯ ಪರಾಮರ್ಶೆಯ ಉನ್ನತ ಮಟ್ಟದ ತಜ್ಞರ ಸಮಿತಿ, ಪ್ರಧಾನ ಮಂತ್ರಿಗಳ ಮೂಲಭೂತ ಸೌಕರ್ಯಗಳ ಕಾರ್ಯಪಡೆ, ಟೆಲಿಕಾಂ ಮ್ಯಾಟರ್ಸ್ ನ ಸಚಿವರ ಗುಂಪು, ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿಯೂ ಪಟೇಲ್ ಕೆಲಸ ಮಾಡಿದ್ದಾರೆ.[ಊರ್ಜಿತ್ ಪಟೇಲ್ ಯಾರು?]
ಖಾಸಗಿ ಮತ್ತ ಸಾರ್ವಜನಿಕ ಹಣಕಾಸು ವಲಯದಲ್ಲಿ ಅಪಾರ ಅನುಭವ ಮತ್ತು ಜ್ಞಾನ ಹೊಂದಿರುವ ಪಟೇಲ್ ಹೊಸ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಹಣದುಬ್ಬರ, ವಿದೇಶಿ ಬಂಡವಾಳ ಹೂಡಿಕೆ ಮತ್ತು ಪರಿಣಾಮ, ಅರ್ಥ ವ್ಯವಸ್ಥೆ ಸುಧಾರಣೆ ಸೇರಿದಂತೆ ಹಲವಾರು ಸವಾಲುಗಳು ಪಟೇಲ್ ಮುಂದಿವೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications