ಆರ್ ಬಿಐನ ನೂತನ ಗವರ್ನರ್ ಆಗಿ ಊರ್ಜಿತ್ ಪಟೇಲ್
ನವದೆಹಲಿ, ಆಗಸ್ಟ್ 21: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಗವರ್ನರ್ ಆಗಿ ಊರ್ಜಿತ್ ಪಟೇಲ್ ಆಯ್ಕೆಯಾಗಿದ್ದಾರೆ. ಹಾಲಿ ಗವರ್ನರ್ ರಘುರಾಮ್ ರಾಜನ್ ಅವರ ಅಧಿಕಾರಾವಧಿ ಮುಗಿದಿದ್ದು, ಹೊಸ ಗವರ್ನರ್ ಸೆಪ್ಟೆಂಬರ್ 04ರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.
52 ವರ್ಷ ವಯಸ್ಸಿನ ಪಟೇಲ್ ಅವರು ಆರ್ ಬಿಐ ಡೆಪ್ಯುಟಿ ಗವರ್ನರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಈಗ ಬಡ್ತಿ ಸಿಕ್ಕಿದೆ. ಆರ್ ಬಿಐ ಗವರ್ನರ್ ಅವಧಿ ಮೂರು ವರ್ಷದ್ದಾಗಿದೆ. [ನೂತನ ಗವರ್ನರ್: ರೇಸ್ ನಲ್ಲಿರುವ 6 ಪ್ರಮುಖರು]

ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಿಂದ ಎಂ ಫಿಲ್ ಹಾಗೂ ಯೇಲ್ ವಿಶ್ವವಿದ್ಯಾಲಯದಿಂದ ಪಿಎಚ್ ಡಿ ಪಡೆದಿರುವ ಊರ್ಜಿತ್ ಪಟೇಲ್ ಅವರು ಇಂಟರ್ ನ್ಯಾಷನಲ್ ಮಾನಿಟರಿ ಫಂಡ್ (ಐಎಂಎಫ್) ನಲ್ಲೂ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಆರ್ ಬಿಐ ಡೆಪ್ಯುಟಿ ಗವರ್ನರ್ ಆಗುವುದಕ್ಕೂ ಮುನ್ನ ಪಟೇಲ್ ಅವರು ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್ ನ ಇಂಧನ ಹಾಗೂ ಮೂಲಸೌಕರ್ಯ ವಿಭಾಗ ಸಲಹೆಗಾರರಾಗಿದ್ದರು. [2ನೇ ಅವಧಿಗೆ ಮುಂದುವರಿಯದಿರಲು ರಘುರಾಮ್ ರಾಜನ್ ನಿರ್ಧಾರ]
2016ರ ಸೆಪ್ಟೆಂಬರ್ 4ರಂದು ಗವರ್ನರ್ ಆಗಿ ರಾಜನ್ ಅಧಿಕಾರದ ಅವಧಿ ಮುಗಿಯಲಿದೆ. ನನ್ನ ಅವಧಿ ಮುಗಿದ ನಂತರ ನನಗೆ ಅಚ್ಚುಮೆಚ್ಚಿನ ಶೈಕ್ಷಣಿಕ ಕ್ಷೇತ್ರಕ್ಕೆ ಮರಳುತ್ತೇನೆ. ಅಮೆರಿಕಾದ ಚಿಕಾಗೋ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿ ಮುಂದುವರಿಯಲಿದ್ದೇನೆಂದು ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ವಿದಾಯ ಪತ್ರದ ಮೂಲಕ ತಿಳಿಸಿದ್ದರು.
ಆರ್ ಬಿಐ ಗವರ್ನರ್ ಹುದ್ದೆಗೆ ಊರ್ಜಿತ್ ಪಟೇಲ್ ಅಲ್ಲದೆ, ಆರ್ ಬಿಐನ ಅರುಂಧತಿ ಭಟ್ಟಾಚಾರ್ಯ, ಅರ್ಥಶಾಸ್ತ್ರಜ್ಞ ಸುಬೀರ್ ವಿತ್ತಲ್, ಅರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್, ನಿತಿ ಆಯೋಗದ ಉಪ ಮುಖ್ಯಸ್ಥರಾಗಿರುವ ಅರವಿಂದ್ ಪಂಗಾರಿಯಾ, ವಿಶ್ವಬ್ಯಾಂಕಿನ ಸಲಹೆಗಾರ ಕೌಶಿಕ್ ಬಸು ಅವರ ಹೆಸರು ಕೇಳಿಬಂದಿತ್ತು.
-
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ದರ: ಇಂದು 10 ಗ್ರಾಂ ಬಂಗಾರದ ಬೆಲೆ 1,58,620 ರೂಪಾಯಿ -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು












Click it and Unblock the Notifications