ಆರ್ ಬಿಐನ ನೂತನ ಗವರ್ನರ್ ಆಗಿ ಊರ್ಜಿತ್ ಪಟೇಲ್
ನವದೆಹಲಿ, ಆಗಸ್ಟ್ 21: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಗವರ್ನರ್ ಆಗಿ ಊರ್ಜಿತ್ ಪಟೇಲ್ ಆಯ್ಕೆಯಾಗಿದ್ದಾರೆ. ಹಾಲಿ ಗವರ್ನರ್ ರಘುರಾಮ್ ರಾಜನ್ ಅವರ ಅಧಿಕಾರಾವಧಿ ಮುಗಿದಿದ್ದು, ಹೊಸ ಗವರ್ನರ್ ಸೆಪ್ಟೆಂಬರ್ 04ರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.
52 ವರ್ಷ ವಯಸ್ಸಿನ ಪಟೇಲ್ ಅವರು ಆರ್ ಬಿಐ ಡೆಪ್ಯುಟಿ ಗವರ್ನರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಈಗ ಬಡ್ತಿ ಸಿಕ್ಕಿದೆ. ಆರ್ ಬಿಐ ಗವರ್ನರ್ ಅವಧಿ ಮೂರು ವರ್ಷದ್ದಾಗಿದೆ. [ನೂತನ ಗವರ್ನರ್: ರೇಸ್ ನಲ್ಲಿರುವ 6 ಪ್ರಮುಖರು]

ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಿಂದ ಎಂ ಫಿಲ್ ಹಾಗೂ ಯೇಲ್ ವಿಶ್ವವಿದ್ಯಾಲಯದಿಂದ ಪಿಎಚ್ ಡಿ ಪಡೆದಿರುವ ಊರ್ಜಿತ್ ಪಟೇಲ್ ಅವರು ಇಂಟರ್ ನ್ಯಾಷನಲ್ ಮಾನಿಟರಿ ಫಂಡ್ (ಐಎಂಎಫ್) ನಲ್ಲೂ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಆರ್ ಬಿಐ ಡೆಪ್ಯುಟಿ ಗವರ್ನರ್ ಆಗುವುದಕ್ಕೂ ಮುನ್ನ ಪಟೇಲ್ ಅವರು ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್ ನ ಇಂಧನ ಹಾಗೂ ಮೂಲಸೌಕರ್ಯ ವಿಭಾಗ ಸಲಹೆಗಾರರಾಗಿದ್ದರು. [2ನೇ ಅವಧಿಗೆ ಮುಂದುವರಿಯದಿರಲು ರಘುರಾಮ್ ರಾಜನ್ ನಿರ್ಧಾರ]
2016ರ ಸೆಪ್ಟೆಂಬರ್ 4ರಂದು ಗವರ್ನರ್ ಆಗಿ ರಾಜನ್ ಅಧಿಕಾರದ ಅವಧಿ ಮುಗಿಯಲಿದೆ. ನನ್ನ ಅವಧಿ ಮುಗಿದ ನಂತರ ನನಗೆ ಅಚ್ಚುಮೆಚ್ಚಿನ ಶೈಕ್ಷಣಿಕ ಕ್ಷೇತ್ರಕ್ಕೆ ಮರಳುತ್ತೇನೆ. ಅಮೆರಿಕಾದ ಚಿಕಾಗೋ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿ ಮುಂದುವರಿಯಲಿದ್ದೇನೆಂದು ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ವಿದಾಯ ಪತ್ರದ ಮೂಲಕ ತಿಳಿಸಿದ್ದರು.
ಆರ್ ಬಿಐ ಗವರ್ನರ್ ಹುದ್ದೆಗೆ ಊರ್ಜಿತ್ ಪಟೇಲ್ ಅಲ್ಲದೆ, ಆರ್ ಬಿಐನ ಅರುಂಧತಿ ಭಟ್ಟಾಚಾರ್ಯ, ಅರ್ಥಶಾಸ್ತ್ರಜ್ಞ ಸುಬೀರ್ ವಿತ್ತಲ್, ಅರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್, ನಿತಿ ಆಯೋಗದ ಉಪ ಮುಖ್ಯಸ್ಥರಾಗಿರುವ ಅರವಿಂದ್ ಪಂಗಾರಿಯಾ, ವಿಶ್ವಬ್ಯಾಂಕಿನ ಸಲಹೆಗಾರ ಕೌಶಿಕ್ ಬಸು ಅವರ ಹೆಸರು ಕೇಳಿಬಂದಿತ್ತು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications