ಊರ್ಜಿತ್ ಪಟೇಲ್ ರಾಜೀನಾಮೆ ಇಲ್ಲ?: ಬಿಕ್ಕಟ್ಟಿಗೆ ತೇಪೆ ಹಚ್ಚಲು ಸರ್ಕಾರದ ಪ್ರಯತ್ನ
ನವದೆಹಲಿ, ನವೆಂಬರ್ 15: ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ನಡುವೆ ಉಂಟಾಗಿರುವ ಮನಸ್ತಾಪಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದೆ ಎನ್ನಲಾಗಿದೆ.
ನೀತಿ ನಿರ್ಣಯಗಳಲ್ಲಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಕೇಂದ್ರ ಮತ್ತು ಆರ್ಬಿಐ ಜತೆಯಾಗಿ ಕೆಲಸ ಮಾಡುತ್ತಿವೆ. ಹೀಗಾಗಿ ಕಳೆದ ವಾರ ವರದಿಯಾದಂತೆ ಆರ್ಬಿಐ ಗವರ್ನರ್ ಊರ್ಜಿತ್ ಪಟೇಲ್ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಕ್ಷೀಣಿಸಿದೆ ಎಂದು ಮೂಲಗಳು ತಿಳಿಸಿವೆ.
ಸೋಮವಾರ ನಡೆಯಲಿರುವ ಆರ್ಬಿಐ ಮಂಡಳಿಯ ಸಭೆಯಲ್ಲಿ ಈ ವಿವಾದ ಚರ್ಚೆಗೆ ಬರಲಿದ್ದು, ಅದರೊಳಗೆ ಈಗಾಗಲೇ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ಹೀಗಾಗಿ ಊರ್ಜಿತ್ ಪಟೇಲ್ ಅವರ ರಾಜೀನಾಮೆ ವಿಚಾರ ತೆರೆಗೆ ಸರಿದಿದೆ ಎನ್ನಲಾಗಿದೆ.

ಕಳೆದ ವಾರ ನರೇಂದ್ರ ಮೋದಿ ಮತ್ತು ಊರ್ಜಿತ್ ಪಟೇಲ್ ನಡುವೆ ನಡೆದ ಸಭೆಯಲ್ಲಿ ಕೆಲವು ಪರಿಹಾರಗಳನ್ನು ತೆಗೆದುಕೊಳ್ಳಲಾಗಿದೆ. ಪಟೇಲ್ ಅವರಿಗೆ ಸರ್ಕಾರದ ದೃಷ್ಟಿಕೋನವನ್ನು ಮೋದಿ ವಿವರಿಸಿದ್ದಾರೆ ಎನ್ನಲಾಗಿದೆ. ಆದರೆ, ಈ ರೀತಿಯ ಸಭೆ ನಡೆದಿರುವುದರ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಪ್ರಧಾನಿ ಕಚೇರಿ ಮತ್ತು ಆರ್ ಬಿಐ ಮೂಲಗಳು ಹೇಳಿವೆ.
ನವೆಂಬರ್ನಲ್ಲಿ 40,000 ಕೋಟಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವುದಾಗಿ ಆರ್ಬಿಐ ತಿಳಿಸಿತ್ತು. ಅದರ ಮೊದಲ ಹಂತವಾಗಿ ನವೆಂಬರ್ 15ರಂದು 12,000 ಕೋಟಿಯನ್ನು ಬಿಡುಗಡೆ ಮಾಡಲಿದೆ.
ತೆರೆದ ಮಾರುಕಟ್ಟೆ ಕಾರ್ಯಾಚರಣೆಗಳ ಮೂಲಕ ಸರ್ಕಾರದ ಭದ್ರತೆಗಳನ್ನು ಖರೀದಿ ಮಾಡಲು ನಿರ್ಧರಿಸಿರುವುದಾಗಿ ಆರ್ಬಿಐ ತಿಳಿಸಿದೆ. ಅಕ್ಟೋಬರ್ನಲ್ಲಿ ಆರ್ಬಿಐ ಮಾರುಕಟ್ಟೆಗೆ 36,000 ಕೋಟಿ ರೂ.ಅನ್ನು ಬಿಡುಗಡೆ ಮಾಡಿತ್ತು.
ಕೆಲವು ಬ್ಯಾಂಕುಗಳ ಸಾಲ ನೀಡಿಗೆ ನಿಯಮಗಳನ್ನು ಸಡಿಲಿಸುವುದನ್ನು ಆರ್ ಬಿಐ ಪರಿಗಣನೆಗೆ ತೆಗೆದುಕೊಂಡಿದೆ. 11 ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ಸಾಲ ನೀಡುವಿಕೆ, ಕೆಟ್ಟ ಸಾಲವನ್ನು ಕಡಿಮೆಗೊಳಿಸಲು ಬೇಡಿಕೆ ಇರಿಸುವಿಕೆ ಮತ್ತು ಲಾಭ ಗಳಿಕೆಯ ಮೇಲೆ ಅದು ನಿರ್ಬಂಧ ಹೇರಿತ್ತು.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications