ನಿರ್ದೇಶಕರ ವೈಫಲ್ಯ ಮುಚ್ಚಿಡಲು ಮೂರ್ತಿ ಮೇಲೆ ಆರೋಪ: ಬಾಲಕೃಷ್ಣನ್
ಬೆಂಗಳೂರು, ಆಗಸ್ಟ್ 23: ಇನ್ಫೋಸಿಸ್ ನ ನಿರ್ದೇಶಕ ಮಂಡಳಿಯು ತನ್ನ ವೈಫಲ್ಯವನ್ನು ಮರೆಮಾಚುವುದಕ್ಕೆ ವಿಶಾಲ್ ಸಿಕ್ಕಾ ರಾಜೀನಾಮೆಗೆ ಕಂಪೆನಿಯ ಸ್ಥಾಪಕರಲ್ಲಿ ಒಬ್ಬರಾದ ಎನ್.ಆರ್.ನಾರಾಯಣಮೂರ್ತಿ ಅವರನ್ನು ದೂಷಿಸುತ್ತಿದೆ ಎಂದು ಕಂಪೆನಿಯ ಮಾಜಿ ಚೀಫ್ ಫೈನಾನ್ಷಿಯಲ್ ಆಫೀಸರ್ (ಸಿಎಫ್ ಒ) ವಿ.ಬಾಲಕೃಷ್ಣನ್ ಅಭಿಪ್ರಾಯ ಪಟ್ಟಿದ್ದಾರೆ.
ಕಂಪೆನಿಯ ಸುತ್ತ ಇದ್ದ ನಾರಾಯಣ ಮೂರ್ತಿ ಅವರ ಪ್ರಭಾವಳಿ ಕೂಡ ಕಣ್ಮರೆ ಆಗುತ್ತಿದೆ ಎಂದು ಅವರು ಹೇಳಿದ್ದಾರೆ. ಪಿಟಿಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಆವರು ಮಾತನಾಡಿದ್ದಾರೆ.

ನಾರಾಯಣ ಮೂರ್ತಿ ಕಂಪೆನಿಗೆ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ. ಕಂಪೆನಿಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ದೀರ್ಘಾವಧಿ ದೃಷ್ಟಿಯಿಂದ ಕಾರ್ಪೋರೇಟ್ ಆಡಳಿತ ಮತ್ತು ನಿರ್ದೇಶಕ ಮಂಡಳಿಯ ಉತ್ತರದಾಯಿತ್ವದ ಬಗ್ಗೆ ಪ್ರಶ್ನೆ ಮಾಡಿದರು ಎಂದಿದ್ದಾರೆ ಬಾಲಕೃಷ್ಣ.
ಇನ್ಫೋಸಿಸ್ ನ ಮಾಜಿ ನಿರ್ದೇಶಕರೊಬ್ಬರ ಪೈಕಿ ಒಬ್ಬರಾದ ಓಂಕಾರ್ ಗೋಸ್ವಾಮಿ ಅವರು ನಾರಾಯಣ ಮೂರ್ತಿ ಅವರ ಬಗ್ಗೆ ಬರೆದಿರುವುದನ್ನು ಪ್ರಸ್ತಾವಿಸಿದ ಅವರು, ಕೆಲ 'ಪಂಡಿತರು' ಮತ್ತು ಕಂಪೆನಿಯ ಮಾಜಿ ನಿರ್ದೇಶಕರು ನಾರಾಯಣ ಮೂರ್ತಿ ಅವರನ್ನು ಸಾರ್ವಜನಿಕವಾಗಿ ಟೀಕಿಸುತ್ತಿದ್ದಾರೆ. ಇದು ತೀರಾ ವಿಚಿತ್ರ ಎನಿಸುತ್ತದೆ ಎಂದಿದ್ದಾರೆ.
ಮೂರ್ತಿ ಅವರನ್ನು ಟೀಕಿಸುವ ಬೋರ್ಡ್ ನ ನಡೆಯು ತನ್ನ ವೈಫಲ್ಯವನ್ನು ಮುಚ್ಚಿಡಲು ತೆಗೆದುಕೊಂಡಿರುವುದು ಎಂಬುದಂತೂ ಸ್ಪಷ್ಟ ಎಂದು ಅವರು ಹೇಳಿದ್ದಾರೆ.
ಇನ್ನು ಕಂಪೆನಿಯ ಸಿಇಒ ಆಗಿ ನಂದನ್ ನಿಲೇಕಣಿಯನ್ನು ವಾಪಸ್ ಕರೆತಂದರೆ ಅವರ ಅನುಭವ, ಗ್ರಾಹಕರನ್ನು ಅರ್ಥ ಮಾಡಿಕೊಳ್ಳುವ ಸಾಮರ್ಥ್ಯದಿಂದ ಒಳ್ಳೆ ಆಯ್ಕೆಯಾಗುತ್ತದೆ ಎಂದು ಕೂಡ ಅಭಿಪ್ರಾಯ ಪಟ್ಟಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications