ಉದ್ಯಮಿ ವಿಜಯ್ ಮಲ್ಯ ಅವರ ಪಾಸ್ ಪೋರ್ಟ್ ಅಮಾನತು
ನವದೆಹಲಿ, ಏಪ್ರಿಲ್ 15: ಉದ್ಯಮಿ ವಿಜಯ್ ಮಲ್ಯ ಅವರ ಪಾಸ್ ಪೋರ್ಟ್ ಅಮಾನತುಗೊಂಡಿದೆ. ಮನಿ ಲಾಂಡ್ರಿಂಗ್ ಹಾಗೂ ಬ್ಯಾಂಕ್ ಸಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಸ್ ಪೋರ್ಟ್ ಮುಟ್ಟುಗೋಲು ಹಾಕುವಂತೆ ಜಾರಿ ನಿರ್ದೇಶನಾಲಯ ಮನವಿ ಮಾಡಿತ್ತು.
ಮನಿಲಾಂಡ್ರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಯ ಅವರ ಪಾಸ್ ಪೋರ್ಟ್ ಮುಟ್ಟುಗೋಲು ಹಾಕಿಕೊಳ್ಳುವಂತೆ ವಿದೇಶಾಂಗ ಸಚಿವಾಲಯಕ್ಕೆ ಜಾರಿ ನಿರ್ದೇಶನಾಲಯ ಬುಧವಾರ ಮನವಿ ಸಲ್ಲಿಸಿತ್ತು.
ಸುಮಾರು 9 ಸಾವಿರ ಕೋಟಿ ರು.ಗೂ ಅಧಿಕ ಸಾಲ ಹೊತ್ತುಕೊಂಡಿರುವ ಮಲ್ಯ ಅವರಿಗೆ ಈಗ ಐಡಿಬಿಐ ಬ್ಯಾಂಕಿನ 900 ಕೋಟಿ ರು ಸಾಲ ವಂಚನೆ ಮುಳುವಾಗುವ ಲಕ್ಷಣಗಳು ಕಂಡು ಬಂದಿದೆ. [ವಿಜಯ್ ಮಲ್ಯ ಭಾರತದಲ್ಲಿಲ್ಲ, ಲಂಡನ್ನಿಗೆ ಪರಾರಿ!]
ಈ ಹಿಂದೆ ಅನೇಕ ಬಾರಿ ರೆಡ್ ಕಾರ್ನರ್, ಜಾಮೀನು ರಹಿತ ವಾರೆಂಟ್, ನೋಟಿಸುಗಳು ಜಾರಿಯಾದರೂ ಮಲ್ಯ ಅವರ ಪಾಸ್ ಪೋರ್ಟ್ ಜಪ್ತಿ ಮಾಡಲು ಆಗಿರಲಿಲ್ಲ. ಸದ್ಯ ವಿದೇಶದಲ್ಲಿರುವ ಮಲ್ಯ ಅವರ ಸಂಪರ್ಕ ಕೂಡಾ ಸಾಧ್ಯವಾಗಿರಲಿಲ್ಲ, ಆದರೆ, ಈ ಬಾರಿ ವಿದೇಶಾಂಗ ಸಚಿವಾಲಯ ಬಯಸಿದರೆ ತಕ್ಷಣವೇ ವಿದೇಶದಲ್ಲಿರುವ ಮಲ್ಯರನ್ನು ಭಾರತಕ್ಕೆ ಕರೆಸಿಕೊಳ್ಳಬಹುದಾಗಿದೆ.

ಹಿನ್ನಲೆ: ಪಾಸ್ ಪೋರ್ಟ್ ಕಾಯ್ದೆ 1967ರಂತೆ ಪ್ರಾದೇಶಿಕ ಪಾಸ್ ಪೋರ್ಟ್ ಕಚೇರಿಗೆ ಸೂಚನೆ ನೀಡುವಂತೆ ವಿದೇಶಾಂಗ ಸಚಿವಾಲಯಕ್ಕೆ ಮನವಿ ಸಲ್ಲಿಸಲಾಗಿತ್ತು. [ವಿಜಯ್ ಮಲ್ಯ ವಿರುದ್ಧ ಅರೆಸ್ಟ್ ವಾರೆಂಟ್ ಗೆ ಕೋರಿಕೆ]
ಪಾಸ್ ಪೋರ್ಟ್ ಕಾಯ್ದೆ 1967ರ ಸೆಕ್ಷನ್ 10 (3) ಇ ಅನ್ವಯ ಪ್ರಯಾಣಿಕರೊಬ್ಬರ ಮೇಲೆ ಕ್ರಿಮಿನಲ್ ಮೊಕದ್ದಮೆ ನಡೆಯುತ್ತಿದ್ದು, ಅವರ ವಿರುದ್ಧ ಅರೆಸ್ಟ್ ವಾರೆಂಟ್ ಗಾಗಿ ಅರ್ಜಿ ಸಲ್ಲಿಕೆಯಾಗಿದ್ದರೆ, ಅವರ ಪಾಸ್ ಪೋರ್ಟ್ ಹಾಗೂ ಪ್ರಯಾಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಏರ್ ಪೋರ್ಟ್ ನ ಅಧಿಕಾರಿಗಳು ವಶಪಡಿಸಿಕೊಳ್ಳಬಹುದು.
ಉದ್ಯಮಿ ವಿಜಯ್ ಮಲ್ಯ ಅವರು ಯಾವುದೇ ಕಾರಣಕ್ಕೂ ದೇಶ ಬಿಡಬಾರರು ಅವರ ಪಾಸ್ ಪೋರ್ಟ್ ಜಪ್ತಿ ಮಾಡಬೇಕು ಎಂದು ಎಸ್ಬಿಐ ನೇತೃತ್ವ ಸಾಲ ವಸೂಲಾತಿ ನ್ಯಾಯಾಧಿಕರಣ (DRT) ಮಂಗಳವಾರ ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದನ್ನು ಇಲ್ಲಿ ಸ್ಮರಿಸಬಹುದು. [ಸಾಲ ಮಾಡಿ ತುಪ್ಪ ತಿಂದವ್ರು ಮಲ್ಯ ಒಬ್ರೇ ಅಲ್ಲ ಸ್ವಾಮೀ!]
-
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ












Click it and Unblock the Notifications