ಪೇಟಿಯಂ ವ್ಯಾಲೆಟ್ ಗೂ ಪೇಮೆಂಟ್ ಬ್ಯಾಂಕಿಗೂ ಏನು ವ್ಯತ್ಯಾಸ?
ಬೆಂಗಳೂರು, ಮೇ 31 : ನೀವು ಪೆಟಿಎಂ ಹೊಂದಿದ್ದರೇ ನಿಮ್ಮ ದಿನನಿತ್ಯದ ಅಗತ್ಯತೆಗಳನ್ನು ನಗದು ಹಣದಿಂದಲೇ ಪೂರೈಸಿಕೊಳ್ಳುವ ಅನಿವಾರ್ಯತೆ ಇಲ್ಲ. ಪೆಟಿಎಂ ಮೂಲಕ ನೀವು ಬಿಲ್ ಗಳನ್ನು ಪಾವತಿಸಬಹುದಾಗಿದೆ.
ಗ್ರಾಹಕರಿಗೆ ಇನ್ನೂ ಪೇಮೆಂಟ್ ಪಾವತಿಸಲು ಸುಲಭವಾಗಲೆಂದು ಪೇಟಿಯಂ, ಪೇಮೆಂಟ್ ಬ್ಯಾಂಕ್ ಪರಿಚಯಿಸಿದೆ. ಇದು ಪೂರ್ಣ ಪ್ರಮಾಣದ ವಾಣಿಜ್ಯ ಬ್ಯಾಂಕ್ ಅಲ್ಲ. ಪೇಮೆಂಟ್ ಬ್ಯಾಂಕ್ ವ್ಯವಸ್ಥೆಯು, ಹಣ ಪಾವತಿ ಸೇವೆಗಳಿಗೆ ಸಂಬಂಧಿಸಿದಂತೆ ಬ್ಯಾಂಕಿಂಗ್ ಚಟುವಟಿಕೆಗಳನ್ನು ಸೀಮಿತ ಪ್ರಮಾಣದಲ್ಲಿಯಷ್ಟೇ ನಡೆಸುವಂತಹುದು.[ಅಸ್ತಿತ್ವಕ್ಕೆ ಬಂದ ಪೇಟಿಎಂ ಬ್ಯಾಂಕ್: ನೀವು ತಿಳಿಯಬೇಕಾದ 5 ವಿಚಾರ]

ಇಲ್ಲಿ ಬೇಡಿಕೆ ಆಧರಿಸಿದ ಠೇವಣಿ ಸಂಗ್ರಹ, ಹಣ ಜಮಾ ಸೇವೆಗಳು, ಇಂಟರ್ನೆಟ್ ಬ್ಯಾಂಕಿಂಗ್ ಮೊದಲಾದ ಸೌಲಭ್ಯಗಳು ಗ್ರಾಹಕರಿಗೆ ಲಭ್ಯವಿರುತ್ತವೆ. ಪೇಟಿಯಂ ಪೇಮೆಂಟ್ ಬ್ಯಾಂಕಿನ ಬಗ್ಗೆ ಸ್ವಲ್ಪ ತಿಳಿದುಕೊಳ್ಳುವುದು ಅವಶ್ಯವಾಗಿದೆ. ಪೇಟಿಯಂ ಪೇಮೆಂಟ್ ಬ್ಯಾಂಕಿನ ಮಾಹಿತಿಯನ್ನು ಸವಿಸ್ತಾರವಾಗಿ ಈ ಕೆಳಗೆ ನೀಡಲಾಗಿದೆ.
Paytm Wallet vs Paytm Payment Bank:
* ಪೇಮೆಂಟ್ ಬ್ಯಾಂಕ್ ವ್ಯವಸ್ಥೆಯು, ಹಣ ಪಾವತಿ ಸೇವೆಗಳಿಗೆ ಸಂಬಂಧಿಸಿದಂತೆ ಬ್ಯಾಂಕಿಂಗ್ ಚಟುವಟಿಕೆಗಳನ್ನು ಸೀಮಿತ ಪ್ರಮಾಣದಲ್ಲಿಯಷ್ಟೇ ನಡೆಸುವಂತಹುದು. ಗ್ರಾಹಕರಿಗೆ ಉಳಿತಾಯ ಮತ್ತು ಚಾಲ್ತಿ ಖಾತೆ ತೆರೆಯಲು ಅವಕಾಶವಿದ್ದು, ಗರಿಷ್ಠ 1 ಲಕ್ಷದ ವರೆಗೆ ಠೇವಣಿ ಇಡಬಹುದು.
* ಮೊಬೈಲ್ ಬ್ಯಾಂಕಿಂಗ್, ಆನ್ಲೈನ್ ಬ್ಯಾಂಕಿಂಗ್, ಎಟಿಎಂ ಹಾಗೂ ಡೆಬಿಟ್ ಕಾರ್ಡ್ ಸೇವೆಯನ್ನು ಈ ಬ್ಯಾಂಕ್ಗಳು ಒದಗಿಸುತ್ತವೆ. ಆದರೆ, ಸಾಲ ನೀಡುವುದು ಅಥವಾ ಕ್ರೆಡಿಟ್ ಕಾರ್ಡ್ ಸೌಲಭ್ಯ ದೊರೆಯುವುದಿಲ್ಲ.
ಇದಕ್ಕೆ ಗ್ರಾಹಕರು virtual debit card ಪಡೆದು ಒಂದು ಬ್ಯಾಂಕಿನಿಂದ ಮತ್ತೊಂದು ಬ್ಯಾಂಕ್ ಖಾತೆಗೆ ಹಣ ಸಂದಾಯ ಮಾಡಬಹುದು. ಹಾಗೂ ಯಾವುದೇ ಸಮಯದಲ್ಲಾದರೂ ವಿತ್ ಡ್ರಾ ಮಾಡಿಕೊಳ್ಳಬಹುದು.
* ಇನ್ನೊಂದು ಪೇಮೆಂಟ್ ವಾಲೆಟ್ ಪಡೆಯಲು ಅವಕಾಶ ವಿದೆ. KYC ವಾಲೆಟ್ ನಲ್ಲಿ ನೀವು ಮೊದಲಿಗೆ ನಿಮ್ಮ ಮೊಬೈಲ್ ನಂಬರ್ ಹಾಗೂ ಇಮೇಲ್ ರಿಜಿಸ್ಟರ್ ಮಾಡಿ. ನಂತರ ಪೇಟಿಎಂ ನೆರವು ಪಡೆದುಕೊಂಡು ಬಿಲ್ ಪಾವತಿಸಬಹುದು.
ಅಥವಾ ನಿಮ್ಮ ದಿನನಿತ್ಯಕ್ಕೆ ಬಳಸಿಕೊಳ್ಳಬಹುದು. ಇನ್ನೊಂದು ಮುಖ್ಯವಾದ ಅಂಶವೆಂದರೆ ನಿಮ್ಮ ಬ್ಯಾಂಕ್ ಖಾತೆಯಿಂದ ಮತ್ತೊಂದು ಬ್ಯಾಂಕ್ ಖಾತೆಗೆ KYC ವ್ಯಾಲೆಟ್ ನಿಂದ ಹಣ ವರ್ಗಾವಣೆ ಮಾಡಬಹುದು.
* ಪೇಮೆಂಟ್ ಬ್ಯಾಂಕ್ ಉಳಿತಾಯ ಖಾತೆಯಲ್ಲಿನ ಠೇವಣಿಗೆ ಶೇ. 4ರಷ್ಟು ಬಡ್ಡಿ ನಿಗದಿಪಡಿಸಿದೆ.
* ಪೇಟಿಯಂ ವ್ಯಾಲೆಟ್ ನಿಂದ ಹಣ ವರ್ಗಾವಣೆ ಮಾಡಿದರೆ ಶೇ 2ರಷ್ಟು ಶುಲ್ಕ ವಿಧಿಸಲಾಗುತ್ತದೆ. ಆದರೆ, ಈ ಪೇಮೆಂಟ್ ಬ್ಯಾಂಕಿಂಗ್ ನಲ್ಲಿ ಯಾವುದೇ ಹೆಚ್ಚಿನ ಶುಲ್ಕ ವಿಧಿಸುವುದಿಲ್ಲ.
ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಪೇಟಿಯಂ ವ್ಯಾಲೆಟ್ ಸಹಾಯದಿಂದ ಪೇಮೆಂಟ್ ಬ್ಯಾಂಕ್ ಬಳಸಿ ಉತ್ತಮ ಲಾಭಗಳನ್ನು ಪಡೆದುಕೊಳ್ಳಿ.'Oneindia Coupons'.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications