ಜನವರಿ 1, 2021ರಿಂದ ಈ ಮೊಬೈಲ್ಗಳಲ್ಲಿ ವಾಟ್ಸಾಪ್ ಕಾರ್ಯ ನಿರ್ವಹಿಸಲ್ಲ!
ನವದೆಹಲಿ, ಡಿಸೆಂಬರ್ 29: ವಾಟ್ಸಾಪ್, ಭಾರತದಲ್ಲಿ ಅತಿ ಹೆಚ್ಚು ಸಕ್ರಿಯ ಬಳಕೆದಾರರನ್ನು ಹೊಂದಿರುವ ಮೆಸೆಜಿಂಗ್ ಅಪ್ಲಿಕೇಶನ್. ಎಲ್ಲಾ ವಯಸ್ಸಿನವರು ವಾಟ್ಸಾಪ್ ಅಪ್ಲಿಕೇಶನ್ಗೆ ಮಾರು ಹೋಗಿದ್ದಾರೆ. ಹೊಸ ಹೊಸ ಅಪ್ಡೇಟ್ಗಳನ್ನು ಮಾಡುವ ಮೂಲಕ ಮತ್ತಷ್ಟು ಜನರಿಗೆ ಹತ್ತಿರವಾಗುತ್ತಿದೆ. ಆದರೆ ಮುಂದಿನ ಕೆಲವೇ ವಾರಗಳಲ್ಲಿ ಅನೇಕ ಸ್ಮಾರ್ಟ್ಫೋನ್ಗಳಲ್ಲಿ ವಾಟ್ಸಾಪ್ ಕಾರ್ಯ ನಿರ್ವಹಿಸುವುದಿಲ್ಲ.
ನೀವು ಹಳೆಯ ಆ್ಯಂಡ್ರಾಯ್ಡ್, ಐಒಎಸ್ ಫೋನ್ಗಳನ್ನು ಬಳಸುತ್ತಿದ್ದೀರಾ? ಹಾಗಿದ್ರೆ ಅದರಲ್ಲಿ ಜನವರಿ 1ರಿಂದ ವಾಟ್ಸಾಪ್ ಕಾರ್ಯ ನಿರ್ವಹಿಸುವುದಿಲ್ಲ. ಹೊಸ ಮಾದರಿಯಲ್ಲಿ ವಾಟ್ಸಾಪ್ ಅಪ್ಲಿಕೇಶನ್ ನವೀಕರಿಸುತ್ತಿರುವುದರ ಜೊತೆಗೆ, ಪ್ರಸ್ತುತ ಮೆಸೇಜಿಂಗ್ ಅಪ್ಲಿಕೇಶನ್ಗೆ ಹೊಂದಿಕೆಯಾಗುವ ಕೆಲವು ಹಳೆಯ ಸಾಧನಗಳಿಗೆ ಬೆಂಬಲವನ್ನು ಹಿಂತೆಗೆದುಕೊಳ್ಳುವುದಾಗಿ ವಾಟ್ಸಾಪ್ ಮತ್ತೊಮ್ಮೆ ಘೋಷಿಸಿದೆ. ಹೀಗಾಗಿ ಇಂತಹ ಮೊಬೈಲ್ಗಳಲ್ಲಿ ವಾಟ್ಸಾಪ್ ಕಾರ್ಯ ನಿರ್ವಹಿಸುವುದಿಲ್ಲ.
ಹಳೆಯ ಆ್ಯಂಡ್ರಾಯ್ಡ್ ಮೊಬೈಲ್ ಮೂಲಕ ಕೆಲವು ಬಳಕೆದಾರರು ಇತ್ತೀಚಿನ ಸಾಫ್ಟ್ವೇರ್ಗೆ ನವೀಕರಿಸುವ ಮೂಲಕ ವಾಟ್ಸಾಪ್ ಅನ್ನು ಪ್ರವೇಶಿಸಲು ಸಾಧ್ಯವಾಗುತ್ತದೆ. ಆದಾಗ್ಯೂ, ಕೆಲವು ಮೊಬೈಲ್ಗಳಿಗೆ ಜನವರಿ 1, 2021 ರಿಂದ ವಾಟ್ಸಾಪ್ ಶಾಶ್ವತವಾಗಿ ಪ್ರವೇಶಿಸಲಾಗುವುದಿಲ್ಲ.

ಈ ಬಾರಿ ಅದು ಐಒಎಸ್ 9 ಗಿಂತ ಹಳೆಯ ಸಾಫ್ಟ್ವೇರ್ನಲ್ಲಿ ಚಾಲನೆಯಲ್ಲಿರುವ ಯಾವುದೇ ಐಫೋನ್ನಲ್ಲಿ ಕಾರ್ಯ ನಿರ್ವಹಿಸುವುದಿಲ್ಲ. ಈ ಫೋನ್ಗಳನ್ನು ಹೊಂದಿರುವ ಬಳಕೆದಾರರು ಜನವರಿ 1, 2021 ರಿಂದ ವಾಟ್ಸಾಪ್ ಅನ್ನು ಬಳಸಲು ಸಾಧ್ಯವಾಗುವುದಿಲ್ಲ.
ಮುಂದಿನ ವರ್ಷದ ಆರಂಭದಿಂದ ಐಫೋನ್ 4 ಮಾಡೆಲ್ಗಳಿಗೆ ಮೆಸೇಜಿಂಗ್ ಅಪ್ಲಿಕೇಶನ್ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. ಐಫೋನ್ 4 ಎಸ್, 5, 5 ಎಸ್, 5 ಸಿ, 6 ಮತ್ತು 6 ಎಸ್ ಎಲ್ಲವನ್ನೂ ಐಒಎಸ್ 9 ಗೆ ನವೀಕರಿಸಬಹುದು, ಆದ್ದರಿಂದ ಒಮ್ಮೆ ನವೀಕರಿಸಿದ ನಂತರ ಅವರು ವಾಟ್ಸಾಪ್ ಅನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಇದರ ಜೊತೆಗೆ ಆಂಡ್ರಾಯ್ಡ್ 4.0.3 ಅಥವಾ ಆಪರೇಟಿಂಗ್ ಸಿಸ್ಟಂನ ಹಳೆಯ ಆವೃತ್ತಿಗಳಲ್ಲಿ ಚಾಲನೆಯಲ್ಲಿರುವ ಆಂಡ್ರಾಯ್ಡ್ ಸಾಧನಗಳಲ್ಲಿ ವಾಟ್ಸಾಪ್ ಇನ್ನು ಮುಂದೆ ಕಾರ್ಯನಿರ್ವಹಿಸುವುದಿಲ್ಲ. ಬಳಕೆದಾರರು ವಾಟ್ಸಾಪ್ಗೆ ಹೊಂದಿಕೆಯಾಗದಂತಹ ಫೋನ್ಗಳನ್ನು ಹೊಂದಿದ್ದರೆ, ಅವರು ತಮ್ಮ ಚಾಟ್ಗಳನ್ನು 2021 ರ ಜನವರಿ 1 ರ ಮೊದಲು ಬ್ಯಾಕಪ್ ಮಾಡಬೇಕು.
ವಾಟ್ಸಾಪ್ ಸೆಟ್ಟಿಂಗ್ಗಳಲ್ಲಿನ ಚಾಟ್ಸ್ ವಿಭಾಗದ ಅಡಿಯಲ್ಲಿ 'ಚಾಟ್ ಬ್ಯಾಕಪ್' ಆಯ್ಕೆಗೆ ಹೋಗುವ ಮೂಲಕ ಅವರು ಬ್ಯಾಕಪ್ ಮಾಡಬಹುದು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications