ಯಾರು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಬೇಕು?, ಯಾರಿಗೆ ವಿನಾಯಿತಿ
ನವದೆಹಲಿ, ಜುಲೈ 17; ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುದು ಈಗ ಅನಿವಾರ್ಯವಾಗಿದೆ. ವಾರ್ಷಿಕ ಒಟ್ಟು 2.5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವವರು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಅಗತ್ಯವಿಲ್ಲ. ಆದರೆ, ವ್ಯಕ್ತಿಯ ಆದಾಯ ಗರಿಷ್ಠ ವಿನಾಯಿತಿ ಮಿತಿಯನ್ನು ಮೀರಿದಾಗ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲೇಬೇಕು.
ವ್ಯಕ್ತಿಯ ವಾರ್ಷಿಕ ಆದಾಯ 2.5 ಲಕ್ಷಗಳಿಗಿಂತ ಹೆಚ್ಚಿದ್ದಾಗ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲೇಬೇಕು. ಹಿರಿಯ ನಾಗರಿಕರು (60 ವರ್ಷಕ್ಕಿಂತ ಹೆಚ್ಚಿನ ವಯಸ್ಸಾದವರು) ವಾರ್ಷಿಕ 3 ಲಕ್ಷ ರುಪಾಯಿಗೂ ಹೆಚ್ಚಿನ ಆದಾಯ ಹೊಂದಿದ್ದರೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಬೇಕು. ಸೂಪರ್ ಸೀನಿಯರ್ ಸಿಟಿಜನ್ (80 ವರ್ಷಕ್ಕಿಂತ ಹೆಚ್ಚಿನ ವಯಸ್ಸಾದವರು) ವಾರ್ಷಿಕ 5 ಲಕ್ಷ ರುಪಾಯಿಗೂ ಹೆಚ್ಚಿನ ಆದಾಯ ಹೊಂದಿದ್ದರೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಬೇಕು.
ಒಟ್ಟು ಆದಾಯವು ಮೂಲ ಮಿತಿಯನ್ನು ಮೀರಬಹುದು. ಆದರೆ ವಿವಿಧ ಕಡಿತಗಳ ನಂತರ ವಾರ್ಷಿಕ ಆದಾಯ 2.5 ಲಕ್ಷಕ್ಕಿಂತ ಕಡಿಮೆಯಿದ್ದರೆ ತೆರಿಗೆಯನ್ನು ಪಾವತಿಸಬೇಕಾದ ಅಗತ್ಯವಿಲ್ಲ.

ಆದಾಯ ತೆರಿಗೆ ರಿಟರ್ನ್ಸ್ ಏಕೆ ಸಲ್ಲಿಸಬೇಕು?; ನಿಮ್ಮ ತೆರಿಗೆಯ ಆದಾಯವು ವಿನಾಯಿತಿ ಮಿತಿಯ ಅಡಿಯಲ್ಲಿ ಬಂದರೂ ಸಹ, ನೀವು ಇನ್ನೂ ರಿಟರ್ನ್ ಅನ್ನು ಸಲ್ಲಿಸಬೇಕು. ಅಂತಹ ಆದಾಯವನ್ನು ಶೂನ್ಯ ಆದಾಯ ತೆರಿಗೆ ರಿಟರ್ನ್ (ITR) ಎಂದು ಕರೆಯಲಾಗುತ್ತದೆ. ಅದನ್ನು ಸಲ್ಲಿಸುವ ಮೂಲಕ ಆದಾಯ ತೆರಿಗೆ ಇಲಾಖೆಗೆ ನಿಮ್ಮ ಆದಾಯ ಕಡಿಮೆ ಇರುವ ಕಾರಣ ಆ ವರ್ಷ ನೀವು ತೆರಿಗೆ ಪಾವತಿಸಿಲ್ಲ ಎಂದು ಮಾಹಿತಿ ನೀಡಿದಂತಾಗುತ್ತದೆ.
ಈ ಕೆಳಗಿನ ಸಂದರ್ಭಗಳಲ್ಲಿ ರಿಟರ್ನ್ ಸಲ್ಲಿಕೆ ಕಡ್ಡಾಯವಾಗಿದೆ
* ನಿಮ್ಮ ಟಿಡಿಎಸ್ (TDS), ಟಿಸಿಎಸ್ (TCS) 25,000 ರುಪಾಯಿ ಅಥವಾ ಅದಕ್ಕಿಂತ ಹೆಚ್ಚಿನದಾಗಿದ್ದರೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುದು ಕಡ್ಡಾಯವಾಗಿದೆ.

* ಹಣಕಾಸು ವರ್ಷದಲ್ಲಿ ಒಟ್ಟು ಟಿಡಿಎಸ್/ ಟಿಸಿಎಸ್ (ತೆರಿಗೆ ಕಡಿತಗೊಳಿಸಿ / ಮೂಲದಲ್ಲಿ ಸಂಗ್ರಹಿಸಲಾದ ತೆರಿಗೆ) 25,000 ರುಪಾಯಿಗಿಂತ ಹೆಚ್ಚಿದ್ದರೆ ಮತ್ತು ಹಿರಿಯ ನಾಗರಿಕರಿಗೆ 50,000 ರುಪಾಯಿಗಳಿಗಿಂತ ಹೆಚ್ಚಿರುವ ವ್ಯಕ್ತಿಗಳು ತಮ್ಮ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಬೇಕು ಎಂದು ಆದಾಯ ತೆರಿಗೆ ಇಲಾಖೆ ಸೂಚನೆ ನೀಡಿದೆ.
* ವ್ಯಕ್ತಿಯ ಒಂದು ಅಥವಾ ಹೆಚ್ಚಿನ ಉಳಿತಾಯ ಬ್ಯಾಂಕ್ ಖಾತೆಗಳಲ್ಲಿ ಒಟ್ಟು ಠೇವಣಿ 50 ಲಕ್ಷ ರುಪಾಯಿಗಳಿಂತ ಹೆಚ್ಚಿದ್ದರೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುದು ಕಡ್ಡಾಯವಾಗಿದೆ.
-
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications