ತೈಲ ಬೆಲೆ ಏರಿಕೆಗೆ ಎರಡು ಕಾರಣ ನೀಡಿದ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್
ನವದೆಹಲಿ, ಫೆಬ್ರವರಿ 22: ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಅಬಕಾರಿ ಸುಂಕ ಇಳಿಸುವ ಮೂಲಕ ಜನರ ಮೇಲಾಗುತ್ತಿರುವ ವಿಪರೀತ ಹೊರೆಯನ್ನು ತಗ್ಗಿಸುವ ಬಗ್ಗೆ ಕೇಂದ್ರ ಸರ್ಕಾರ ಉಸಿರೆತ್ತುತ್ತಿಲ್ಲ ಎಂದು ವಿರೋಧಪಕ್ಷಗಳು ಆರೋಪಿಸುತ್ತಿವೆ.
ತೈಲ ಬೆಲೆ ಹೆಚ್ಚಳವಾಗಲು ಹಿಂದಿನ ಸರ್ಕಾರಗಳೇ ಕಾರಣ ಎಂದು ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದರು. ಹಿಂದಿನ ಸರ್ಕಾರಗಳು ಆಮದು ಅವಲಂಬನೆಗೆ ಆದ್ಯತೆ ನೀಡಿದ್ದವು. ಇದರಿಂದ ದೇಶ ಸ್ವಾವಲಂಬನೆಯಾಗಲಿಲ್ಲ. ಇದರ ಪರಿಣಾಮವನ್ನು ಈಗ ಮಧ್ಯಮವರ್ಗದ ಜನತೆ ಎದುರಿಸುವಂತಾಗಿದೆ ಎಂದು ಪ್ರಧಾನಿ ಹೇಳಿದ್ದರು.
ಆದರೆ ಈಗ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಹಾಗೂ ಉಕ್ಕು ಸಚಿವ ಧರ್ಮೇಂದ್ರ ಪ್ರಧಾನ್ ಅವರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಹೊಸ ಕಾರಣಗಳನ್ನು ನೀಡಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೊಲಿಯಂ ಉತ್ಪಾದನೆಯಲ್ಲಿನ ಕುಸಿತ ಬೆಲೆ ಏರಿಕೆಗೆ ಮುಖ್ಯ ಕಾರಣ ಎಂದು ದೂಷಿಸಿದ್ದಾರೆ. ಮುಂದೆ ಓದಿ.

ಬೆಲೆ ಏರಿಕೆಗೆ ಎರಡು ಕಾರಣ
'ತೈಲ ಬೆಲೆ ಏರಿಕೆಗೆ ಮುಖ್ಯವಾಗಿ ಎರಡು ಕಾರಣಗಳಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯು ತೈಲ ಉತ್ಪಾದನೆಯನ್ನು ತಗ್ಗಿಸಿವೆ. ಹಾಗೆಯೇ ಉತ್ಪಾದಕ ದೇಶಗಳು ಹೆಚ್ಚಿನ ಲಾಭ ಪಡೆದುಕೊಳ್ಳುವ ಸಲುವಾಗಿ ಕಡಿಮೆ ಪ್ರಮಾಣದಲ್ಲಿ ತೈಲ ಉತ್ಪಾದಿಸುತ್ತಿವೆ. ಇದರಿಂದ ಗ್ರಾಹಕ ದೇಶಗಳು ಸಂಕಷ್ಟಕ್ಕೆ ಒಳಗಾಗುವಂತಾಗಿದೆ' ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಬದಲಾವಣೆ ಆಗಬಹುದು
'ಉತ್ಪಾದನೆ ಕಡಿಮೆ ಮಾಡದಂತೆ ನಾವು ಪೆಟ್ರೋಲಿಯಂ ರಫ್ತು ದೇಶಗಳ ಸಂಘಟನೆ (ಒಪೆಕ್) ಮತ್ತು ಒಪೆಕ್ ಪ್ಲಸ್ ದೇಶಗಳಿಗೆ ನಿರಂತರವಾಗಿ ಮನವಿ ಸಲ್ಲಿಸುತ್ತಲೇ ಇದ್ದೇವೆ. ಅದರಲ್ಲಿ ಬದಲಾವಣೆಯಾಗಬಹುದು ಎಂಬ ಭರವಸೆ ನಮಗಿದೆ' ಎಂದು ತಿಳಿಸಿದ್ದಾರೆ.

ಕೋವಿಡ್ ಕಾರಣದಿಂದ ಹೆಚ್ಚಳ
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಹೆಚ್ಚಿನ ಸುಂಕ ಹೇರಿಕೆಯನ್ನು ಸಮರ್ಥಿಸಿಕೊಂಡ ಅವರು, ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಿವೆ. ಅದಕ್ಕಾಗಿ ತೆರಿಗೆ ಸಂಗ್ರಹ ಮಾಡುತ್ತಿವೆ. ಈ ಅಭಿವೃದ್ಧಿ ಯೋಜನೆಗಳು ಉದ್ಯೋಗ ಸೃಷ್ಟಿಸಲಿವೆ ಎಂದಿದ್ದಾರೆ.

ಸಮತೋಲನಕ್ಕೆ ತೆರಿಗೆ ಬೇಕು
'ಬೆಲೆ ಏರಿಕೆಗೆ ಮತ್ತೊಂದು ಕಾರಣ ಕೋವಿಡ್. ನಾವು ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕಿದೆ. ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತೆರಿಗೆ ಸಂಗ್ರಹಿಸಬೇಕಿದೆ. ಅಭಿವೃದ್ಧಿ ಮೇಲೆ ವ್ಯಯಿಸುವುದು ಉದ್ಯೋಗ ಸೃಷ್ಟಿ ಮಾಡುತ್ತದೆ. ಸರ್ಕಾರವು ತನ್ನ ಹೂಡಿಕೆಯನ್ನು ಹೆಚ್ಚಿಸಿದ್ದು, ಈ ಬಜೆಟ್ನಲ್ಲಿ ಶೇ 34ರಷ್ಟು ಹೆಚ್ಚು ಬಂಡವಾಳ ಹೂಡಿಕೆ ನಡೆಯಲಿದೆ. ರಾಜ್ಯ ಸರ್ಕಾರಗಳೂ ವೆಚ್ಚ ಹೆಚ್ಚಿಸಲಿವೆ. ಇವುಗಳನ್ನು ಸಮತೋಲನ ಮಾಡಲು ನಮಗೆ ಈ ತೆರಿಗೆ ಅಗತ್ಯವಾಗಿದೆ. ಹಣಕಾಸು ಸಚಿವರು ಮತ್ತು ರಾಜ್ಯ ಸರ್ಕಾರಗಳು ಇದಕ್ಕೆ ಒಂದು ದಾರಿ ಕಂಡುಕೊಳ್ಳುತ್ತಾರೆ ಎಂಬ ಭರವಸೆ ಇದೆ' ಎಂದು ಹೇಳಿದ್ದಾರೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Petrol Price: 1947ರಲ್ಲಿ ಕೇವಲ 25 ಪೈಸೆ ಇದ್ದ ಪೆಟ್ರೋಲ್ ಈಗ 100ರ ಗಡಿ ದಾಟಿದ್ದೇಗೆ? ಇಲ್ಲಿದೆ ತೈಲ ದರದ ಕುತೂಹಲಕಾರಿ ಇತಿಹಾಸ -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Premium Petrol Price: ಭಾರತದಲ್ಲಿ ಪ್ರೀಮಿಯಂ ಪೆಟ್ರೋಲ್ ದರ ಏರಿಕೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications