Breaking: ಅನಿಲ್ ಅಂಬಾನಿ ಷೇರು ಮಾರುಕಟ್ಟೆಯಿಂದ 5 ವರ್ಷ ಬ್ಯಾನ್: ಕಾರಣ ಇಲ್ಲಿದೆ
ಕೈಗಾರಿಕೋದ್ಯಮಿ ಅನಿಲ್ ಅಂಬಾನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹಣ ದುರುಪಯೋಗದ ಪ್ರಕರಣದಲ್ಲಿ ಐದು ವರ್ಷಗಳ ಕಾಲ ಷೇರು ಮಾರುಕಟ್ಟೆಯಿಂದ ಅವರನ್ನು ನಿಷೇಧಿಸಲಾಗಿದೆ. ಮಾರುಕಟ್ಟೆ ನಿಯಂತ್ರಕ ಸೆಬಿ(Securities and Exchange Board of India) ಅನಿಲ್ ಅಂಬಾನಿಗೆ ಶಾಕ್ ನೀಡಿದ್ದು, ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
ರಿಲಯನ್ಸ್ ಹೋಮ್ ಫೈನಾನ್ಸ್ನ ಮಾಜಿ ಅಧ್ಯಕ್ಷ ಅನಿಲ್ ಅಂಬಾನಿ ಸೇರಿದಂತೆ ಒಟ್ಟು 24 ಉದ್ಯಮಿಗಳನ್ನು ಸೆಕ್ಯೂರೆಟೀಸ್ ಮಾರ್ಕೆಟ್ನಿಂದ ನಿಷೇಧ ಮಾಡಲಾಗಿದೆ. ಅಲ್ಲದೇ ರಿಲಯನ್ಸ್ ಹೋಮ್ ಫೈನಾನ್ಸ್ ಅನ್ನು ಆರು ತಿಂಗಳ ಕಾಲ ನಿಷೇಧಿಸಲಾಗಿದ್ದು, ದಂಡ ವಿಧಿಸಲಾಗಿದೆ.

ಇನ್ನು ಅನಿಲ್ ಅಂಬಾನಿಗೆ 25 ಕೋಟಿ ರೂಪಾಯಿ ದಂಡದ ಜೊತೆಗೆ ಐದು ವರ್ಷಗಳ ಅವಧಿಗೆ ಸೆಕ್ಯುರಿಟೀಸ್ ಮಾರುಕಟ್ಟೆಯೊಂದಿನ ಸಹಭಾಗಿತ್ವವನ್ನು ನಿಷೇಧಿಸಲಾಗಿದೆ. ಜೊತೆಗೆ ಇತರ ಅಧಿಕಾರಿಗಳಿಗೂ ಕೂಡ ಈ ಪ್ರಕರಣದಲ್ಲಿ ದಂಡ ವಿಧಿಸಲಾಗಿದೆ.
ಪಿಟಿಐ ವರದಿಯ ಪ್ರಕಾರ, ಅನಿಲ್ ಅಂಬಾನಿ ಆರ್ಎಚ್ಎಫ್ಎಲ್ನ ಪ್ರಮುಖ ವ್ಯವಸ್ಥಾಪಕ ಸಿಬ್ಬಂದಿಗಳ ನೆರವಿನೊಂದಿಗೆ, ತನಗೆ ಸಂಬಂಧಿಸಿದ ಸಂಸ್ಥೆಗಳಿಗೆ ಸಾಲದ ನೆಪದಲ್ಲಿ ನೀಡಿರುವ ಹಣದಲ್ಲಿ ವಂಚಿಸಿದ್ದಾರೆ ಎಂದು ಸೆಬಿಯ ತನಿಖೆಯಿಂದ ತಿಳಿದು ಬಂದಿದೆ. ಈ ಬಗ್ಗೆ ಸೆಬಿಯು 222-ಪುಟಗಳ ಸುಧೀರ್ಘ ಆದೇಶದಲ್ಲಿ ನಡೆದ ಅವ್ಯವಾಹಾರಗಳನ್ನು ವಿವರಿಸಿದೆ.
ರಿಲಾಯನ್ಸ್ ಹೋಮ್ ಫೈನಾನ್ಸ್ ಸಂಸ್ಥೆ ಸಾವಿರಾರು ಕೋಟಿ ರೂಪಾಯಿ ಮೊತ್ತದ ಜಿಪಿಸಿ (ಗ್ಯಾರಂಟೀಡ್ ಪೇಮೆಂಟ್ ಕ್ರೆಡಿಟ್) ಸಾಲಗಳನ್ನು ವಿತರಿಸಿದೆ. ಆದರೆ, ಸಾಲ ತೀರಿಸುವ ಯಾವುದೇ ಪ್ರಮುಖ ಆದಾಯ ಇಲ್ಲದ ಸಣ್ಣಪುಟ್ಟ ಸಂಸ್ಥೆಗಳಿಗೆ ಕೂಡ ಈ ಸಾಲಗಳನ್ನು ನೀಡಲಾಗಿತ್ತು.
ಯಾವುದೇ ಅಡಮಾನ ಅಥವಾ ಸೆಕ್ಯೂರಿಟಿಯನ್ನಾಗಲೀ ಯಾವುದನ್ನೂ ಪಡೆಯದೆಯೇ, ನಿಯಮಗಳನ್ನು ಉಲ್ಲಂಘಿಸಿ ಸಾಲ ನೀಡಲಾಗಿತ್ತು. ಆರ್ಎಚ್ಎಫ್ಎಲ್ನಲ್ಲಿ ಸಾಲ ಕೊಡುವ ಮುನ್ನ ಆಂತರಿಕವಾಗಿ ಕ್ರೆಡಿಟ್ ರೇಟಿಂಗ್ಸ್ ಪರಿಶೀಲಿಸಲಾಗುತ್ತದೆ. ಈ ನಿಯಮ ಪಾಲಿಸದೇ ನೇರವಾಗಿ ಸಾಲ ಮಂಜೂರು ಮಾಡಲಾಗಿತ್ತು.
ಈ ವಹಿವಾಟಿನ ಹಿಂದಿನ ಉದ್ದೇಶಗಳ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿದೆ. ಅಲ್ಲದೇ ಆರ್ಎಚ್ಎಫ್ಎಲ್ ಗ್ರೂಪ್ ಮುಖ್ಯಸ್ಥರಾದ ಅನಿಲ್ ಅಂಬಾನಿ ನೇರವಾಗಿ ಪ್ರಭಾವ ಬೀರಿ ಈ ಸಾಲಗಳನ್ನು ಮಂಜೂರು ಮಾಡಿಸಿರುವುದು ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ.
ಇನ್ನು ಸೆಬಿಯು ಅನಿಲ್ ಅಂಬಾನಿಗೆ ಮಾತ್ರವಲ್ಲದೆ ಆರ್ಎಚ್ಎಫ್ಎಲ್ನ ಇತರ ಮಾಜಿ ಪ್ರಮುಖ ಅಧಿಕಾರಿಗಳಾದ ಅಮಿತ್ ಬಾಪ್ನಾ, ರವೀಂದ್ರ ಸುಧಾಲ್ಕರ್ ಮತ್ತು ಪಿಂಕೇಶ್ ಆರ್ ಷಾ ಹಾಗೂ ಹಲವಾರು ಘಟಕಗಳಿಗೆ ದಂಡ ವಿಧಿಸಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications