ವಿಪ್ರೋ ಕಂಪನಿಗೆ ಮತ್ತೊಮ್ಮೆ 500 ಕೋಟಿ ರು ಬೆದರಿಕೆ ಇಮೇಲ್
ಪ್ರತಿಷ್ಠಿತ ಐಟಿ ಕಂಪನಿ, ಬೆಂಗಳೂರು ಮೂಲದ ವಿಪ್ರೋಗೆ ಅಜ್ಞಾತರಿಂದ ಮತ್ತೊಮ್ಮೆ ಬೆದರಿಕೆ ಇ-ಮೇಲ್ ಬಂದಿದೆ. ಬಿಟ್ ಕಾಯಿನ್ ಮೂಲಕ 500 ಕೋಟಿ ರು. ನೀಡಬೇಕೆಂದು ಒತ್ತಾಯಿಸಲಾಗಿದೆ.
ಬೆಂಗಳೂರು, ಜೂನ್ 02: ಬೆಂಗಳೂರು ಮೂಲದ ಪ್ರತಿಷ್ಠಿತ ಐಟಿ ಕಂಪನಿ ವಿಪ್ರೋಗೆ ಅಜ್ಞಾತರಿಂದ ಮತ್ತೊಮ್ಮೆ ಬೆದರಿಕೆ ಇ-ಮೇಲ್ ಬಂದಿದೆ. ಬಿಟ್ ಕಾಯಿನ್ ಮೂಲಕ 500 ಕೋಟಿ ರು. ನೀಡಬೇಕೆಂದು ಒತ್ತಾಯಿಸಲಾಗಿದೆ.
ಡಿಜಿಟಲ್ ವ್ಯವಹಾರಗಳಿಗಾಗಿ ಬಳಸುವ ಹಣದ ವ್ಯವಸ್ಥೆ ಬಿಟ್ ಕಾಯಿನ್ ಮೂಲಕ ಹಣ ವರ್ಗಾಯಿಸುವಂತೆ ಇಮೇಲ್ ನಲ್ಲಿ ಬರೆಯಲಾಗಿದೆ. ಈ ಹಿಂದೆ ಬಂದಿದ್ದ ಇದೇ ರೀತಿ ಇಮೇಲ್ ನಲ್ಲಿ ಮೇ 25ರ ಗಡುವು ನೀಡಲಾಗಿತ್ತು. ಬೆಂಗಳೂರಿನಲ್ಲಿರುವ ಎಲ್ಲಾ ವಿಪ್ರೋ ಕಂಪನಿಗಳ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಲಾಗಿತ್ತು. ಈ ಬಾರಿ 72 ಗಂಟೆಗಳ ಗಡುವು ನೀಡಲಾಗಿದೆ.
ಎರಡು ಬಾರಿಯೂ [email protected] ಎಂಬ ಐಡಿಯಿಂದ ಇಮೇಲ್ ಬಂದಿದೆ. ಐಪಿ ಟ್ರ್ಯಾಕ್ ಮಾಡಿದರೆ ಸ್ವಿಟ್ಜರ್ಲೆಂಡ್ ಎಂದು ತೋರಿಸುತ್ತಿದೆ.

ಪ್ರಕರಣ ದಾಖಲಿಸಿಕೊಂಡಿರುವ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು, ಸಿಐಡಿ ಸೈಬರ್ ಐಟಿ ವಿಂಗ್ ನ ನೆರವು ಕೋರಿದ್ದಾರೆ. ಎರಡನೇ ಬಾರಿಗೆ ಬೆದರಿಕೆ ಬಂದಿರುವುದರಿಂದ ಈಗ ಇಂಟರ್ ಪೋಲ್ ನೆರವು ಪಡೆದು ಇಮೇಲ್ ಕಳಿಸಿದ ವ್ಯಕ್ತಿ ಹಾಗೂ ಸ್ಥಳವನ್ನು ಗುರುತಿಸುವ ಯತ್ನ ಮಾಡಲಾಗುವುದು ಎಂದು ತನಿಖಾಧಿಕಾರಿ ಹೇಳಿದ್ದಾರೆ.
ಮಾರುಕಟ್ಟೆಯಲ್ಲಿ ಚಲಾವಣೆಯಲ್ಲಿ ಇರುವ ಕರೆನ್ಸಿಗಳಿಗೆ (ಡಾಲರ್, ಪೌಂಡ್ , ರೂಪಾಯಿ) ಪರ್ಯಾಯವಾಗಿ ಡಿಜಿಟಲ್ ರೂಪದಲ್ಲಿ ಇರುವ ಮತ್ತು ಇಂಟರ್ನೆಟ್ನಲ್ಲಿ ಮಾತ್ರ ವಹಿವಾಟು ನಡೆಸಬಹುದಾದ ಕರೆನ್ಸಿಯಾಗಿದೆ. ಎಲ್ಲವೂ ಅಂತರ್ಜಾಲದಲ್ಲೇ ವ್ಯವಹಾರ ನಡೆಯುತ್ತದೆ. ಬಿಟ್ ಕಾಯಿನ್ ಪೂರೈಸುವ ಕಂಪನಿಗೆ ಹಣ ನೀಡಿದರೆ ಆ ಕಂಪನಿಗಳು ಗ್ರಾಹಕನಿಗೆ ಅದರ ಮೌಲ್ಯದ ಕಾಯಿನ್ (ಡಿಜಿಟಲ್ ಮಾದರಿಯ) ನೀಡುತ್ತವೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications