ಮೋದಿ ಸರ್ಕಾರಕ್ಕೆ ಹಿತ ಸುದ್ದಿ: ಜಿಡಿಪಿ ಪ್ರಗತಿಯಲ್ಲಿ ಫ್ರಾನ್ಸ್ ಹಿಂದಿಕ್ಕಿದ ಭಾರತ!
ಬೆಂಗಳೂರು, ಜುಲೈ 11: ಅಪನಗದೀಕರಣ, ಸರಕು ಸೇವಾ ತೆರಿಗೆ(ಜಿಎಸ್ಟಿ) ಹಾಗೂ ಹಲವು ಆರ್ಥಿಕ ವ್ಯವಸ್ಥೆ ಬದಲಾವಣೆಗಳ ಮೂಲಕ ಮೋದಿ ಸರ್ಕಾರ ಪ್ರಗತಿಯತ್ತ ಸಾಗುತ್ತಿದೆ ಎಂಬುದನ್ನು ವಿಶ್ವಬ್ಯಾಂಕ್ ಕೂಡಾ ದೃಢಪಡಿಸಿದೆ.
ದೇಶದ ಆರ್ಥಿಕತೆ ಬಗ್ಗೆ, ಕೇಂದ್ರ ಸರ್ಕಾರದ ಕ್ರಮಗಳ ಬಗ್ಗೆ ಇನ್ನೂ ಪ್ರಶ್ನೆ, ಗೊಂದಲಗಳಿವೆ. ಈ ನಡುವೆ. 2017ರ ರಾಷ್ಟ್ರೀಯ ತಲಾ ಆದಾಯ(ಜಿಡಿಪಿ)ಯಲ್ಲಿ ಭಾರತ ಪ್ರಗತಿ ಕಂಡಿದ್ದು, ಫ್ರಾನ್ಸ್ ಹಿಂದಿಕ್ಕಿ 6ನೇ ಸ್ಥಾನಕ್ಕೇರಿದೆ ಎಂದು ವಿಶ್ವಬ್ಯಾಂಕಿನ ವರದಿ ಹೇಳಿದೆ.

ವಿಶ್ವ ಬ್ಯಾಂಕ್ ನೀಡಿರುವ ಅಂಕಿ ಅಂಶಗಳ ಪ್ರಕಾರ, 2017ರ ಅಂತ್ಯಕ್ಕೆ ಭಾರತದ ಜಿಡಿಪಿ ಒಟ್ಟಾರೆ 2.597 ಟ್ರಿಲಿಯನ್ ಡಾಲರ್ ತಲುಪಿತ್ತು. ಆದರೆ, ಫ್ರಾನ್ಸ್ನ ಜಿಡಿಪಿ ಮೊತ್ತ 2.582 ಟ್ರಿಲಿಯನ್ ಡಾಲರ್ ಆಗಿತ್ತು.
ಫ್ರಾನ್ಸ್ನ ಜನ ಸಂಖ್ಯೆ ಇರುವುದು ಕೇವಲ 6.7 ಕೋಟಿ ಮಾತ್ರ. ಭಾರತದ ಒಬ್ಬ ವ್ಯಕ್ತಿಯ ತಲಾವಾರು ಜಿಡಿಪಿಗೆ ಲೆಕ್ಕ ಹಾಕಿದರೆ, ಫ್ರಾನ್ಸ್ ನಮ್ಮ ದೇಶದ 20 ಪಟ್ಟು ಹೆಚ್ಚಿನ ತಲಾದಾಯ ಹೊಂದಿದೆ. ಭಾರತದ ಜನಸಂಖ್ಯೆ 134 ಕೋಟಿ ಮೀರುತ್ತಿದೆ.
ಸುಮಾರು 134 ಕೋಟಿ ಜನ ಸಂಖ್ಯೆಯನ್ನು ಹೊಂದಿರುವ ಭಾರತ, ವಿಶ್ವದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರವಾಗಿದೆ.
ಆರ್ಥಿಕತೆಯಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದರೆ, ಚೀನಾ, ಜಪಾನ್ ಮತ್ತು ಜರ್ಮನಿ ನಂತರದ ಸ್ಥಾನಗಳಲ್ಲಿವೆ. 2.622 ಟ್ರಿಲಿಯನ್ ಡಾಲರ್ ಮೊತ್ತದೊಂದಿಗೆ ಬ್ರಿಟನ್ ಐದನೇ ಸ್ಥಾನದಲ್ಲಿದೆ.
ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಶೇ 7.7ರಷ್ಟು ಆರ್ಥಿಕ ಪ್ರಗತಿ ಕಂಡಿರುವ ಭಾರತ, 2017-18ರದಲ್ಲಿ ಶೇ 6.7ರಷ್ಟಿತ್ತು. 2019ಕ್ಕೆ ಶೇ7.8ರಷ್ಟು ಪ್ರಗತಿ ಸಾಧಿಸಬಹುದು ಎಂದು ಐಎಂಎಫ್ ಹೇಳಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications