ಯೆಸ್ ಸೆಕ್ಯುರಿಟೀಸ್ ಎಂಡಿ & ಸಿಇಒ ಆಗಿ ಪ್ರಶಾಂತ್ ಪ್ರಭಾಕರನ್ ಆಯ್ಕೆ
ಮುಂಬೈ, ಡಿಸೆಂಬರ್ 23: ಯೆಸ್ ಬ್ಯಾಂಕಿನ ಹೂಡಿಕೆ ಬ್ಯಾಂಕಿಂಗ್, ಮರ್ಚೆಂಟ್ ಬ್ಯಾಂಕಿಂಗ್, ವೆಲ್ತ್ ಬ್ರೋಕಿಂಗ್ ಮತ್ತು ಹೂಡಿಕೆ ಸಲಹಾ ಅಂಗಸಂಸ್ಥೆ ಯೆಸ್ ಸೆಕ್ಯುರಿಟೀಸ್ಗೆ ತಕ್ಷಣವೇ ಜಾರಿಗೆ ಬರುವಂತೆ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಎಂಡಿ ಮತ್ತು ಸಿಇಒ) ಪ್ರಶಾಂತ್ ಪ್ರಭಾಕರನ್ ಅವರನ್ನು ಆಯ್ಕೆ ಮಾಡಿದೆ.
ಪ್ರಶಾಂತ್ ಈ ಹಿಂದೆ ಯೆಸ್ ಸೆಕ್ಯುರಿಟೀಸ್ನ ಜಂಟಿ ವ್ಯವಸ್ಥಾಪಕ ನಿದೇಶಕ ಮತ್ತು ಸಿಇಒ ಆಗಿದ್ದರು. ವೆಲ್ತ್ ಬ್ರೋಕಿಂಗ್ ಮತ್ತು ಇನ್ವೆಸ್ಟ್ಮೆಂಟ್ ಅಡ್ವೈಸರಿ ಮತ್ತು ಇನ್ಸ್ಟಿಟ್ಯೂಶನಲ್ ಇಕ್ವಿಟಿಸ್ ವ್ಯವಹಾರದ ನೇತೃತ್ವ ವಹಿಸಿದ್ದರು.
ಬಿಎಫ್ಎಸ್ಐ ವಲಯದಲ್ಲಿ ಎರಡೂವರೆ ದಶಕಗಳ ಅನುಭವ ಹೊಂದಿರುವ ಪ್ರಶಾಂತ್ ಅವರು, 2017 ರಿಂದ ಯೆಸ್ ಸೆಕ್ಯುರಿಟೀಸ್ನೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುಂಚಿತವಾಗಿ ಅವರು ಇಂಡಿಯಾ ಇನ್ಫೋಲೈನ್, ಕೊಟಕ್ ಸೆಕ್ಯುರಿಟೀಸ್ ಮತ್ತು ಎಚ್ಡಿಎಫ್ಸಿ ಬ್ಯಾಂಕ್ನೊಂದಿಗೆ ಕೆಲಸ ಮಾಡಿದ್ದಾರೆ.

''ಪ್ರಶಾಂತ್ ಪ್ರಭಾಕರನ್ ಅವರು ಯೆಸ್ ಸೆಕ್ಯುರಿಟೀಸ್ನ ಎಂಡಿ ಮತ್ತು ಸಿಇಒ ಆಗಿ ಆಯ್ಕೆ ಮಾಡಲು ನಾವು ಸಂತೋಷವಾಗುತ್ತಿದೆ. ಹಣಕಾಸು ಸೇವೆಗಳ ಉದ್ಯಮದಲ್ಲಿ ಒಬ್ಬ ನುರಿತ ನಾಯಕನಾಗಿ, ಮಾರುಕಟ್ಟೆ ಡೈನಾಮಿಕ್ಸ್ ಅನ್ನು ನಿರ್ಣಯಿಸಲು, ಅಪಾಯಗಳನ್ನು ನಿರ್ವಹಿಸಲು ಮತ್ತು ವ್ಯವಹಾರವನ್ನು ಹೆಚ್ಚಿಸಲು ಅವರು ಗಮನಾರ್ಹ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾರೆ. ಅವರ ನಾಯಕತ್ವದಲ್ಲಿ, ಯೆಸ್ ಸೆಕ್ಯುರಿಟೀಸ್ ವ್ಯವಹಾರದ ಬೆಳವಣಿಗೆ ಮತ್ತು ವೇಗವನ್ನು ಪಡೆದುಕೊಳ್ಳುತ್ತದೆ ಎಂದು ನನಗೆ ವಿಶ್ವಾಸವಿದೆ'' ಎಂದು ಯೆಸ್ ಬ್ಯಾಂಕ್ ಎಂಡಿ & ಸಿಇಒ ಹಾಗೂ ಯೆಸ್ ಸೆಕ್ಯುರಿಟೀಸ್ ಅಧ್ಯಕ್ಷ ಪ್ರಶಾಂತ್ ಕುಮಾರ್ ಹೇಳಿದ್ದಾರೆ.
ಯೆಸ್ ಸೆಕ್ಯುರಿಟೀಸ್, ಯೆಸ್ ಬ್ಯಾಂಕಿನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿದ್ದು, 2013 ರಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಕಂಪನಿಯು ಒಂದು ವಹಿವಾಟಿನ ಬ್ರೋಕರ್ನಿಂದ ಬೊಟಿಕ್ ಫೈನಾನ್ಷಿಯಲ್ ಸರ್ವೀಸಸ್ ಆಗಿ ಒಂದು ದಶಕಕ್ಕಿಂತ ಕಡಿಮೆ ಅವಧಿಯಲ್ಲಿ ರೂಪಾಂತರಗೊಂಡಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications