ಡಿ.29ರ ಬದಲಿಗೆ ಜನವರಿ 31ಕ್ಕೆ ಕೇಬಲ್ ಟಿವಿ ನಿಯಮ ಜಾರಿ
ಬೆಂಗಳೂರು, ಡಿಸೆಂಬರ್ 28: ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಹೊರ ತಂದಿರುವ ಹೊಸ ಕೇಬಲ್ ನೀತಿ ಡಿಸೆಂಬರ್ 29ರಿಂದ ಜಾರಿಯಾಗುತ್ತಿಲ್ಲ. ಡಿ.29ರ ಬದಲಿಗೆ ಜನವರಿ 31, 2019ರವರೆಗೆ ಗ್ರಾಹಕರು ತಮ್ಮ ನೆಚ್ಚಿನ ಚಾನೆಲ್ ಆಯ್ಕೆ ಮಾಡುವ ಅವಕಾಶ ಸಿಗಲಿದೆ.
ಕೇಬಲ್ ಹಾಗೂ ಡಿಟಿಹೆಚ್ ನಿಯಮದಲ್ಲಿ ಬದಲಾವಣೆಗೆ ಇನ್ನಷ್ಟು ಸಮಯ ಸಿಕ್ಕಿರುವುದರಿಂದ ಇದು ಗ್ರಾಹಕರಿಗೆ ಶುಭ ಸುದ್ದಿಯಾಗಿದೆ. ಅಲ್ಲದೆ, ಕೇಬಲ್ ಆಪರೇಟರ್ ಗಳಿಗೂ ಪ್ಯಾಕೇಜ್ ಗಳನ್ನು ಸರಿ ಹೊಂದಿಸಲು ಇನ್ನಷ್ಟು ಸಮಯ ಸಿಕ್ಕಿದೆ.

ಪ್ರಸಾರಕಾರರು, ಡಿಟಿಎಚ್ ಆಪರೇಟರ್ ಗಳು ಮತ್ತು Multi System Operators(ಎಂಎಸ್ಒ)ಗಳ ಜತೆ ಗುರುವಾರದಂದು ಟ್ರಾಯ್ ಅಧಿಕಾರಿಗಳು ಮಹತ್ವದ ಸಭೆ ನಡೆಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಟ್ರಾಯ್ ಕಾರ್ಯದರ್ಶಿ ಎಸ್.ಕೆ. ಗುಪ್ತಾ ಹೇಳಿದ್ದಾರೆ.
ಈವರೆಗೆ ಗ್ರಾಹಕರು 250ರಿಂದ 300 ರೂಪಾಯಿ ರಿಚಾರ್ಜ್ ಮಾಡುತ್ತಿದ್ದರು. ಆದರೆ, ಈಗ ದೂರದರ್ಶನದ ಉಚಿತ ಚಾನೆಲ್ ಗಳು ಸೇರಿದಂತೆ 100 ಚಾನೆಲ್ ಗಳ ಪ್ಯಾಕೆಜ್ ಗೆ 184ರು ಗಿಂತ ಹೆಚ್ಚಿನ ಮೊತ್ತವಾಗುವುದಿಲ್ಲ. ಅಲ್ಲದೆ, ಕೇಬಲ್ ಅಪರೇಟರ್ ಗಳು ಸೆಟ್ ಅಪ್ ಬಾಕ್ಸ್ ಅಳವಡಿಕೆ, ಶುಲ್ಕವನ್ನು 500 ರುಗಿಂತ ಹೆಚ್ಚಿಗೆ ಪಡೆಯುವಂತಿಲ್ಲ ಎಂದು ಟ್ರಾಯ್ ಎಚ್ಚರಿಕೆ ನೀಡಿದೆ.
ಗ್ರಾಹಕರಿಗೆ ಅನಗತ್ಯ ಚಾನೆಲ್ ಕಿರಿಕಿರಿಯನ್ನು ತಪ್ಪಿಸಲು ಕೇಂದ್ರ ಸರ್ಕಾರ ಹೊಸ ನೀತಿ ಜಾರಿಗೆ ತರುತ್ತಿದೆ. ಇದರ ಅನ್ವಯ ಚಾನೆಲ್ಗಳ ಆಯ್ಕೆ ಗ್ರಾಹಕದ್ದೇ ಆಗಿರುತ್ತದೆ. ಎಷ್ಟು ಚಾನೆಲ್ ಆಯ್ಕೆ ಮಾಡುತ್ತೀರೋ? ಅಷ್ಟಕ್ಕೆ ಮಾತ್ರ ಹಣ ಪಾವತಿ ಮಾಡಿದರೆ ಸಾಕು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications