ಕ್ಯಾನ್ಸರಿಗೆ ಬಲಿಯಾದ ಯೂಟ್ಯೂಬ್ ಟೆಕ್ಕಿ ವೆಂಕಟ್
ನವದೆಹಲಿ, ಮೇ.15: ಜನಪ್ರಿಯ ವಿಡಿಯೋ ಹಂಚಿಕೆ ತಾಣ ಯೂ ಟ್ಯೂಬ್ ನಲ್ಲಿ ಉನ್ನತ ಹುದ್ದೆಯಲ್ಲಿದ್ದ ಭಾರತೀಯ ಮೂಲದ ಟೆಕ್ಕಿ ವೆಂಕಟ್ ಪಂಚಪಕೇಶನ್ ಅವರು ಕ್ಯಾನ್ಸರಿಗೆ ಬಲಿಯಾಗಿರುವ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ. ಪತ್ನಿ ಸ್ಯಾಂಡಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಯೂಟ್ಯೂಬ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿದ್ದ ವೆಂಕಟ್ ಅವರು ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ವಾರದ ಆರಂಭದಲ್ಲೇ ವೆಂಕಟ್ ಅಲಿಯಾಸ್ ವೆಂಕಿ ಅವರ ನಿಧನವಾಗಿದೆ ಎಂದು ತಿಳಿದು ಬಂದಿದೆ.
ತಮಿಳುನಾಡಿನ ಕೊಯಮತ್ತೂರಿನ ಸಿಐಟಿಯಲ್ಲಿ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಇಂಜಿನಿಯರಿಂಗ್ ಮುಗಿಸಿದ ವೆಂಕಟ್ ಅವರು 90ರ ದಶಕದಲ್ಲೇ ಉನ್ನತ ವ್ಯಾಸಂಗ ಮಾಡಲು ಯುಎಸ್ ಗೆ ತೆರಳಿದ್ದರು. [ವೆಂಕಟ್ ನೆನಪಿಗಾಗಿ ಚೌಡಯ್ಯ ಸ್ಮಾರಕ ಭವನದಲ್ಲಿ ಸಂಗೀತ ಸಂಜೆ]

ಬಫೆಲೋನಲ್ಲಿರುವ ಸ್ಟೇಟ್ ಯೂನಿವರ್ಸಿಟಿ ಆಫ್ ನ್ಯೂಯಾರ್ಕ್(SUNY) ನಲ್ಲಿ ಕಂಪ್ಯೂಟರ್ಸ್ ನಲ್ಲಿ ಎಂಎಸ್ ಮಾಡಿದ ವೆಂಕಟ್ ಅವರನ್ನು ಯಾಹೂ ಸಂಸ್ಥೆ ಉದ್ಯೋಗಿಯಾಗಿ ಸೇರಿಸಿಕೊಂಡಿತ್ತು.
ಯಾಹೂ ಸಂಸ್ಥೆಯಲ್ಲಿ 10 ವರ್ಷ ಅನುಭವ ಪಡೆದ ವೆಂಕಿ 2010ರಲ್ಲಿ ಗೂಗಲ್ ಸೇರಿದರು. ಸೇರಿದ ಕೆಲ ತಿಂಗಳಲ್ಲೇ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದರು. ಯೂಟ್ಯೂಬ್ ಸಿಇಒ ಸೂಸನ್ ವೋಜ್ಸಿಕಿಗೆ ನೇರವಾಗಿ ವೆಂಕಟ್ ರಿಫೋರ್ಟ್ ಮಾಡಿಕೊಳ್ಳಬೇಕಾಗಿತ್ತು.
ವೆಂಕಟ್ ಅವರನ್ನು 'ಕೋಡ್ ವಿಜಾರ್ಡ್' ಎಂದು ಕರೆದಿರುವ ಸೂಸನ್ ಅವರು, ಯೂಟ್ಯೂಬ್ ಬೆಳವಣಿಗೆಯಲ್ಲಿ ವೆಂಕಟ್ ಸಿಂಹಪಾಲು ಇದೆ. ಅವರ ಸಾವಿಗೆ ಸಂಸ್ಥೆ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ. ವಿಧಿ ತುಂಬಾ ಕ್ರೂರಿ ಎಂದಿದ್ದಾರೆ.
ವೆಂಕಟ್ ಸ್ಮರಣೆಯಲ್ಲಿ ವಿಡಿಯೋ ಚಾನೆಲ್ ಆರಂಭಿಸಲಾಗಿದೆ. ಮೇ.16ರಂದು 10AM PT ಸರಿಯಾಗಿ 'ಸೆಲೆಬ್ರೇಟ್ ಲೈಫ್ ಆಫ್ ವೆಂಕಟ್' ಆರಂಭಗೊಳ್ಳಲಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications