ಸಾಮೂಹಿಕ ರಜೆ ಹೋದ ತಪ್ಪಿಗೆ ಕೆಲಸ ಕಳೆದುಕೊಂಡ 236 ಎಂಜಿನಿಯರ್ಗಳು
ಪುಣೆ, ಅಕ್ಟೋಬರ್ 30: ಯಾವುದೇ ಪೂರ್ವ ಮಾಹಿತಿ ನೀಡದೆ ಆರು ವಾರ ಸಾಮೂಹಿಕ ರಜೆ ತೆರಳಿದ್ದ ತನ್ನ 236 ಉದ್ಯೋಗಿಗಳನ್ನು ವಾಹನ ಬಿಡಿಭಾಗ ತಯಾರಿಕಾ ಕಂಪೆನಿ ಜೆಡ್ಎಫ್ ಸ್ಟೀರಿಂಗ್ ಗೇರ್ ಕೆಲಸದಿಂದ ಕಿತ್ತು ಹಾಕಿದೆ.
ಯಾವುದೇ ಸಮರ್ಪಕ ಕಾರಣ ನೀಡದೆ 2017ರ ಡಿಸೆಂಬರ್ 2ರಿಂದ 2018ರ ಜನವರಿ 19ರವರೆಗೆ ಸಾಮೂಹಿಕ ರಜೆ ಮೇಲೆ ತೆರಳಿದ್ದಕ್ಕಾಗಿ 236 ಎಂಜಿನಿಯರ್ಗಳ ಒಪ್ಪಂದವನ್ನು ರದ್ದುಗೊಳಿಸಲಾಗಿದೆ ಎಂದು ಕಂಪೆನಿ ತಿಳಿಸಿದೆ.
ಜರ್ಮನಿ ಮೂಲಕ ಜೆಡ್ಎಫ್ ಸ್ಟೀರಿಂಗ್ ಗೇರ್ ಕಂಪೆನಿಯು ಅಶೋಕ್ ಲೈಲ್ಯಾಂಡ್, ಟಾಟಾ ಮೋಟಾರ್ಸ್, ವೋಲ್ವೋ ಗ್ರೂಪ್, ಎಎಂಡಬ್ಲ್ಯೂ, ಮಹಿಂದ್ರಾ ಆಂಡ್ ಮಹಿಂದ್ರಾ ಸೇರಿದಂತೆ ಅನೇಕ ಪ್ರಮುಖ ವಾಹನ ತಯಾರಿಕಾ ಕಂಪೆನಿಗಳಿಗೆ ಬಾಲ್ ಆಂಡ್ ನಟ್ ಇಂಟಿಗ್ರಲ್ ಹೈಡ್ರಾಲಿಕ್ ಪವರ್ ಮತ್ತು ರೋಲರ್ ಮೆಕ್ಯಾನಿಕಲ್ ಸ್ಟೀರಿಂಗ್ ಸಿಸ್ಟಂಗಳನ್ನು ಪುಣೆಯಲ್ಲಿರುವ ಘಟಕದಲ್ಲಿ ತಯಾರಿಸಿ ಪೂರೈಕೆ ಮಾಡುತ್ತದೆ.

ಉದ್ಯೋಗಿಗಳು ತೋರಿದ ಅನುಚಿತ ವರ್ತನೆಯ ವಿರುದ್ಧದ ಆರೋಪಗಳ ತನಿಖೆಗೆ ತನಿಖಾಧಿಕಾರಿಗಳನ್ನು ನೇಮಿಸಲಾಗಿತ್ತು. ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
@sambitswaraj sir we 263 people working for zf steering gear India limited,Pune, Maharashtra last 15 years.but today company terminated us without giving any reason .pls help us sir. Ame Odia pila bahut haerana hauchu sir.
— manas ranjan samal (@manasra96920) 28 October 2018
ಈ ವಿಚಾರಣಾ ಪ್ರಕ್ರಿಯೆಯು ನ್ಯಾಯಸಮ್ಮತವಾಗಿದ್ದು, ಸ್ವಾಭಾವಿಕ ನ್ಯಾಯದ ತತ್ವದ ಅಡಿಯಲ್ಲಿ ನಡೆಸಲಾಗಿದೆ. ಈ ಉದ್ಯೋಗಿಗಳು ವಿಚಾರಣೆ ವೇಳೆ ತಪ್ಪಿತಸ್ಥರು ಎಂಬುದು ಕಂಡುಬಂದಿದೆ ಎಂದು ಕಂಪೆನಿ ಹೇಳಿಕೆ ತಿಳಿಸಿದೆ.
ಈ ಉದ್ಯೋಗಿಗಳ ಜತೆ ಹಲವು ಸುತ್ತಿನ ಮಾತುಕತೆಗಳು ನಡೆದರೂ ಪರಿಹಾರ ದೊರಕಿಲ್ಲ. ಹೀಗಾಗಿ ಎಲ್ಲ 236 ಉದ್ಯೋಗಿಗಳನ್ನು 2018ರ ಅಕ್ಟೋಬರ್ 26/27ರಿಂದ ಅನ್ವಯವಾಗುವಂತೆ ಕೆಲಸದಿಂದ ವಜಾಗೊಳಿಸಲಾಗಿತ್ತಿದೆ. ಕಾನೂನಿನ ಅಡಿಯಲ್ಲಿ ಅವರಿಗೆ ಬಾಕಿ ಉಳಿದಿರುವ ಹಣವನ್ನು ನೀಡಲಾಗುವುದು ಎಂದು ಅದು ತಿಳಿಸಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications