ಜೊಮಾಟೋ ಸಂಸ್ಥೆ ತೊರೆದ ಸಹ ಸ್ಥಾಪಕ ಗೌರವ್ ಗುಪ್ತಾ
ನವದೆಹಲಿ, ಸೆಪ್ಟೆಂಬರ್ 14: ಆನ್ಲೈನ್ ಫುಡ್ ಡೆಲಿವರಿ ಸಂಸ್ಥೆ ಜೊಮಾಟೋ ಸಹ ಸ್ಥಾಪಕ ಗೌರವ್ ಗುಪ್ತಾ ತನ್ನ ಹುದ್ದೆ ಹಾಗೂ ಸಂಸ್ಥೆಯನ್ನು ತೊರೆದಿದ್ದಾರೆ. ಈ ಬಗ್ಗೆ ಸಂಸ್ಥೆಯ ಉದ್ಯೋಗಿಗಳಿಗೆ ಸುದೀರ್ಘ ಪತ್ರ ಬರೆದಿದ್ದಾರೆ.
2015ರಿಂದ ಜೊಮಾಟೋ ಸಂಸ್ಥೆ ಕಟ್ಟಿ ಬೆಳೆಸುವಲ್ಲಿ ಗುಪ್ತಾ ಪ್ರಮುಖ ಪಾತ್ರ ವಹಿಸಿದ್ದರು. 2018ರಲ್ಲಿ ಸಿಒಒ ಆಗಿದ್ದಲ್ಲದೆ, ಸಂಸ್ಥೆಯ ಐಪಿಒ ಹೊರ ತರಲು ಮುಖ್ಯ ಪಾತ್ರ ವಹಿಸಿದ್ದರು. ಹೂಡಿಕೆದಾರರನ್ನು ಆಕರ್ಷಿಸುವಲ್ಲಿ ಸಫಲರಾಗಿದ್ದರು. ಕೊರೊನಾ ಸಾಂಕ್ರಾಮಿಕದಿಂದ ಜೊಮಾಟೋಗೂ ಆರ್ಥಿಕ ಹಿನ್ನಡೆ ಉಂಟಾಗಿತ್ತು. ಶೇ 13ಕ್ಕೂ ಅಧಿಕ ಸಿಬ್ಬಂದಿಗಳನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು. ಇತ್ತೀಚೆಗೆ ಸಂಸ್ಥೆಯ ದಿನಸಿ ಡೆಲಿವರಿ ಸೇವೆ ಹಾಗೂ ನ್ಯೂಟ್ರಾಸ್ಯೂಟಿಕಲ್ ವ್ಯವಹಾರವನ್ನು ಸ್ಥಗಿತಗೊಳಿಸುತ್ತಿರುವುದಾಗಿ ಘೋಷಿಸಿದೆ. ಈ ಎರಡು ಗುಪ್ತಾ ಅವರ ಐಡಿಯಾ ಎಂಬುದು ಗಮನಾರ್ಹ.
''ಉತ್ತಮ ತಂಡವಾಗಿ ನಾವು ಕಾರ್ಯ ನಿರ್ವಹಿಸಿ, ಸಂಸ್ಥೆ ಕಟ್ಟಿ ಬೆಳೆಸಿದ್ದು ಸ್ಮರಣೀಯವಾಗಿದ್ದು, ನಾಯಕತ್ವ ಮುಂದಿನ ಹಂತಕ್ಕೆ ಕೊಂಡೊಯ್ಯುವ ನಿರೀಕ್ಷೆಯಿದೆ,'' ಎಂದು ಮತ್ತೊಬ್ಬ ಸಹ ಸ್ಥಾಪಕ ದೀಪಿಂದರ್ ಗೊಯೆಲ್ ಪ್ರತಿಕ್ರಿಯಿಸಿದ್ದಾರೆ.

"ಜೊಮಾಟೊವನ್ನು ಮುಂದಕ್ಕೆ ಕೊಂಡೊಯ್ಯಲು ನಮ್ಮಲ್ಲಿ ಈಗ ಉತ್ತಮ ತಂಡವಿದೆ ಮತ್ತು ನನ್ನ ಪ್ರಯಾಣದಲ್ಲಿ ನಾನು ಪರ್ಯಾಯ ಮಾರ್ಗವನ್ನು ನೋಡಿಕೊಳ್ಳುವ ಸಮಯ ಬಂದಿದೆ. ನಾನು ಈ ಪತ್ರ ಬರೆಯುವಾಗ ನಾನು ತುಂಬಾ ಭಾವುಕನಾಗಿದ್ದೇನೆ ಮತ್ತು ಯಾವುದೇ ಪದಗಳು ನನ್ನ ಈಗಿನ ಪರಿಸ್ಥಿತಿಯನ್ನು ಅರ್ಥ ಮಾಡಿಸಿ, ನ್ಯಾಯ ಸಲ್ಲಿಸಬಲ್ಲದೋ ಗೊತ್ತಿಲ್ಲ, " ಎಂದು ಗುಪ್ತಾ ಅವರು ಕಂಪನಿಯ ಬ್ಲಾಗ್ ನಲ್ಲಿ ಕಾರ್ಯನಿರ್ವಾಹಕರಿಗೆ ಇಮೇಲ್ ಮೂಲಕ ಹೇಳಿದ್ದಾರೆ.
ಇದೇ ವೇಳೆ, ಜುಲೈನಲ್ಲಿ ಷೇರುಪೇಟೆಗೆ ಎಂಟ್ರಿ ಕೊಟ್ಟ ಜೊಮಾಟೊ, ಜೂನ್ 30, 2021 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ರೂ. 356 ಕೋಟಿ ನಿವ್ವಳ ನಷ್ಟವನ್ನು ವರದಿ ಮಾಡಿದೆ, ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ 99.8 ಕೋಟಿ ರೂ ನಷ್ಟ ಅನುಭವಿಸಿತ್ತು. ಇದೇ ತ್ರೈಮಾಸಿಕದಲ್ಲಿ ಕಂಪನಿಯ ಒಟ್ಟು 916 ಕೋಟಿ ರೂ ಆದಾಯ ಗಳಿಸಿತ್ತು. ಹಿಂದಿನ ವರ್ಷದ ಇದೇ ಅವಧಿಯಲ್ಲಿ 283.5 ಕೋಟಿ ರು ಆದಾಯ ಗಳಿಸಿತ್ತು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications