ಜೊಮಾಟೋ ಸಂಸ್ಥೆ ತೊರೆದ ಸಹ ಸ್ಥಾಪಕ ಗೌರವ್ ಗುಪ್ತಾ
ನವದೆಹಲಿ, ಸೆಪ್ಟೆಂಬರ್ 14: ಆನ್ಲೈನ್ ಫುಡ್ ಡೆಲಿವರಿ ಸಂಸ್ಥೆ ಜೊಮಾಟೋ ಸಹ ಸ್ಥಾಪಕ ಗೌರವ್ ಗುಪ್ತಾ ತನ್ನ ಹುದ್ದೆ ಹಾಗೂ ಸಂಸ್ಥೆಯನ್ನು ತೊರೆದಿದ್ದಾರೆ. ಈ ಬಗ್ಗೆ ಸಂಸ್ಥೆಯ ಉದ್ಯೋಗಿಗಳಿಗೆ ಸುದೀರ್ಘ ಪತ್ರ ಬರೆದಿದ್ದಾರೆ.
2015ರಿಂದ ಜೊಮಾಟೋ ಸಂಸ್ಥೆ ಕಟ್ಟಿ ಬೆಳೆಸುವಲ್ಲಿ ಗುಪ್ತಾ ಪ್ರಮುಖ ಪಾತ್ರ ವಹಿಸಿದ್ದರು. 2018ರಲ್ಲಿ ಸಿಒಒ ಆಗಿದ್ದಲ್ಲದೆ, ಸಂಸ್ಥೆಯ ಐಪಿಒ ಹೊರ ತರಲು ಮುಖ್ಯ ಪಾತ್ರ ವಹಿಸಿದ್ದರು. ಹೂಡಿಕೆದಾರರನ್ನು ಆಕರ್ಷಿಸುವಲ್ಲಿ ಸಫಲರಾಗಿದ್ದರು. ಕೊರೊನಾ ಸಾಂಕ್ರಾಮಿಕದಿಂದ ಜೊಮಾಟೋಗೂ ಆರ್ಥಿಕ ಹಿನ್ನಡೆ ಉಂಟಾಗಿತ್ತು. ಶೇ 13ಕ್ಕೂ ಅಧಿಕ ಸಿಬ್ಬಂದಿಗಳನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು. ಇತ್ತೀಚೆಗೆ ಸಂಸ್ಥೆಯ ದಿನಸಿ ಡೆಲಿವರಿ ಸೇವೆ ಹಾಗೂ ನ್ಯೂಟ್ರಾಸ್ಯೂಟಿಕಲ್ ವ್ಯವಹಾರವನ್ನು ಸ್ಥಗಿತಗೊಳಿಸುತ್ತಿರುವುದಾಗಿ ಘೋಷಿಸಿದೆ. ಈ ಎರಡು ಗುಪ್ತಾ ಅವರ ಐಡಿಯಾ ಎಂಬುದು ಗಮನಾರ್ಹ.
''ಉತ್ತಮ ತಂಡವಾಗಿ ನಾವು ಕಾರ್ಯ ನಿರ್ವಹಿಸಿ, ಸಂಸ್ಥೆ ಕಟ್ಟಿ ಬೆಳೆಸಿದ್ದು ಸ್ಮರಣೀಯವಾಗಿದ್ದು, ನಾಯಕತ್ವ ಮುಂದಿನ ಹಂತಕ್ಕೆ ಕೊಂಡೊಯ್ಯುವ ನಿರೀಕ್ಷೆಯಿದೆ,'' ಎಂದು ಮತ್ತೊಬ್ಬ ಸಹ ಸ್ಥಾಪಕ ದೀಪಿಂದರ್ ಗೊಯೆಲ್ ಪ್ರತಿಕ್ರಿಯಿಸಿದ್ದಾರೆ.

"ಜೊಮಾಟೊವನ್ನು ಮುಂದಕ್ಕೆ ಕೊಂಡೊಯ್ಯಲು ನಮ್ಮಲ್ಲಿ ಈಗ ಉತ್ತಮ ತಂಡವಿದೆ ಮತ್ತು ನನ್ನ ಪ್ರಯಾಣದಲ್ಲಿ ನಾನು ಪರ್ಯಾಯ ಮಾರ್ಗವನ್ನು ನೋಡಿಕೊಳ್ಳುವ ಸಮಯ ಬಂದಿದೆ. ನಾನು ಈ ಪತ್ರ ಬರೆಯುವಾಗ ನಾನು ತುಂಬಾ ಭಾವುಕನಾಗಿದ್ದೇನೆ ಮತ್ತು ಯಾವುದೇ ಪದಗಳು ನನ್ನ ಈಗಿನ ಪರಿಸ್ಥಿತಿಯನ್ನು ಅರ್ಥ ಮಾಡಿಸಿ, ನ್ಯಾಯ ಸಲ್ಲಿಸಬಲ್ಲದೋ ಗೊತ್ತಿಲ್ಲ, " ಎಂದು ಗುಪ್ತಾ ಅವರು ಕಂಪನಿಯ ಬ್ಲಾಗ್ ನಲ್ಲಿ ಕಾರ್ಯನಿರ್ವಾಹಕರಿಗೆ ಇಮೇಲ್ ಮೂಲಕ ಹೇಳಿದ್ದಾರೆ.
ಇದೇ ವೇಳೆ, ಜುಲೈನಲ್ಲಿ ಷೇರುಪೇಟೆಗೆ ಎಂಟ್ರಿ ಕೊಟ್ಟ ಜೊಮಾಟೊ, ಜೂನ್ 30, 2021 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ರೂ. 356 ಕೋಟಿ ನಿವ್ವಳ ನಷ್ಟವನ್ನು ವರದಿ ಮಾಡಿದೆ, ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ 99.8 ಕೋಟಿ ರೂ ನಷ್ಟ ಅನುಭವಿಸಿತ್ತು. ಇದೇ ತ್ರೈಮಾಸಿಕದಲ್ಲಿ ಕಂಪನಿಯ ಒಟ್ಟು 916 ಕೋಟಿ ರೂ ಆದಾಯ ಗಳಿಸಿತ್ತು. ಹಿಂದಿನ ವರ್ಷದ ಇದೇ ಅವಧಿಯಲ್ಲಿ 283.5 ಕೋಟಿ ರು ಆದಾಯ ಗಳಿಸಿತ್ತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications