ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

28 ದಿನದಲ್ಲಿ ಮಲೆ ಮಾದೇಶ್ವರದಲ್ಲಿ 1.25 ಕೋಟಿ ಕಾಣಿಕೆ ಸಂಗ್ರಹ

|
Google Oneindia Kannada News

ತುಮಕೂರು, ಜೂನ್ 28 : ಕರ್ನಾಟಕದ ಶ್ರೀಮಂತ ದೇವಾಲಯಗಳ ಪೈಕಿ ಮಲೆ ಮಹದೇಶ್ವರವೂ ಒಂದು. ಕೇವಲ 28 ದಿನದಲ್ಲಿ ದೇವಾಲಯದಲ್ಲಿ 1.25 ಕೋಟಿ ಹುಂಡಿ ಹಣ ಸಂಗ್ರಹವಾಗಿದೆ.

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ದೇವಾಲಯದ ಮೇ ತಿಂಗಳ ಹುಂಡಿ ಎಣಿಕೆ ಕಾರ್ಯ ಗುರುವಾರ ನಡೆಯಿತು. 1,28,50,373 ರೂಪಾಯಿ ಸಂಗ್ರಹವಾಗಿದೆ. 70 ಗ್ರಾಂ ಚಿನ್ನ ಮತ್ತು 1.100 ಗ್ರಾಂ ಬೆಳ್ಳಿ ಹುಂಡಿಯಲ್ಲಿ ಸಿಕ್ಕಿದೆ.

ಆದಾಯ ಕಡಿಮೆ, ಕುಕ್ಕೆ ಸುಬ್ರಮಣ್ಯದ ಶ್ರೀಮಂತ ದೇವಾಲಯ ಪಟ್ಟಕ್ಕಿಲ್ಲ ಧಕ್ಕೆಆದಾಯ ಕಡಿಮೆ, ಕುಕ್ಕೆ ಸುಬ್ರಮಣ್ಯದ ಶ್ರೀಮಂತ ದೇವಾಲಯ ಪಟ್ಟಕ್ಕಿಲ್ಲ ಧಕ್ಕೆ

ಪ್ರತಿ ತಿಂಗಳಿಗೊಮ್ಮೆ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಆನಂದ್, ಶ್ರೀ ಸಾಲೂರು ಬೃಹನ್ಮಠದ ಶ್ರೀ ಪಟ್ಟದ ಗುರುಸ್ವಾಮಿಗಳ ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯುತ್ತದೆ.

ದೇವರಮನೆಯ ದೇವಸ್ಥಾನದಲ್ಲಿ ಹುಂಡಿ ಕಳ್ಳತನದೇವರಮನೆಯ ದೇವಸ್ಥಾನದಲ್ಲಿ ಹುಂಡಿ ಕಳ್ಳತನ

1.25 crore collected in Male Mahadeshwara temple in 28 days

ಕಳೆದ ತಿಂಗಳು 32 ದಿನಗಳಲ್ಲಿ ಹುಂಡಿಯ ಎಣಿಕೆ ಕಾರ್ಯ ನಡೆದಿತ್ತು. 1.60 ಕೋಟಿ ಹಣ ಸಂಗ್ರಹವಾಗಿತ್ತು. ದಿನದಿಂದ ದಿನಕ್ಕೆ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ.

ದೇವಸ್ಥಾನದಲ್ಲಿ ಸೀರೆಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸಾವುದೇವಸ್ಥಾನದಲ್ಲಿ ಸೀರೆಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸಾವು

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಮಲೆ ಮಹದೇಶ್ವರ ಕ್ಷೇತ್ರದ ಅಭಿವೃದ್ಧಿಗಾಗಿ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗಿದೆ. ಆದರೆ, ಮೂಲ ಸೌಕರ್ಯಗಳ ಕೊರತೆ ಇದೆ ಎಂದು ಭಕ್ತರು ಆರೋಪಿಸಿದ್ದಾರೆ.

ಕುಕ್ಕೆ ಸುಬ್ರಮಣ್ಯ ಕರ್ನಾಟಕದ ಶ್ರೀಮಂತ ದೇವಾಲಯಗಳಲ್ಲಿ ಮೊದಲ ಸ್ಥಾನದಲ್ಲಿದೆ. 2018-19ನೇ ಸಾಲಿನಲ್ಲಿ ದೇವಾಲಯದ ಆದಾಯ 92,09,13,824 ರೂ.ಗಳು. ವರ್ಷದಿಂದ ವರ್ಷಕ್ಕೆ ದೇವಾಲಯದ ಆದಾಯ ಹೆಚ್ಚುತ್ತಲೇ ಇದೆ.

English summary
In just 28 days 1.25 crore collected in Male Mahadeswara temple Chamarjanagar. Temple hundi May month collection counting held on June 27, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X