ಗುಂಡ್ಲುಪೇಟೆಯಲ್ಲಿ ನಾಯಿಗಳ ದಾಳಿಗೆ 10 ಕುರಿ ಬಲಿ-ಕಣ್ಣೀರಿಟ್ಟ ಕುರಿಗಾಹಿ ಮಹಿಳೆ
ಚಾಮರಾಜನಗರ, ಮೇ, 20: ನಾಯಿಗಳ ಹಿಂಡು ದಾಳಿ ನಡೆಸಿದ 10 ಕುರಿಗಳನ್ನು ಕೊಂದು ಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮಾಡ್ರಹಳ್ಳಿಯಲ್ಲಿ ಭಾನುವಾರ ಸಂಜೆ (ಮೇ 19) ನಡೆದಿದೆ.
ಮಾಡ್ರಹಳ್ಳಿ ಗ್ರಾಮದ ನಾಗಮ್ಮ ಎಂಬುವರು ತಮ್ಮ ಜಮೀನಿನಲ್ಲಿ ಕುರಿಗಳನ್ನು ಮೇಯಲು ಬಿಟ್ಟಿದ್ದ ವೇಳೆ ನಾಯಿಗಳ ಹಿಂಡು ದಾಳಿ ಮಾಡಿ 10 ಕುರಿಗಳನ್ನು ಕೊಂದು ಹಾಕಿ, ಎರಡು ಕುರಿಗಳನ್ನು ತೀವ್ರವಾಗಿ ಗಾಯಗೊಳಿಸಿವೆ.

ಕುರಿಗಳ ಮೇಲೆ ದಾಳಿ ಮಾಡಿದ್ದು, ನಾಯಿಗಳು ಸಾಕು ನಾಯಿಗಳಾ ಅಥವಾ ಬೀದಿ ನಾಯಿಗಳಾ ಎಂಬ ಮಾಹಿತಿ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ಇನ್ನು "ತನ್ನ ಬಳಿ ಇದ್ದ 12 ಕುರಿಗಳಲ್ಲಿ 10 ಕುರಿಗಳು ಇಲ್ಲವಾಗಿವೆ. ತನಗೆ ಸೂಕ್ತ ಪರಿಹಾರ ಕೊಡಬೇಕು," ಎಂದು ನಾಗಮ್ಮ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಸದ್ಯ ನಾಗಮ್ಮ ಅವರು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಜೋಡಿ ಜಿಂಕೆಗಳ ಕಾದಾಟ: ಚಾಮರಾಜನಗರ ಜಿಲ್ಲೆಯ ಬಂಡೀಪುರ ವ್ಯಾಪ್ತಿಯಲ್ಲಿ ಪ್ರಾಣಿಗಳ ಕಾದಾಟದ ದೃಶ್ಯಗಳು ಸದ್ದು ಮಾಡುತ್ತಲೇ ಇರುತ್ತವೆ. ಹಾಗೆಯೇ ಇದೀಗ ಅಂತಹದ್ದೇ ಅದ್ಭುತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ವಾಹನಗಳ ಸಂಚಾರವಿದ್ದರೂ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಪ್ರಸಂಗ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ ರಸ್ತೆಯಲ್ಲಿ ನಡೆದಿದೆ.
ಹತ್ತಾರು ಜಿಂಕೆಗಳು ಮೇಯುತ್ತಿದ್ದರೆ, ಎರಡು ಜಿಂಕೆಗಳು ಮಾತ್ರ ನಾನಾ-ನೀನಾ ಎಂದು ಕಾಳಗಕ್ಕೆ ಇಳಿದಿದ್ದವು. ಈ ದೃಶ್ಯವನ್ನು ರಸ್ತೆಯಲ್ಲಿ ಸಂಚರಿಸುತ್ತಿದ್ದವರು ಸೆರೆಹಿಡಿದಿದ್ದು, ಸದ್ಯ ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.
ವಾಹನಗಳ ಹಾರ್ನ್ ಕೇಳುತ್ತಿದ್ದಂತೆ ಜಿಂಕೆ ಹಿಂಡು ಚದುರಿದಾಗ, ಕಾಳಗಕ್ಕೆ ಇಳಿದಿದ್ದ ಜಿಂಕೆಗಳು ಕೂಡ ಕಾಡಿಗೆ ಕಾಲ್ಕಿತ್ತ ಘಟನೆಯೂ ನಡೆದಿದೆ. ಇನ್ನು ಈ ವಿಡಿಯೋ ಅಂತೂ ಸಖತ್ ವೈರಲ್ ಆಗುತ್ತಿದೆ.
ನಾಯಿಗಳ ದಾಳಿಗೆ ಹೆದರಿದ ಕತ್ತೆಕಿರುಬ: ಅಪರೂಪವಾಗಿ ಕಾಣಸಿಗುವ ಪ್ರಾಣಿಯೊಂದನ್ನು ಅರಣ್ಯ ಇಲಾಖೆ ರಕ್ಷಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಸಮೀಪದ ಚೆನ್ನಿಕಟ್ಟೆ ಹಾಡಿಯಲ್ಲಿ ನಡೆದಿದೆ. ಹಾಗಾದರೆ ಆ ಪ್ರಾಣಿ ಯಾವುದು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಗುಂಡ್ಲುಪೇಟೆ ತಾಲೂಕಿನ ಚೆನ್ನಿಕಟ್ಟೆ ಹಾಡಿಯಲ್ಲಿ ನಾಯಿಗಳ ದಾಳಿಯಿಂದ ಬಚಾವಾಗಿ ಸೇತುವೆ ಕೆಳಗೆ ಹೈನಾ (ಕತ್ತೆಕಿರುಬ) ಅಡಗಿ ಕುಳಿತಿದ್ದು, ಈ ಮಾಹಿತಿ ಅರಿತ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಅದನ್ನು ರಕ್ಷಣೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬದುಕಿದೆಯಾ ಬಡಜೀವವೇ ಎಂದು ಸೇತುವೆ ಕೆಳಗೆ ಅಡಗಿದ್ದ ಹೈನಾ ಮತ್ತೇ ಕಾಡಿನ ಹಾದಿ ಹಿಡಿದಿದೆ. ಕತ್ತೆ ಕಿರುಬ ಇದೀಗ ಆರೋಗ್ಯವಾಗಿದ್ದು, ನಾಯಿಗಳ ದಾಳಿಯಿಂದ ಬಚಾವಾಗಲು ಸೇತುವೆ ಕೆಳಗೆ ಅಡಗಿತ್ತು. ಇದೀಗ ಅದು ಕಾಡಿನತ್ತ ತೆರಳಿದೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications