ಚಾಮರಾಜನಗರ: ಸಿಹಿ ಹಣ್ಣೆಂದು ವಿಷಪೂರಿತ ಕಾಯಿ ಸೇವನೆ; 12 ಮಂದಿ ಅಸ್ವಸ್ಥ
ಚಾಮರಾಜನಗರ, ನವೆಂಬರ್, 27: ಕಲುಷಿತ ನೀರು ಸೇವೆನೆ ಮಾಡಿ ಜನರು ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿತ್ತು. ಇದೇ ವಿಚಾರ ರಾಜ್ಯಾದ್ಯಂತ ಸದ್ದು ಮಾಡಿತ್ತು. ಇದೀಗ ವಿಷಪೂರಿತ ಕಾಯಿ ತಿಂದು ವಾಂತಿ ಭೇದಿ ಕಾಣಿಸಿಕೊಂಡು ಮಕ್ಕಳು ಸೇರಿದಂತೆ 12 ಮಂದಿ ಕೂಲಿ ಕಾರ್ಮಿಕರು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬುಧವಾರ (ನವೆಂಬರ್ 27) ಜರುಗಿದೆ.
ಕೊಪ್ಪಳ ಜಿಲ್ಲೆಯ ಕುಣಿಕೆರಿ ತಾಂಡ ಗ್ರಾಮದ ಯುವರಾಜು(4), ವೆಂಕಟೇಶ್ (8), ಪ್ರೀತಮ್ (10), ಪವನ್ (10), ಅನುಷಾ (10), ಅಂಕಿತಾ (10), ಅರ್ಜುನ(10), ಬದ್ರಿಬಾಯಿ (32), ಸೀತಾಬಾಯಿ (48), ಲಕ್ಷ್ಮೀ (35), ಸರಸ್ವತಿ (42), ಲಲಿತಾ(45) ಇವರುಗಳು ಕಾಯಿ ತಿಂದು ಆಸ್ಪತ್ರೆಗೆ ದಾಖಲಾಗಿರುವ ಕೂಲಿ ಕಾರ್ಮಿಕರಾಗಿದ್ದಾರೆ.

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಗ್ರಾಮದ ಬಳಿ ಕಬ್ಬು ಕಟಾವು ಮಾಡಲು ಒಂದು ತಿಂಗಳ ಹಿಂದೆ ಆಗಮಿಸಿದ್ದ 3 ಕುಟುಂಬ ಎಂದಿನಂತೆ ಬುಧವಾರ ಕಬ್ಬು ಕಟಾವು ಮಾಡಲು ತೆರಳಿದೆ. ಈ ವೇಳೆ ಪಕ್ಕದಲ್ಲಿ ಆಟ ಆಡುತ್ತಿದ್ದಾಗ ಅನುಷಾ ಎಂಬ ಬಾಲಕಿ ಮರಳ ಕಾಯಿ ತಿಂದು ಸಿಹಿಯಾಗಿದೆ ಎಂದಾಗ ಜೊತೆಯಲ್ಲಿದ್ದರು ಕಾಯಿಯ ಒಳಗಡೆಯ ಬೀಜವನ್ನು ತಿಂದಿದ್ದಾರೆ.
ಮಕ್ಕಳು ಸಿಹಿ ಕಾಯಿ ಅನ್ನುತ್ತಿದ್ದಂತೆಯೇ ಮಕ್ಕಳ ಪೋಷಕರು ಸಹ ಕಾಯಿ ಮತ್ತು ಬೀಜ ಸೇವಿಸಿದ್ದಾರೆ. ಸ್ವಲ್ಪ ಹೊತ್ತಿನಲ್ಲೇ ಮಕ್ಕಳು ಸೇರಿ 12 ಮಂದಿಗೂ ವಾಂತಿ-ಭೇದಿ ಕಾಣಿಸಿಕೊಂಡಿದೆ. ಬಳಿಕ ಜೊತೆಯಲ್ಲಿದ್ದ ಇನ್ನುಳಿದ ಕೂಲಿ ಕಾರ್ಮಿಕರನ್ನು ಆಟೋದಲ್ಲಿ ಕೊಳ್ಳೇಗಾಲ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ದಾಖಲಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಯ ವೈದ್ಯರುಗಳು ಡಾ.ಶೃತಿ, ಡಾ.ಸೌಮ್ಯ, ಡಾ.ವೈಭವ್ ಇನ್ನಿತರರು ಸಕಾಲದಲ್ಲಿ ಚಿಕಿತ್ಸೆ ನೀಡಿದ್ದು, ಇವರಲ್ಲಿ ಯುವರಾಜ್ ಎಂಬ ಬಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರಕ್ಕೆ ಕಳುಹಿಸಲಾಗಿದೆ. ಆತನ ಸ್ಥಿತಿಯು ಚಿಂತಾಜನಕವಾಗಿದ್ದು, ಸಂಜೆಯಷ್ಟರಲ್ಲಿ ಚೇತರಿಕೆ ಕಂಡು ಬಂದಿದೆ ಎನ್ನಲಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸರು ಸಹ ಆಸ್ಪತ್ರೆಗೆ ಆಗಮಿಸಿ ಸ್ಪಂದಿಸಿ ಸಂತ್ರಸ್ತರ ಬಳಿ ಹೆಚ್ಚಿನ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಆನೆ ಮರಿ ಸಾವು: ಆಹಾರ ಅರಸಿ ಬಂದ ಆನೆಮರಿಯೊಂದು ವಿದ್ಯುತ್ ಶಾಕ್ಗೆ ಬಲಿಯಾದ ಘಟನೆ ಗುಂಡ್ಲುಪೇಟೆ ತಾಲೂಕಿನ ಮಂಗಲ ಗ್ರಾಮದ ಕಾಡಂಚಿನಲ್ಲಿ ನಡೆದಿದೆ.
ಷರೀಪ್ ಖಾನ್ ಎಂಬುವವರ ಜಮೀನಿನಲ್ಲಿ ಅಕ್ರಮವಾಗಿ ಹರಿಸಿದ್ದ ವಿದ್ಯುತ್ ನಿಂದ ಈ ಅವಘಡ ನಡೆದಿದ್ದು, ಮೃತ ಆನೆ ಮರಿಯು ಗಂಡಾಗಿದ್ದು 1ರಿಂದ 2 ವರ್ಷ ಇರಬಹುದು ಎಂದು ಅಂದಾಜು ಮಾಡಲಾಗಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯ ವ್ಯಾಪ್ತಿಯ ಮಂಗಲ ಗ್ರಾಮದ ಹುಲಿಯಮ್ಮನ ಗುಡಿಗೆ ಹೋಗುವ ದಾರಿಯಲ್ಲಿನ ಷರೀಪ್ ಎಂಬುವವರು ತಮ್ಮ ಜಮೀನಿನಲ್ಲಿ ರಾಗಿ ಬೆಳೆದಿದ್ದು, ಬೆಳೆ ರಕ್ಷಣೆಗಾಗಿ ಅಕ್ರಮ ವಿದ್ಯುತ್ ನೀಡಿದ್ದರಿಂದ ಆಹಾರ ಅರಸಿ ಹಿಂಡಿನೊಂದಿಗೆ ಬಂದಿದ್ದ ಆನೆ ಮರಿ ವಿದ್ಯುತ್ ಪ್ರವಹಿಸಿ ಅಸುನೀಗಿದೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications