ಹನೂರಲ್ಲಿ ಒಂದೇ ದಿನ ಹದಿಮೂರು ಜಾನುವಾರುಗಳ ಸಾವು!
ಹನೂರು, ಏಪ್ರಿಲ್ 23 : ಒಂದೇ ದಿನ ಸುಮಾರು ಹದಿಮೂರು ಜಾನುವಾರು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಕೆ ವಿ ಎನ್ ದೊಡ್ಡಿಗ್ರಾಮದಲ್ಲಿ ನಡೆದಿದೆ. ಮೆಕ್ಕೆ ಜೋಳದ ಎಳೆ ಪೈರು ಸೇವಿಸಿರುವುದರಿಂದ ಜಾನುವಾರುಗಳ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ನಾಗರಾಜು ಎನ್ನುವರ ಐದು, ಮಾದೇಶ ಅವರ ಎಂಟು ಸೇರಿದಂತೆ ಒಟ್ಟು ಹದಿಮೂರು ಜಾನುವಾರುಗಳು ಸಾವನ್ನಪ್ಪಿವೆ. ಇದರಿಂದ ಹಸುಗಳು ಕಳೆದುಕೊಂಡ ಮಾಲೀಕರು ಚಿಂತಾಕ್ರಾಂತರಾಗಿದ್ದಾರೆ.

ಹಸುಗಳು ಮೆಕ್ಕೆ ಜೋಳದ ಎಳೆ ಪೈರುಗಳನ್ನು ಸೇವಿಸಿದ್ದರಿಂದ ಸಾವನ್ನಪ್ಪಿರಬಹುದೆಂದು ಒಬ್ಬರು ಹೇಳಿದರೆ ಮತ್ತೊಬ್ಬರು ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರಬಹುದೆಂದು ಹೇಳುತ್ತಿದ್ದಾರೆ.
ಇದೀಗ ಸತ್ತಿರುವ ಜಾನುವಾರುಗಳ ಮರಣೋತ್ತರ ಪರೀಕ್ಷೆಯನ್ನು ಪಶು ವೈದ್ಯಾಧಿಕಾರಿಗಳು ನಡೆಸಿದ್ದು, ಅದರ ವರದಿ ಬಂದ ಬಳಿಕವಷ್ಟೆ ಸಾವಿಗೆ ನೈಜ ಕಾರಣ ತಿಳಿದು ಬರಬೇಕಿದೆ.
ಈ ಬಗ್ಗೆ ಜಾನುವಾರುಗಳನ್ನು ಕಳೆದುಕೊಂಡ ಮಾಲೀಕ ಮಾದೇಶ ಮಾತನಾಡಿ, :ಕಳೆದ ರಾತ್ರಿ ಬಿದ್ದಿದ್ದ ಮಳೆಯ ಕಾರಣ ಕೆಂಪು ಮಿಶ್ರಿತ ನೀರನ್ನು ಕುಡಿದಿರುವ ಪರಿಣಾಮ ಹೀಗಾಗಿದೆ" ಎಂದು ಹೇಳಿದ್ದಾರೆ.
ಒಂದೇ ದಿನದಲ್ಲಿ ಹದಿಮೂರು ಜಾನುವಾರುಗಳು ಮೃತಪಟ್ಟಿರುವ ಸುದ್ದಿ ತಿಳಿಯುತ್ತಿದ್ದಂತೆ ಸುತ್ತ ಮುತ್ತ ಗ್ರಾಮಸ್ಥರು ಶಾಸಕ ನರೇಂದ್ರ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಬಸವರಾಜು, ತಹಸೀಲ್ದಾರ್ ಕಾಮಾಕ್ಷಮ್ಮ ಭೇಟಿ ನೀಡಿ ಜಾನುವಾರುಗಳನ್ನು ಕಳೆದುಕೊಂಡ ಮಾಲಿಕರಿಗೆ ಸಾಂತ್ವನ ಹೇಳಿದರು.
ಒಂದೇ ಸ್ಥಳದಲ್ಲಿ ಕರುಗಳು ಸೇರಿದಂತೆ 13 ಜಾನುವಾರುಗಳು ಸತ್ತು ಬಿದ್ದಿರುವ ದೃಶ್ಯ ನೋಡುಗರ ಮನಕಲಕುವಂತಿದ್ದು, ಜಾನುವಾರುಗಳ ಅಂತ್ಯಕ್ರಿಯೆ ಸಾಮೂಹಿಕವಾಗಿ ನೆರವೇರಿಸಲಾಯಿತು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications