ಮೂಲಸೌಕರ್ಯ ಕೊರತೆ: ಚಾಮರಾಜನಗರದಲ್ಲಿ ಬಾಗಿಲು ಮುಚ್ಚಿದ 13 ಸರ್ಕಾರಿ ಶಾಲೆಗಳು
ಚಾಮರಾಜನಗರ, ಆಗಸ್ಟ್ 17: ಮೂಲಸೌಕರ್ಯ ಕೊರತೆಯಿಂದಾಗಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಜಿಲ್ಲೆಯಲ್ಲಿ ಒಟ್ಟು 13 ಸರ್ಕಾರಿ ಶಾಲೆಗಳ ಬಾಗಿಲು ಮುಚ್ಚಲಾಗಿದೆ.
2023-24 ನೇ ಶೈಕ್ಷಣಿಕ ಸಾಲಿನಲ್ಲಿ ಮೂಲಸೌಕರ್ಯ ಕೊರತೆ, ಶಿಥಿಲವಾದ ಕಟ್ಟಡಗಳಿಂದಾಗಿ ಶೂನ್ಯ ದಾಖಲಾತಿ ಉಂಟಾಗಿ ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 13 ಸರ್ಕಾರಿ ಶಾಲೆಗಳಿಗೆ ಬೀಗ ಹಾಕಿದ್ದು, ಇದರಲ್ಲಿ ಉರ್ದು ಮಾಧ್ಯಮದ ಶಾಲೆಯೂ ಸೇರಿದೆ.

ತಮಿಳುನಾಡು ಹಾಗೂ ಕೇರಳ ಎರಡು ಗಡಿಯನ್ನು ಹಂಚಿಕೊಂಡಿರುವ ಚಾಮರಾಜನಗರ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳಿಗೆ ಸಿಗಬೇಕಾದ ಉತ್ತೇಜನ ಸಿಗದಿರುವುದರಿಂದ ಈ ಪರಿಸ್ಥಿತಿ ಉಂಟಾಗಿದೆ. ಕೊರೊನಾ ಲಾಕ್ಡೌನ್ ವೇಳೆ ಖಾಸಗಿ ಶಾಲೆಗಳಿಗೆ ಹೆಚ್ಚು ಶುಲ್ಕ ಭರಿಸಲಾಗದೆ ಖಾಸಗಿ ಶಾಲೆಗಳಿಂದ ದಾಖಲೆ ಮಟ್ಟದಲ್ಲಿ ಮಕ್ಕಳು ಸರ್ಕಾರಿ ಶಾಲೆಗಳಿಗೆ ಸೇರಿದ್ದರು. ಈಗ ಪರಿಸ್ಥಿತಿ ವ್ಯತಿರಿಕ್ತವಾಗಿದ್ದು ಸರ್ಕಾರಿ ಶಾಲೆಗಳ ಮೂಲಸೌಕರ್ಯ ಕೊರತೆಯಿಂದ ಬೇಸತ್ತು 13 ಶಾಲೆಗಳಲ್ಲಿ ಶೂನ್ಯ ದಾಖಲಾತಿ ಆಗಿದೆ.
ಇನ್ನು, ಈ ಸಂಬಂಧ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್ ಪ್ರತಿಕ್ರಿಯೆ ನೀಡಿದ್ದು, 'ಶೂನ್ಯ ದಾಖಲಾತಿ ಆಗಿರುವುದರಿಂದ 13 ಸರ್ಕಾರಿ ಶಾಲೆಗಳು ಬಂದ್ ಆಗಿದೆ. ಸಿಆರ್ಎಸ್ ಅನುದಾನ ಬಳಸಿಕೊಂಡು ಶಾಲಾಭಿವೃದ್ಧಿ ಜೊತೆಗೆ ಒಂದೊಂದು ಶಾಲೆಯನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ' ಎಂದು ತಿಳಿಸಿದ್ದಾರೆ.
ರಾಜ್ಯದ್ಯಂತ ಸರ್ಕಾರಿ ಶಾಲೆ ಉಳಿಸುವ ಬಗ್ಗೆ ಹೋರಾಟಗಳು ನಡೆಯುತ್ತಲೇ ಇದೆ. ಆದರೂ ಕೂಡ ವಿವಿಧ ಜಿಲ್ಲೆಗಳಲ್ಲಿ ಹತ್ತಾರು ಸರ್ಕಾರಿ ಶಾಲೆಗಳು ವರ್ಷದಿಂದ ವರ್ಷಕ್ಕೆ ಬಾಗಿಲು ಮುಚ್ಚುತ್ತಿದ್ದು ಈ ವಿಚಾರವನ್ನು ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಗಂಭೀರವಾಗಿ ಪರಿಗಣಿಸಬೇಕಿದೆ.
ಇದೀಗ ತಮಿಳುನಾಡು ಹಾಗೂ ಕೇರಳ ಎರಡು ಗಡಿಯನ್ನು ಹಂಚಿಕೊಂಡಿರುವ ಚಾಮರಾಜನಗರ ಜಿಲ್ಲೆಯಲ್ಲಿ ಸಾಲು ಸಾಲು ಸರ್ಕಾರಿ ಶಾಲೆಗಳಿಗೆ ಬೀಗ ಹಾಕಲಾಗಿದೆ. ಈ ಕೂಡಲೇ ಶಿಕ್ಷಣ ಸಚಿವರು ಈ ಬಗ್ಗೆ ಗಮನ ಹರಿಸಿ ಶಾಲೆಗಳಿಗೆ ಅಗತ್ಯ ಇರುವ ಮೂಲಭೂತ ಸೌಕರ್ಯವನ್ನು ಒದಗಿಸಬೇಕಾಗಿದೆ. ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ನೀಡಿ ಸರ್ಕಾರ ಶಾಲೆಗಳನ್ನು ಅಭಿವೃದ್ಧಿಗೊಳಿಸಿ ಸ್ಥಳೀಯ ವಿದ್ಯಾರ್ಥಿಗಳು ಶಾಲೆಗಳತ್ತ ಬರುವಂತ ಮಾಡಬೇಕು ಎನ್ನುವುದು ಸ್ಥಳೀಯರ ಆಗ್ರಹವಾಗಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications