ಬಂಡೀಪುರದ ಬೆಂಕಿ ನಂದಿಸಲು ಬಂತು 2 ಸೇನಾ ಹೆಲಿಕಾಪ್ಟರ್
ಚಾಮರಾಜನಗರ, ಫೆಬ್ರವರಿ 25: ಬಂಡೀಪುರದ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ ಸಂಭವಿಸಿದ ಭಾರೀ ಕಾಡ್ಗಿಚ್ಚಿಗೆ ಸಾವಿರಾರು ಹೆಕ್ಟೇರ್ ಅರಣ್ಯ ನಾಶವಾಗಿದ್ದು, ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ಸೇನಾ ಹೆಲಿಕಾಪ್ಟರ್ ಬಳಕೆ ಮಾಡಲಾಗುತ್ತಿದೆ.
ಎಚ್ ಡಿ ಕೋಟೆಯ ಬೀರವಾಳಿಯ ನುಗು ಜಲಾಶಯದಿಂದ ನೀರು ಬಳಕೆ ಮಾಡಿಕೊಂಡು ಬೆಂಕಿಯ ಜ್ವಾಲೆಯನ್ನು ತಹಬದಿಗೆ ತರಲು 4 ಸೇನಾ ಹೆಲಿಕಾಪ್ಟರ್ ಇದ್ದು, ಸದ್ಯ 2 ಹೆಲಿಕಾಪ್ಟರ್ ಗಳು ಕಾರ್ಯ ನಿರ್ವಹಿಸುತ್ತಿವೆ.
ಜಲಾಶಯದ ಮೂಲಕ ಹೆಲಿಕಾಪ್ಟರ್ ನಲ್ಲಿ ನೀರು ತಂದು ಹೊತ್ತಿ ಉರಿಯುತ್ತಿರುವ ಜಾಗಕ್ಕೆ ಸಿಂಪಡಿಸುವ ಮೂಲಕ ಅಗ್ನಿಯನ್ನು ನಿಯಂತ್ರಣಕ್ಕೆ ತರಲು ಇದು ಅನುಕೂಲಕರವಾಗಲಿದೆ. ರೆಕ್ಕಿ ತಂತ್ರಜ್ಞಾನವನ್ನು ಬಳಸಿ ಹೆಲಿಕಾಪ್ಟರ್ ಗಳನ್ನು ನುಗು ಜಲಾಶಯದಿಂದ ನೀರನ್ನು ಲಿಫ್ಟ್ ಮಾಡಿ ಬೆಂಕಿ ಹೊತ್ತಿಕೊಂಡಿರುವ ಅರಣ್ಯ ಪ್ರದೇಶಗಳಲ್ಲಿ ನೀರನ್ನು ಸಿಂಪಡಿಸುವ ಕೆಲಸ ಇದಾಗಿದೆ.
ಇತ್ತ ಬೆಂಕಿ ನಂದಿಸುವವರೆಗೆ ಅರಣ್ಯಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಹೊತ್ತಿ ಉರಿದ ಬಂಡೀಪುರ: ಬೆಂಕಿಯಲ್ಲಿ ಬೆಂದ ಪ್ರಾಣಿಗಳು, 2500 ಎಕರೆ ಅರಣ್ಯ ಪ್ರದೇಶ ನಾಶ

ಜಲಾಶಯದಿಂದ ನೀರು ತುಂಬಿಸಿಕೊಳ್ಳುತ್ತಿರುವ ಹೆಲಿಕಾಪ್ಟರ್ಗಳು ಕಾಡ್ಗಿಚ್ಚು ಉಂಟಾಗಿರುವ ಪ್ರದೇಶಕ್ಕೆ ನುಗ್ಗುತ್ತಿವೆ. ಸದ್ಯ ಬೆರಂಬಾಡಿಯ ಕರಡಿ ಕಲ್ಲು ಗುಡ್ಡದಲ್ಲಿ ಬೆಂಕಿ ನಂದಿಸುತ್ತಿವೆ. ಇದರಿಂದ ಕಾಡ್ಗಿಚ್ಚಿನ ಬೆಂಕಿಯನ್ನು ಸಂಪೂರ್ಣವಾಗಿ ಅಲ್ಲದಿದ್ದರೂ ಕೆಲ ಮಟ್ಟಿಗೆ ತಹಬದಿಗೆ ತರಬಹುದಾಗಿದೆ.
ಇನ್ನು ಬೆಂಕಿ ಜ್ವಾಲೆಯ ಕುರಿತು ಮಾಹಿತಿ ನೀಡಿದ ಮುಖ್ಯ ಅರಣ್ಯಾಧಿಕಾರಿ ಪುನಾಟಿ ಶ್ರೀಧರ್, ನಮ್ಮ ಮೊದಲ ಆದ್ಯತೆ ಬೆಂಕಿ ನಂದಿಸುವುದು ಹಾಗೇ ಕೆಲಸ ಮಾಡುತ್ತಿದ್ದೇವೆ. ನಮ್ಮ ಸಿಬ್ಬಂದಿ ಬೇಕಾದ ಅಗ್ನಿಶಾಮಕ ವಸ್ತುಗಳನ್ನ ಬಳಸಿ ಬೆಂಕಿ ನಂದಿಸುತ್ತಿದ್ದಾರೆ.
ಇನ್ನು ಎರಡು-ಮೂರು ದಿನಗಳಿಂದ ಸಫಾರಿ ನಿಲ್ಲಿಸಿದ್ದೇವೆ. ಬೆಂಕಿ ನಂದಿಸಲು ಸಫಾರಿ ವಾಹನಗಳು ನಮ್ಮ ಸಿಬ್ಬಂದಿಗೆ ಬೇಕಾಗಿರುವ ಹಿನ್ನೆಲೆಯಲ್ಲಿ ಸಫಾರಿ ನಿಲ್ಲಿಸಿದ್ದೇವೆ. ಸಫಾರಿ ಅರಣ್ಯ ಭಾಗದಲ್ಲಿ ಯಾವುದೇ ಬೆಂಕಿ ಕಂಡು ಬಂದಿಲ್ಲ ಎಂದು ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications