ಭೂ ಸಮಾಧಿಯಾದ ಚಾಮರಾಜನಗರದ ಇಬ್ಬರು ಕಾರ್ಮಿಕರು
ಚಾಮರಾಜನಗರ, ಆಗಸ್ಟ್ 25: ಜಮೀನಿನಲ್ಲಿ ಮರಳು ತೆಗೆದು ಸಂಗ್ರಹಿಸಿಡುವ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಮಣ್ಣು ಕುಸಿದು ಬಿದ್ದ ಪರಿಣಾಮ ಕಾರ್ಮಿಕರಿಬ್ಬರು ಭೂಸಮಾಧಿಯಾದ ಘಟನೆ ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿ ಹೋಬಳಿಯ ಕೆಂಪನಪುರ ಗ್ರಾಮದಲ್ಲಿ ನಡೆದಿದೆ.
ಕೆಂಪನಪುರ ಗ್ರಾಮದ ನಿವಾಸಿಗಳಾದ ನಾಗರಾಜು(25) ಮತ್ತು ಸಿದ್ದೇಶ್ (20) ಮಣ್ಣು ಕುಸಿದ ಪರಿಣಾಮ ದುರಂತ ಸಾವನ್ನಪ್ಪಿದವರು. ಇವರು ಗ್ರಾಮದ ರಮೇಶ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಮಣ್ಣನ್ನು ಬಗೆದು ಮರಳನ್ನು ತೆಗೆದು ಅದನ್ನು ಸಂಗ್ರಹಿಸಿಡುವ ಕಾರ್ಯದಲ್ಲಿ ನಿರತರಾಗಿದ್ದರು ಎನ್ನಲಾಗಿದೆ.
ಸುರಂಗ ಕೊರೆದು ಅದರೊಳಗಿನಿಂದ ಮರಳು ತೆಗೆಯುವ ಕೆಲಸ ಮಾಡುತ್ತಿದ್ದ ವೇಳೆ ಅವರ ಅರಿವಿಗೆ ಬರದಂತೆ ಮಣ್ಣು ಕುಸಿದಿದೆ. ಇದರಿಂದ ಮಣ್ಣಿನಡಿಗೆ ಸಿಲುಕಿದ ಇಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಸಂತೆಮರಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಪೊಲೀಸರು ಸ್ಥಳಕ್ಕೆ ಬಂದಿದ್ದು ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರ ಮೃತದೇಹವನ್ನು ಹೊರ ತೆಗೆದಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಶವಗಳನ್ನು ವಾರಸುದಾರರಿಗೆ ನೀಡಿದ್ದಾರೆ. ಈ ಸಂಬಂಧ ಸಂತೆಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದೀಗ ಮರಳಿಗೆ ಬೇಡಿಕೆಯಿರುವ ಕಾರಣ ಅಕ್ರಮ ಮರಳು ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದು, ಕೆಲವರು ತಮ್ಮ ಜಮೀನಿನಿಂದಲೇ ಮರಳನ್ನು ತೆಗೆದು ಮಾರಾಟ ಮಾಡುವ ಕೆಲಸದಲ್ಲಿ ನಿರತರಾಗಿದ್ದು, ಕೂಲಿಯ ಆಸೆಯಿಂದ ತೆರಳುವ ಕಾರ್ಮಿಕರು ತಮ್ಮ ಜೀವವನ್ನೇ ಒತ್ತೆಯಿಟ್ಟು ಕೆಲಸ ಮಾಡುತ್ತಿದ್ದು, ಕೆಲವೊಮ್ಮೆ ಗ್ರಹಚಾರ ಕೆಟ್ಟಾಗ ಜೀವಂತ ಸಮಾಧಿಯಾಗ ಬೇಕಾಗುತ್ತದೆ. ಇನ್ನಾದರೂ ಸಂಬಂಧಿಸಿದವರು ಇತ್ತ ಗಮನಹರಿಸಿ ಅಕ್ರಮ ಮರಳು ಸಂಗ್ರಹಣೆ ಮತ್ತು ಜಮೀನಿನಲ್ಲಿ ಅಕ್ರಮವಾಗಿ ಮರಳು ತೆಗೆಯುವ ಕೆಲಸಕ್ಕೆ ತಡೆಯೊಡ್ಡ ಬೇಕಿದೆ. ಇಲ್ಲದೆ ಹೋದರೆ ಇನ್ನಷ್ಟು ಮಂದಿ ಈ ಕಾರ್ಯದಲ್ಲಿ ತೊಡಗಿಸಿಕೊಂಡು ಪ್ರಾಣ ಕಳೆದುಕೊಳ್ಳುವ ಅಪಾಯವಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications