ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 20 ವರ್ಷದ ಸಾಕಾನೆ ಸಾವು
ಚಾಮರಾಜನಗರ, ಸೆಪ್ಟೆಂಬರ್ 23: ಅನಾರೋಗ್ಯದಿಂದ ಸಾಕಾನೆಯೊಂದು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಂಪುರ ಆನೆ ಶಿಬಿರದಲ್ಲಿ ನಡೆದಿದೆ.
ಗಣೇಶ(20) ಎಂಬುದು ಮೃತಪಟ್ಟಿರುವ ಗಂಡಾನೆ. ಕಳೆದ ವಾರದ ಹಿಂದೆ ಗಂಟಲಿನ ಅನ್ನನಾಳದ ತೊಂದರೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆ ಉಸಿರು ಬಿಟ್ಟಿದೆ. ಕಲ್ಕರೆ ವಲಯದ ರಾಂಪುರ ಆನೆ ಶಿಬಿರದಲ್ಲಿ ಅನಾರೋಗ್ಯದಿಂದ ಆನೆ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ರಾಂಪುರ ಆನೆ ಶಿಬಿರದಿಂದ ಬಂಡೀಪುರ ಕ್ಯಾಂಪಸ್ಗೆ ಕರೆತಂದಿದ್ದರು.
ಬಂಡೀಪುರ ಕ್ಯಾಂಪಸ್ನಲ್ಲಿ ಕಳೆದ ಐದು ದಿನಗಳಿಂದ ಚಿಕಿತ್ಸೆ ಕೊಟ್ಟರು ಆನೆ ಸ್ಪಂದಿಸದ ಕಾರಣ ಸಾವನ್ನಪ್ಪಿದೆ. 20 ವರ್ಷ ವಯಸ್ಸಿನ ಗಣೇಶ ಹುಲಿ ಸೆರೆ ಸೇರಿದಂತೆ ಹಲವು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ. ಸಾಕಾನೆ ಗಣೇಶನ ಅಂತ್ಯಕ್ರಿಯೆ ಬಂಡೀಪುರ ವಲಯದಲ್ಲಿ ನಡೆದಿದೆ.

ಪ್ಲಾಸ್ಟಿಕ್ ತಿಂದ ಆನೆ!
ಪ್ರವಾಸಿಗರ ಬೇಜವಾಬ್ದಾರಿಯಿಂದಾಗಿ ಕಾಡಾನೆಯೊಂದು ಪ್ಲಾಸ್ಟಿಕ್ ಕವರ್ ಅನ್ನು ತಿನ್ನುತ್ತಿರುವ ದೃಶ್ಯ ಬಂಡೀಪುರ ಮದುಮಲೈ ಅರಣ್ಯ ನಡುವಿನ ರಸ್ತೆಯ ಪಕ್ಕದಲ್ಲಿ ಕಂಡು ಬಂದಿದೆ. ಅಭಯಾರಣ್ಯಕ್ಕೆ ಭೇಟಿ ನೀಡಿದ್ದ ಪ್ರವಾಸಿಗರು ನಿಷೇಧಿತ ಪ್ಲಾಸ್ಟಿಕ್ ಕವರ್ ಅನ್ನು ಎಸೆದು ಹೋಗಿದ್ದಾರೆ. ಅದೇ ಪ್ಲಾಸ್ಟಿಕ್ ಕವರ್ ಆಹಾರವೆಂದು ತಿಳಿದ ಆನೆಯೊಂದು ಸೊಂಡಿಲಿನಿಂದ ತೆಗೆದುಕೊಂಡ ಬಳಿಕ ಬಾಯಿಗೆ ಹಾಕಿಕೊಂಡಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು. ಈ ಕುರಿತು ಪ್ರಾಣಿ ಪ್ರಿಯರು ಆತಂಕ ವ್ಯಕ್ತಪಡಿಸಿದ್ದಾರೆ.
ಅಭಯಾರಣ್ಯಗಳಿಗೆ ಭೇಟಿ ನೀಡುವ ಪ್ರವಾಸಿಗರು ಹುಲಿ ಸಂರಕ್ಷಿತ ಪ್ರದೇಶದಲ್ಲಿ ವಾಹನ ನಿಲ್ಲಿಸಬಾರದು, ಏನನ್ನೂ ಎಸೆಯಬಾರದು ಎಂಬ ನಿಯಮವಿದ್ದರೂ ಎಚ್ಚೆತ್ತುಕೊಳ್ಳದೇ ಈ ರೀತಿಯಲ್ಲಿ ಪ್ರಾಣಿಗಳ ಜೀವಕ್ಕೆ ಕುತ್ತು ತರುತ್ತಿದ್ದಾರೆ ಎಂದು ಸಾಮಾಜಿಕ ಜಾಲಾತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ತ್ಯಾವರ ಕೊಪ್ಪದ ಹುಲಿ-ಸಿಂಹಧಾಮದಲ್ಲಿ ಹುಲಿ ಸಾವು
ಶಿವಮೊಗ್ಗ ಜಿಲ್ಲೆಯ ತ್ಯಾವರಕೊಪ್ಪದ ಹುಲಿ-ಸಿಂಹಧಾಮದಲ್ಲಿ ಅತ್ಯಂತ ಹಿರಿಯ ಹುಲಿ ಎಂಬ ಶ್ರೇಯಕ್ಕೆ ಪಾತ್ರವಾಗಿದ್ದ 20 ವರ್ಷದ ಹನುಮ ಎಂಬ ಹುಲಿ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದೆ.
ಹನುಮ 2002ರಲ್ಲಿ ಚಾಮುಂಡಿ-ಮಲೇಶಂಕರ ಹುಲಿಗಳ ಸಾಂಗತ್ಯದಿಂದ ಜನಿಸಿದ್ದ. ಪ್ರವಾಸಿಗರ ಆಕರ್ಷಣೆಗೆ ಪಾತ್ರವಾಗಿದ್ದ ಹನುಮ ವನ್ಯಧಾಮದಲ್ಲಿ ದೀರ್ಘಾವಧಿಯಲ್ಲಿದ್ದ ಹುಲೆ ಎಂಬ ಶ್ರೇಯಕ್ಕೆ ಪಾತ್ರನಾಗಿದ್ದ. ಗುರುವಾರ ಹುಲಿ ಹನುಮನ ಮರೋತ್ತರ ಪರೀಕ್ಷೆ ನಡೆಸಿ ವನ್ಯಧಾಮದಲ್ಲಿಯೇ ಅಂತ್ಯಕ್ರಿಯೆ ನಡೆಸಲಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications