ಗುಂಡ್ಲುಪೇಟೆ: ಮನೆಗಳ ಬಾಗಿಲು ಲಾಕ್ ಮಾಡಿ 21 ಕುರಿಗಳನ್ನು ಕದ್ದ ಖದೀಮರು.!
ಚಾಮರಾಜನಗರ, ಫೆಬ್ರವರಿ, 08: ಮನೆಗಳ ಬಾಗಿಲಿಗೆ ಚಿಲಕ ಹಾಕಿ 21 ಕುರಿಗಳನ್ನು ಕದ್ದೊಯ್ದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಮಂಚಹಳ್ಳಿ ಗ್ರಾಮದ ಬಸವನಾಯಕ ಎಂಬವರಿಗೆ ಸೇರಿದ ಕುರಿಗಳನ್ನು ಗುರುವಾರ (ಫೆಬ್ರವರಿ 08) ಮುಂಜಾನೆ 3ರ ಹೊತ್ತಿಗೆ ಕದ್ದಿದ್ದಾರೆ ಎನ್ನಲಾಗಿದೆ. ಬಸವನಾಯಕ ಎಂಬವರು ಒಟ್ಟು 25 ಕುರಿಗಳನ್ನು ಸಾಕಿದ್ದರು.

ಕೊಟ್ಟಿಗೆಯಲ್ಲಿ ಬಿಟ್ಟಿದ್ದ ವೇಳೆ ಕಳ್ಳರು ಬಸವನಾಯಕ ಮನೆ ಸೇರಿದಂತೆ ಅಕ್ಕಪಕ್ಕದ ಮನೆಗಳಿಗೆ ಚಿಲಕ ಹಾಕಿ ಸಣ್ಣ ಕುರಿ-ಮರಿಗಳನ್ನು ಬಿಟ್ಟು ಮಾರಾಟಕ್ಕೆ ಯೋಗ್ಯವಾಗಿದ್ದ ಕುರಿಗಳನ್ನು ಹೊತ್ತೊಯ್ದಿದ್ದಾರೆ. ಲಕ್ಷಾಂತರ ರೂಪಾಯಿ ಆದಾಯದ ನಿರೀಕ್ಷೆಯಲ್ಲಿದ್ದ ಬಸವನಾಯಕ ಸದ್ಯ ಕಂಗಲಾಗಿದ್ದಾರೆ. ಇನ್ನು ಮಂಚಹಳ್ಳಿ ಗ್ರಾಮಕ್ಕೆ ಬೇಗೂರು ಪೊಲೀಸರ ಭೇಟಿ ನೀಡಿ ಘಟನೆ ಕುರಿತು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕೆಟ್ಟು ನಿಂತ ಲಾರಿ ಮೇಲೆ ಆನೆ ದಾಳಿ: ಕೆಟ್ಟು ನಿಂತಿದ್ದ ಲಾರಿಯೊಂದರ ಮೇಲೆ ಆನೆ ದಾಳಿ ಮಾಡಿ ಟಾರ್ಪಲ್ ಕಿತ್ತೆಸೆದು ರಂಪಾಟ ಮಾಡಿರುವ ಘಟನೆ ಚಾಮರಾಜನಗರ ಗಡಿಭಾಗವಾದ ತಮಿಳುನಾಡಿನ ಆಸನೂರಿನಲ್ಲಿ ನಡೆದಿದೆ.
ಆಹಾರ ಅರಸಿ ಕಾಡಿನಿಂದ ರಸ್ತೆಗಿಳಿದ ಒಂಟಿ ಸಲಗವೊಂದು ಕಬ್ಬು ಹಾಗೂ ತರಕಾರಿ ತುಂಬಿದ ವಾಹನಗಳನ್ನು ತಡಕಾಡುವಾಗ ಕೆಟ್ಟು ನಿಂತ ಲಾರಿ ಮೇಲೆ ದಾಳಿ ಮಾಡಿದೆ. ಲಾರಿಗೆ ಹೊದಿಸಿದ್ದ ಟಾರ್ಪಲ್ ಅನ್ನು ಕಿತ್ತೆಸೆದು ದಾಂಧಲೆ ಮಾಡಿರುವುದು ಲಾರಿ ಚಾಲಕನ ಮೊಬೈಲ್ನಲ್ಲಿ ದೃಶ್ಯ ಸೆರೆಯಾಗಿದೆ.
ಇನ್ನು, ಆನೆ ರಂಪಾಟದಿಂದ ಬೆಳ್ಳಂಬೆಳಗ್ಗೆ ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅರ್ಧ ತಾಸಿಗೂ ಅಧಿಕ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications