ಅತ್ಯಧಿಕ ಬಿಯರ್ ಮಾರಾಟದಲ್ಲಿ ರಾಜ್ಯಕ್ಕೆ ಚಾಮರಾಜನಗರ ಜಿಲ್ಲೆ 2ನೇ ಸ್ಥಾನ, ನಂಬರ್ 1 ಯಾವ್ದು ಹಾಗೂ ಸೂಕ್ತ ಕಾರಣ ಏನು?
ಚಾಮರಾಜನಗರ, ಫೆಬ್ರವರಿ, 05: ನಗರ ಪ್ರದೇಶಗಳಲ್ಲಿ ಮಾತ್ರ ಬಿಯರ್ ಸೇವನೆ ಹೆಚ್ಚು ಎನ್ನುವುದು ಈಗ ಬದಲಾಗಿದ್ದು, ಚಾಮರಾಜನಗರದ ಗುಂಡುಪ್ರಿಯರು ಈಗ ಬಿಯರ್ನತ್ತ ಹೊರಳಿದ್ದಾರೆ. ಹಾಗೆಯೇ ರಾಜ್ಯದಲ್ಲಿ ಅತ್ಯಧಿಕ ಬಿಯರ್ ಮಾರಾಟದಲ್ಲಿ ಚಾಮರಾಜನಗರ 2ನೇ ಸ್ಥಾನದಲ್ಲಿದೆ. ಹಾಗಾದರೆ 1ನೇ ಸ್ಥಾನ ಯಾವುದಕ್ಕೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಅಬಕಾರಿ ಇಲಾಖೆ ಕೊಟ್ಟಿರುವ ಅಂಕಿಅಂಶಗಳ ಪ್ರಕಾರ 2023 ಡಿಸೆಂಬರ್ ಹಾಗೂ ಕಳೆದ ಜನವರಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ ಬಿಯರ್ ಮಾರಾಟಗೊಂಡ ಜಿಲ್ಲೆಗಳಲ್ಲಿ ಚಾಮರಾಜನಗರ ಎರಡನೇ ಸ್ಥಾನದಲ್ಲಿದ್ದು, ಮೊದಲ ಸ್ಥಾನದಲ್ಲು ತುಮಕೂರಿದೆ. ಬೇಸಿಗೆ ಸಂದರ್ಭದಲ್ಲಿ ಮಾತ್ರ ಬಿಯರ್ ಮಾರಾಟ ಚೇತರಿಕೆ ಕಾಣುತ್ತಿದ್ದ ಚಾಮರಾಜನಗರದಲ್ಲಿ ಇದೀಗ ಬಿಯರ್ ಮಾರಾಟವೇ ಅಧಿಕವಾಗಿದ್ದು, ಭಾರತೀಯ ಮದ್ಯಕ್ಕೆ ಹೋಲಿಸಿದರೇ ಬಿಯರ್ ಮಾರಾಟ ವೇಗ ಪಡೆದುಕೊಂಡಿದೆ.

ಎಷ್ಟು ಮಾರಾಟ? ಹಾಗೂ ನಿರೀಕ್ಷಿತ ಆದಾಯ ಎಷ್ಟು?
ಚಾಮರಾಜನಗರ ಜಿಲ್ಲೆಯಲ್ಲಿ ಚಾಮರಾಜನಗರ, ಯಳಂದೂರು, ಗುಂಡ್ಲುಪೇಟೆ, ಕೊಳ್ಳೇಗಾಲ ಎಂಬ ಒಟ್ಟು 4 ವಲಯಗಳಿದ್ದು, 2022-23ರಲ್ಲಿ 2,63,756 ಲಕ್ಷ ಕೇಸ್ ಬಿಯರ್ ಮಾರಾಟ ಆಗಿತ್ತು. 2023-24ರಲ್ಲಿ ಇದು 3,42,414 ಕೇಸ್ ಮಾರಾಟ ಆಗಿದ್ದು ಶೇಕಡಾ 30ರಷ್ಟು ಬಿಯರ್ ಮಾರಾಟ ಅಧಿಕವಾಗಿದೆ. ಅಂದರೆ, 78,658 ಲಕ್ಷ ಕೇಸ್ ಹೆಚ್ಚು ಮಾರಾಟ ಆಗಿದೆ ಎಂದು ತಿಳಿದುಬಂದಿದೆ.
ಐಎಂಎಲ್ (ಭಾರತೀಯ ಮದ್ಯ) ಮಾರಾಟವು ಅಧಿಕವಾಗಿದ್ದು, 2022-23ರಲ್ಲಿ 8,46,255 ಕೇಸ್ ಮಾರಾಟವಾಗಿದ್ದರೆ, 8,73,669 ಕೇಸ್ ಮಾರಾಟವಾಗಿದ್ದು ಶೇಕಡಾ 3.24ರಷ್ಟು ಮದ್ಯ ಮಾರಾಟ ಅಧಿಕವಾಗಿದೆ.
ಅತ್ಯಧಿಕ ಬಿಯರ್ ಮಾರಾಟಕ್ಕೆ ಕಾರಣ ಏನು?: ಚಾಮರಾಜನಗರದಲ್ಲಿ ಕೂಲಿ ಹಾಗೂ ಕೆಳ ಮಧ್ಯಮ ವರ್ಗದ ಜನರೇ ಹೆಚ್ಚು ಮದ್ಯ ಸೇವನೆ ಮಾಡಲಿದ್ದು ಕೊಳ್ಳುವ ಶಕ್ತಿ ಕಡಿಮೆ. ಈ ಹಿನ್ನೆಲೆಯಲ್ಲಿ, ಮದ್ಯಕ್ಕೆ ಹೋಲಿಸಿದರೇ ಬಿಯರ್ ಬೆಲೆ ಕಡಿಮೆ ಇದ್ದು, ಬಿಯರ್ ಮತ್ತು ಸ್ವಲ್ಪ ಅಗ್ಗದ ಮದ್ಯ ಎರಡನ್ನೂ ಸೇವಿಸುವ ಪ್ರವೃತ್ತಿ ಹೆಚ್ಚಾಗಿದೆ. ಆದ್ದರಿಂದ ಬಿಯರ್ ಮಾರಾಟ ಹೆಚ್ಚಾಗಿರಬಹುದು ಎಂದು ಚಾಮರಾಜನಗರ ಅಬಕಾರಿ ಆಯುಕ್ತ ನಾಗಶಯನ ತಿಳಿಸಿದ್ದಾರೆ. ಇನ್ನು, ನಿರೀಕ್ಷಿತ ಆದಾಯವು ಏರಿಕೆ ಕಂಡಿರುವುದಾಗಿ ಆಯುಕ್ತರು ಮಾಹಿತಿ ಕೊಟ್ಟಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications