ಬರದಲ್ಲೂ ಬಂಡೀಪುರದ ಮೂರು ಕೆರೆಗಳಿಗೆ ನೀರು ಬಂತು!
ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಪ್ರಾಣಿಗಳಿಗೆ ಕುಡಿಯಲು ಅನುಕೂಲವಾಗುವಂತೆ ಕೊಳವೆ ಬಾವಿ ಕೊರೆಯಿಸಿ ಸೋಲಾರ್ ಮೂಲಕ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಸಮಾರೋಪಾದಿಯಲ್ಲಿ ಸಾಗಿದೆ.
ಚಾಮರಾಜನಗರ, ಮೇ 11: ಒಂದೆಡೆ ಬರದಿಂದ ತತ್ತರಿಸಿ ನೀರಿನ ಮೂಲಗಳೆಲ್ಲ ಬತ್ತಿಹೋಗಿದ್ದರೆ, ಮತ್ತೊಂದೆಡೆ ಕಿಡಿಗೇಡಿಗಳು ಬೆಂಕಿಹಚ್ಚಿದ ಪರಿಣಾಮ ಗುಂಡ್ಲುಪೇಟೆ ಬಳಿಯ ಬಂಡೀಪುರ ಉದ್ಯಾನದ ಅರಣ್ಯ ಸುಟ್ಟುಕರಕಲಾಗಿತ್ತು. ಇದರಿಂದ ಪ್ರಾಣಿಗಳು ಬೇರೆಡೆಗೆ ಪಲಾಯನ ಮಾಡಿದ್ದವು. ಆದರೆ ಇತ್ತೀಚೆಗೆ ಅಲ್ಲಲ್ಲಿ ಮಳೆಯಾದ್ದರಿಂದ ಮರಳಿ ಬರುತ್ತಿವೆ.
ಇನ್ನೊಂದೆಡೆ ಪ್ರಾಣಿಗಳಿಗೆ ಕುಡಿಯಲು ಅನುಕೂಲವಾಗುವಂತೆ ಕೊಳವೆ ಬಾವಿ ಕೊರೆಯಿಸಿ ಸೋಲಾರ್ ಮೂಲಕ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಇಲ್ಲಿ ಸಮಾರೋಪಾದಿಯಲ್ಲಿ ಸಾಗಿದೆ.

ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಈ ಬಾರಿ ನೀರಿಲ್ಲದೆ ವನ್ಯಪ್ರಾಣಿಗಳು ಪರದಾಡುವಂತಾಗಿತ್ತು. ಹೀಗಾಗಿ ಅರಣ್ಯ ಇಲಾಖೆ ಖಾಸಗಿ ಸಂಸ್ಥೆಗಳು ಸೇರಿದಂತೆ ದಾನಿಗಳ ಸಹಾಯ ಪಡೆದು ಕೊಳವೆ ಬಾವಿಯನ್ನು ಕೊರೆಯಿಸಿ ಅದರಿಂದ ನೀರನ್ನು ಸೋಲಾರ್ ಮೋಟಾರ್ ಮೂಲಕ ಕೆರೆಗಳಿಗೆ ತುಂಬಿಸುವ ಕಾಯಕಕ್ಕೆ ಮುಂದಾಗಿದೆ. ಈಗಾಗಲೇ ಮೂರು ಕೆರೆಗಳಿಗೆ ನೀರು ಬರುತ್ತಿದ್ದು ಪ್ರಾಣಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿವೆ.
ಈ ಬಾರಿಯಂತೂ ನೀರಿಲ್ಲದೆ ಹಾಹಾಕಾರ ಏರ್ಪಟ್ಟಿತ್ತು. ಪರಿಣಾಮ ಜಿಂಕೆ, ಹುಲಿ, ಆನೆ ಮೊದಲಾದ ಪ್ರಾಣಿಗಳು ನೀರನ್ನರಸಿ ಕಬಿನಿ ಜಲಾಶಯ, ತಮಿಳುನಾಡು, ಕೇರಳ ಕಡೆಗೆ ಹೋಗಿದ್ದವು. ಇನ್ನು ಕೆಲವು ಪ್ರಾಣಿಗಳು ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿ ನರಳಿದ್ದವು. ಇದೆಲ್ಲವನ್ನು ತಪ್ಪಿಸುವ ಸಲುವಾಗಿ ಅರಣ್ಯ ಇಲಾಖೆ ಓಂಕಾರ್ ವಲಯದ ಸೌತ್ ಕೆರೆ, ತಾರಮರದಕಟ್ಟೆ, ತವಳನೆರೆ ಹೊಸಕೆರೆ ವ್ಯಾಪ್ತಿಯಲ್ಲಿ ಕೊಳವೆ ಬಾವಿಯನ್ನು ಕೊರೆಯಿಸಿ, ಸೋಲಾರ್ ಮೋಟಾರು ಮೂಲಕ ನೀರನ್ನು ಕೆರೆಗೆ ನೀರು ತುಂಬಿಸುವ ಕೆಲಸ ಮಾಡುತ್ತಿದ್ದು ಅದರಲ್ಲಿ ಯಶಸ್ವಿಯಾಗಿದೆ.

ಸೌತ್ಕೆರೆ ಬಳಿಯ 8.5 ಲಕ್ಷ ರೂ. ವೆಚ್ಚದ ಈ ಯೋಜನೆಗೆ ವಲ್ರ್ಡ್ ವೈಲ್ಡ್ ಲೈಫ್ ಫೌಂಡೇಶನ್ ಸಂಸ್ಥೆಯು ಸೌರ ವಿದ್ಯುತ್ ಫಲಕಗಳು ಹಾಗೂ ಮೋಟಾರನ್ನು ಒದಗಿಸಿ ಸಹಕರಿಸಿದೆ. ಸುಮಾರು 800 ಅಡಿ ಆಳದ ಕೊಳವೆ ಬಾವಿ ಕೊರೆಯಿಸಲಾಗಿದ್ದು, 300 ಅಡಿ ಆಳದವರೆಗೆ ಪೈಪ್ ಅಳವಡಿಸಲಾಗಿದೆ. 18 ಸೌರ ಫಲಕಗಳು ತ್ರೀ ಫೇಸ್ ವಿದ್ಯುತ್ ಸರಬರಾಜು ಮಾಡುತ್ತಿವೆ. ಇದರಿಂದ 5 ಅಶ್ವ ಶಕ್ತಿಯ ಮೋಟಾರು ಕಾರ್ಯನಿರ್ವಹಿಸುತ್ತಿದ್ದು, ಬೇಸಿಗೆಯ ಸಂದರ್ಭದಲ್ಲಿ ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಸ್ವಯಂಚಾಲಿತವಾಗಿ ಕಾರ್ಯ ನಿರ್ವಹಿಸುತ್ತಾ ಕೆರೆಗೆ ನೀರು ತುಂಬಿಸುತ್ತಿದೆ.
ಇನ್ನೊಂದೆಡೆ ತಾರಮರಕಟ್ಟೆ ಬಳಿ ಅರಣ್ಯ ಇಲಾಖೆ 7 ಲಕ್ಷ ರೂ. ಅನುದಾನದಲ್ಲಿ ಸೋಲಾರ್ ಮೋಟಾರ್ ನಿರ್ಮಿಸಿ ನೀರು ತುಂಬಿಸುತ್ತಿದ್ದರೆ, ತವಳನೆರೆಹೊಸಕೆರೆ ಬಳಿ ವೈದ್ಯರೊಬ್ಬರು 7 ಲಕ್ಷ ರೂ ವೆಚ್ಚದಲ್ಲಿ ಉಚಿತವಾಗಿ ಕೊಳವೆಬಾವಿ ಕೊರೆಯಿಸಿ ಸೋಲಾರ್ ಮೋಟಾರ್ ಅಳವಡಿಸಿಕೊಟ್ಟಿದ್ದಾರೆ. ಇದರಿಂದಾಗಿ ಕೆರೆಗಳಿಗೆ ನೀರು ಹರಿದು ಬರತೊಡಗಿದೆ.
ಇನ್ನು ಕಾಡು ಪ್ರಾಣಿಗಳು ಸ್ಥಳಕ್ಕೆ ಬಂದು ಸೋಲಾರ್ ಫಲಕ ಮತ್ತು ಮೋಟಾರನ್ನು ನಾಶ ಮಾಡುವ ಸಾಧ್ಯತೆ ಇರುವುದರಿಂದಾಗಿ ಫಲಕ ಹಾಗೂ ಮೋಟಾರ್ ಅಳವಡಿಸಿರುವ ಸ್ಥಳದಲ್ಲಿ ಭಾರೀ ಕಂದಕ ಕೊರೆಯಿಸಲಾಗಿದ್ದು, ಮೋಟಾರನ್ನು ಕಬ್ಬಿಣದ ಹಲಗೆಗಳಿಂದ ಮುಚ್ಚಿ ಯಾವುದೇ ಪ್ರಾಣಿ ಸನಿಹಕ್ಕೆ ಸುಳಿಯದಂತೆ ಮಾಡಲಾಗಿದೆ.
ಸದ್ಯ ಅರಣ್ಯದ ಮೂರು ಕೆರೆಗಳ ಬಳಿ ಸೋಲಾರ್ ಮೋಟಾರನ್ನು ಅಳವಡಿಸಿದ್ದರಿಂದ ಪ್ರಾಣಿಗಳಿಗೆ ನೀರಿನ ಬವಣೆ ತಪ್ಪಿದಂತಾಗಿದೆ. ಈ ಬಾರಿ ಮುಂಗಾರಲ್ಲಿ ಉತ್ತಮ ಮಳೆಯಾದರೆ ಮುಂದಿನ ಬೇಸಿಗೆಯಲ್ಲಿ ಪ್ರಾಣಿಗಳ ನೀರಿನ ಬವಣೆ ತಪ್ಪಬಹುದೇನೋ!
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications