ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜನಗರ: ಮೂವರ ಕೊಲೆಯಲ್ಲಿ ಅಂತ್ಯವಾದ 2 ಕುಟುಂಬಗಳ ದ್ವೇಷ

By ಮೈಸೂರು ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಮೇ 27: ಎರಡು ಕುಟುಂಬಗಳ ವೈಯಕ್ತಿಕ ದ್ವೇಷದಿಂದಾಗಿ ಮಂಗಳವಾರ ರಾತ್ರಿ ನಡೆದ ಘರ್ಷಣೆಯಲ್ಲಿ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ಜಾಕೀರ್ ಹುಸೇನ್ ನಗರದ ಮೂವರು ಕೊಲೆಯಾಗಿದ್ದಾರೆ.

ಕೊಲೆ ಆದವರನ್ನು ಇದ್ರಿಸ್ (30), ಕೈಸರ್(30) ಮತ್ತು ಜಕ್ಕಾವುಲ್ಲಾ(35) ಎಂದು ಗುರುತಿಸಲಾಗಿದ್ದು, ಅಸ್ಲಾಂ ಮತ್ತು ಜಮೀರ್ ಸಂಗಡಿಗರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೆಲ ವರ್ಷಗಳಿಂದ ಈ ಎರಡು ಕುಟುಂಬದ ಮಧ್ಯೆ ವೈಯಕ್ತಿಕ ದ್ವೇಷ ಇತ್ತು ಎನ್ನಲಾಗಿದೆ.

ಚಾಮರಾಜನಗರಕ್ಕೆ ಬರಲು ತಮಿಳರು ಬಳಸುತ್ತಿದ್ದ ಕಳ್ಳದಾರಿ ಬಂದ್ಚಾಮರಾಜನಗರಕ್ಕೆ ಬರಲು ತಮಿಳರು ಬಳಸುತ್ತಿದ್ದ ಕಳ್ಳದಾರಿ ಬಂದ್

ನಾಲ್ಕು ವರ್ಷಗಳ ಹಿಂದೆ ಈಗ ಕೊಲೆಯಾಗಿರುವ ಇದ್ರಿಸ್, ಕೈಸರ್ ಹಾಗೂ ಜಕ್ಕಾವುಲ್ಲಾ ಕುಟುಂಬದವರು ಮಾರಕಾಸ್ತ್ರಗಳಿಂದ ಅಸ್ಲಾಂ ಮತ್ತು ಜಮೀರ್ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು. ಈ ಸಂಬಂಧ ಗುಂಡ್ಲುಪೇಟೆ ಜೆಎಂಎಫ್ ಸಿ ಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿತ್ತು.

3 of a Family Killed Over Family Dispute in Chamarajanagara

ಈ ಘಟನೆಯ ನಂತರ ಎರಡೂ ಕುಟುಂಬದ ನಡುವೆ ದ್ವೇಷ ಭುಗಿಲೆದ್ದಿತ್ತು. ಈ ಘಟನೆಗೆ ಪ್ರತೀಕಾರವಾಗಿ ಅಸ್ಲಾಂ ಕುಟುಂಬದವರು ಮಂಗಳವಾರ ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಮೂವರನ್ನು ಬಲಿ ತೆಗೆದುಕೊಂಡಿದ್ದಾರೆ.

ನಗರದ ಹುಸೇನ್ ಬಡಾವಣೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದ್ದು, ಪೊಲೀಸರು ಕಾವಲು ಕಾಯುತ್ತಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Three killed over two Family Clashed in Gundlupete Taluk, Chamarajanagara District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X